ಗೆಲ್ಲುವವರೆಗೆ ಯುದ್ಧ ಮುಂದುವರೆಯುತ್ತೆ, ಕದನ ವಿರಾಮ ಕುರಿತು ತನ್ನ ನಿಲುವು ಸ್ಪಷ್ಟಪಡಿಸಿದ ಇಸ್ರೇಲ್

ಕಳೆದ ಹಲವು ದಿನಗಳಿಂದ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿದ್ದು, ಇದುವರೆಗೆ ಒಂಬತ್ತು ಸಾವಿರ ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ದೇಶದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಗೆಲ್ಲುವವರೆಗೆ ಯುದ್ಧ ಮುಂದುವರೆಯುತ್ತೆ, ಕದನ ವಿರಾಮ ಕುರಿತು ತನ್ನ ನಿಲುವು ಸ್ಪಷ್ಟಪಡಿಸಿದ ಇಸ್ರೇಲ್
ಇಸ್ರೇಲ್
Image Credit source: The Economic Times

Updated on: Oct 31, 2023 | 8:19 AM

ಕಳೆದ ಹಲವು ದಿನಗಳಿಂದ ಇಸ್ರೇಲ್(Israel) ಮತ್ತು ಹಮಾಸ್(Hamas) ನಡುವೆ ಯುದ್ಧ ನಡೆಯುತ್ತಿದ್ದು, ಇದುವರೆಗೆ ಒಂಬತ್ತು ಸಾವಿರ ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು(Benjamin Netanyahu) ದೇಶದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ 9/11 ದಾಳಿಯಂತಹ ಕದನ ವಿರಾಮಕ್ಕೆ ಒಪ್ಪುವುದಿಲ್ಲ ಏಕೆಂದರೆ ಅದು ಶರಣಾಗತಿಯಂತಿದೆ ಎಂದಿದ್ದಾರೆ.
ಅಕ್ಟೋಬರ್ 7 ರಂದು ಪ್ರಾರಂಭವಾದ ಯುದ್ಧದಲ್ಲಿ ಇಸ್ರೇಲ್ ಕದನ ವಿರಾಮವನ್ನು ಘೋಷಿಸಲು ಸಾಧ್ಯವಿಲ್ಲ. ಕದನ ವಿರಾಮಕ್ಕೆ ಕರೆ ನೀಡುವುದು ಇಸ್ರೇಲ್‌ ಹಮಾಸ್​ಗೆ ಶರಣಾದಂತೆ ಭಾಸವಾಗುತ್ತದೆ ಎಂದಿದ್ದಾರೆ. ಭಯೋತ್ಪಾದನೆಗೆ ಶರಣಾದಂತೆ ಹಾಗಾಗಿ ಗೆಲ್ಲುವವರೆಗೆ ಯುದ್ಧ ಮುಂದುವರೆಸಲಾಗುವುದು ಎಂದರು.

ಜನರು ಭವಿಷ್ಯಕ್ಕಾಗಿ ಹೋರಾಡಲು ಸಿದ್ಧರಿದ್ದಾರೆಯೇ ಅಥವಾ ದಬ್ಬಾಳಿಕೆ ಮತ್ತು ಭಯೋತ್ಪಾದನೆಗೆ ಶರಣಾಗುತ್ತಾರೆಯೇ ಎಂದು ನಿರ್ಧರಿಸುವ ಸಮಯ ಇದೀಗ ಬಂದಿದೆ ಎಂದು ನೆತನ್ಯಾಹು ಹೇಳಿದರು.

ಅಕ್ಟೋಬರ್ 7 ರಂದು ಹಮಾಸ್ ಮೊದಲ ಬಾರಿಗೆ ನಮ್ಮ ಮೇಲೆ ದಾಳಿ ನಡೆಸಿತು, ಹಲವು ಮುಗ್ಧ ಜೀವಗಳನ್ನು ಹತ್ಯೆ ಮಾಡಿತ್ತು. ನಮ್ಮ ನಾಗರಿಕರ ರಕ್ಷಣೆ ಕೂಡ ನಮ್ಮ ಹೊಣೆ. ನಮಗೆ ಯುದ್ಧ ಬೇಡ. ಆದರೆ ನಾವು ಈ ಯುದ್ಧವನ್ನು ಗೆಲ್ಲುತ್ತೇವೆ ಎಂದರು.

ಮತ್ತಷ್ಟು ಓದಿ: ನುಡಿದಂತೆ ನಡೆದ ಇಸ್ರೇಲ್​​​: ಹಮಾಸ್​​​​ ಸುರಂಗದ ಮೇಲೆ ದಾಳಿ, 150 ಉಗ್ರರ ಹತ್ಯೆ

ಹಮಾಸ್ ಚಿಕ್ಕ ಮಕ್ಕಳನ್ನು ಅವರ ತಾಯಂದಿರಿಂದ ಕಸಿದುಕೊಂಡಿತು. ಹಮಾಸ್ ಉಗ್ರರು ಜನರನ್ನು ಜೀವಂತ ಸುಟ್ಟು ಹಾಕಿದರು. ಮಹಿಳೆಯರ ಮೇಲೆ ಅತ್ಯಾಚಾರ. ಪುರುಷರ ಶಿರಚ್ಛೇದ. ಯಹೂದಿಗಳ ನರಮೇಧ. ಮಕ್ಕಳನ್ನು ಅಪಹರಿಸಿದ್ದಾರೆ. ಇದು ಒಳ್ಳೆಯದು ಹಾಗೂ ಕೆಟ್ಟದ್ದರ ನಡುವೆ ನಡೆಯುತ್ತಿರುವ ಯುದ್ಧ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ಹಮಾಸ್ ಮಾತುಕತೆಯಲ್ಲಿ ಆಸಕ್ತಿ ಹೊಂದಿಲ್ಲ. ಹಮಾಸ್‌ನ ಏಕೈಕ ಆಸಕ್ತಿ ಯಹೂದಿಗಳನ್ನು ನಾಶಮಾಡುವುದು. ಹಮಾಸ್ ಕಳೆದ 16 ವರ್ಷಗಳಿಂದ ಫೆಲೆಸ್ತೀನಿಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. 2007 ರಲ್ಲಿ ಗಾಜಾದಲ್ಲಿ ಅಧಿಕಾರವನ್ನು ಪಡೆದಾಗ, ನೂರಾರು ಪ್ಯಾಲೆಸ್ತೀನ್ ನಾಗರಿಕರು ಕೊಲ್ಲಲ್ಪಟ್ಟರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us