AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Covid Variant: ಇಸ್ರೇಲ್​ನಲ್ಲಿ ಹೊಸ ಕೊವಿಡ್ ರೂಪಾಂತರಿ ವೈರಸ್ ಪತ್ತೆ; ಮತ್ತೆ ಹೆಚ್ಚಿದ ಆತಂಕ

ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಿದಾಗ ಈ ಹೊಸ ಸ್ಟ್ರೈನ್‌ ತಗುಲಿರುವುದು ಪತ್ತೆಯಾಗಿದೆ.

New Covid Variant: ಇಸ್ರೇಲ್​ನಲ್ಲಿ ಹೊಸ ಕೊವಿಡ್ ರೂಪಾಂತರಿ ವೈರಸ್ ಪತ್ತೆ; ಮತ್ತೆ ಹೆಚ್ಚಿದ ಆತಂಕ
ಲಸಿಕೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Mar 16, 2022 | 9:24 PM

Share

ನವದೆಹಲಿ: ಎರಡು ವರ್ಷಗಳಿಂದ ಜಗತ್ತನ್ನೇ ಕಂಗೆಡಿಸಿರುವ ಕೊರೊನಾವೈರಸ್​ (Coronavirus) ರೂಪಾಂತರಗೊಳ್ಳುತ್ತಾ ಮತ್ತಷ್ಟು ಆತಂಕ ಹೆಚ್ಚಿಸಿತ್ತು. ಈಗಾಗಲೇ ಅನೇಕ ರೂಪಾಂತರಗಳನ್ನು ಪಡೆದಿರುವ ಕೊವಿಡ್-19ನಿಂದ ಪಾರಾಗಲು ವಿಶ್ವಾದ್ಯಂತ ಕೊರೊನಾ ಲಸಿಕೆಗಳನ್ನು (Covid Vaccine) ನೀಡಲಾಗುತ್ತಿದೆ. ಹೀಗಾಗಿ, ಕೊವಿಡ್ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವುದರಿಂದ ಅನೇಕ ದೇಶಗಳಲ್ಲಿ ಜನಜೀವನ ಸುಧಾರಿಸಿದೆ. ಆದರೆ, ಪ್ರಪಂಚಕ್ಕೆ ತಿಳಿದಿಲ್ಲದ ಹೊಸ ಕೊವಿಡ್ ರೂಪಾಂತರಿಯ 2 ಪ್ರಕರಣಗಳು ಇಸ್ರೇಲ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತಷ್ಟು ಆತಂಕ ಸೃಷ್ಟಿಸಿದೆ.

ಇಸ್ರೇಲ್‌ನ ಆರೋಗ್ಯ ಸಚಿವಾಲಯವು ದಾಖಲಾದ ಹೊಸ ಕೊವಿಡ್ ರೂಪಾಂತರಿಯ ಎರಡು ಪ್ರಕರಣಗಳು COVID-BA.1 ಮತ್ತು BA.2ನ ಓಮಿಕ್ರಾನ್ ಆವೃತ್ತಿಯ ಎರಡು ಉಪ-ವ್ಯತ್ಯಯಗಳ ಸಂಯೋಜನೆಯಾಗಿದೆ ಎಂದು ಹೇಳಿದೆ. ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಿದಾಗ ಈ ಹೊಸ ಸ್ಟ್ರೈನ್‌ ತಗುಲಿರುವುದು ಪತ್ತೆಯಾಗಿದೆ. ಈ ಹೊಸ ಕೊವಿಡ್ ರೂಪಾಂತರಿಯ ಬಗ್ಗೆ ಬೇರೆ ದೇಶಗಳೂ ಎಚ್ಚರಿಕೆಯಿಂದಿರಲು ಇಸ್ರೇಲ್ ತಿಳಿಸಿದೆ.

ಇಸ್ರೇಲ್​ನಲ್ಲಿ ಹೊಸ COVID ರೂಪಾಂತರ ಸೋಂಕಿಗೆ ಒಳಗಾದ ಇಬ್ಬರು ರೋಗಿಗಳು ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯಗಳಿಂದ ಬಳಲುತ್ತಿದ್ದರು. ಈ ರೂಪಾಂತರವು ಪ್ರಪಂಚದಾದ್ಯಂತ ಇನ್ನೂ ತಿಳಿದಿಲ್ಲ. ಕೊರೊನಾ ರೂಪಾಂತರಿಯ 2 ಪ್ರಕರಣಗಳು ಇಲ್ಲಿಯವರೆಗೆ ಪತ್ತೆಯಾಗಿವೆ, ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯದಿಂದ ಅವರು ಬಳಲುತ್ತಿದ್ದರು. ಇದಕ್ಕೆ ವಿಶೇಷ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಇಸ್ರೇಲ್‌ನ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Covid Vaccine: 12ರಿಂದ 15 ವರ್ಷದ ಮಕ್ಕಳಿಗೆ ಇಂದಿನಿಂದ ಕೊವಿಡ್ ನಿರೋಧಕ ಲಸಿಕೆ

12-14 ವರ್ಷ ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು