AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Covid Variant: ಇಸ್ರೇಲ್​ನಲ್ಲಿ ಹೊಸ ಕೊವಿಡ್ ರೂಪಾಂತರಿ ವೈರಸ್ ಪತ್ತೆ; ಮತ್ತೆ ಹೆಚ್ಚಿದ ಆತಂಕ

ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಿದಾಗ ಈ ಹೊಸ ಸ್ಟ್ರೈನ್‌ ತಗುಲಿರುವುದು ಪತ್ತೆಯಾಗಿದೆ.

New Covid Variant: ಇಸ್ರೇಲ್​ನಲ್ಲಿ ಹೊಸ ಕೊವಿಡ್ ರೂಪಾಂತರಿ ವೈರಸ್ ಪತ್ತೆ; ಮತ್ತೆ ಹೆಚ್ಚಿದ ಆತಂಕ
ಲಸಿಕೆ (ಸಾಂದರ್ಭಿಕ ಚಿತ್ರ)
TV9 Web
| Updated By: ಸುಷ್ಮಾ ಚಕ್ರೆ|

Updated on: Mar 16, 2022 | 9:24 PM

Share

ನವದೆಹಲಿ: ಎರಡು ವರ್ಷಗಳಿಂದ ಜಗತ್ತನ್ನೇ ಕಂಗೆಡಿಸಿರುವ ಕೊರೊನಾವೈರಸ್​ (Coronavirus) ರೂಪಾಂತರಗೊಳ್ಳುತ್ತಾ ಮತ್ತಷ್ಟು ಆತಂಕ ಹೆಚ್ಚಿಸಿತ್ತು. ಈಗಾಗಲೇ ಅನೇಕ ರೂಪಾಂತರಗಳನ್ನು ಪಡೆದಿರುವ ಕೊವಿಡ್-19ನಿಂದ ಪಾರಾಗಲು ವಿಶ್ವಾದ್ಯಂತ ಕೊರೊನಾ ಲಸಿಕೆಗಳನ್ನು (Covid Vaccine) ನೀಡಲಾಗುತ್ತಿದೆ. ಹೀಗಾಗಿ, ಕೊವಿಡ್ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವುದರಿಂದ ಅನೇಕ ದೇಶಗಳಲ್ಲಿ ಜನಜೀವನ ಸುಧಾರಿಸಿದೆ. ಆದರೆ, ಪ್ರಪಂಚಕ್ಕೆ ತಿಳಿದಿಲ್ಲದ ಹೊಸ ಕೊವಿಡ್ ರೂಪಾಂತರಿಯ 2 ಪ್ರಕರಣಗಳು ಇಸ್ರೇಲ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತಷ್ಟು ಆತಂಕ ಸೃಷ್ಟಿಸಿದೆ.

ಇಸ್ರೇಲ್‌ನ ಆರೋಗ್ಯ ಸಚಿವಾಲಯವು ದಾಖಲಾದ ಹೊಸ ಕೊವಿಡ್ ರೂಪಾಂತರಿಯ ಎರಡು ಪ್ರಕರಣಗಳು COVID-BA.1 ಮತ್ತು BA.2ನ ಓಮಿಕ್ರಾನ್ ಆವೃತ್ತಿಯ ಎರಡು ಉಪ-ವ್ಯತ್ಯಯಗಳ ಸಂಯೋಜನೆಯಾಗಿದೆ ಎಂದು ಹೇಳಿದೆ. ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಿದಾಗ ಈ ಹೊಸ ಸ್ಟ್ರೈನ್‌ ತಗುಲಿರುವುದು ಪತ್ತೆಯಾಗಿದೆ. ಈ ಹೊಸ ಕೊವಿಡ್ ರೂಪಾಂತರಿಯ ಬಗ್ಗೆ ಬೇರೆ ದೇಶಗಳೂ ಎಚ್ಚರಿಕೆಯಿಂದಿರಲು ಇಸ್ರೇಲ್ ತಿಳಿಸಿದೆ.

ಇಸ್ರೇಲ್​ನಲ್ಲಿ ಹೊಸ COVID ರೂಪಾಂತರ ಸೋಂಕಿಗೆ ಒಳಗಾದ ಇಬ್ಬರು ರೋಗಿಗಳು ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯಗಳಿಂದ ಬಳಲುತ್ತಿದ್ದರು. ಈ ರೂಪಾಂತರವು ಪ್ರಪಂಚದಾದ್ಯಂತ ಇನ್ನೂ ತಿಳಿದಿಲ್ಲ. ಕೊರೊನಾ ರೂಪಾಂತರಿಯ 2 ಪ್ರಕರಣಗಳು ಇಲ್ಲಿಯವರೆಗೆ ಪತ್ತೆಯಾಗಿವೆ, ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯದಿಂದ ಅವರು ಬಳಲುತ್ತಿದ್ದರು. ಇದಕ್ಕೆ ವಿಶೇಷ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಇಸ್ರೇಲ್‌ನ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Covid Vaccine: 12ರಿಂದ 15 ವರ್ಷದ ಮಕ್ಕಳಿಗೆ ಇಂದಿನಿಂದ ಕೊವಿಡ್ ನಿರೋಧಕ ಲಸಿಕೆ

12-14 ವರ್ಷ ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?