AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್​ ವಿರುದ್ಧದ ಹೋರಾಟಕ್ಕೆ ಇಸ್ರೇಲ್ ಸಾಥ್​; ತಜ್ಞರ ತಂಡವನ್ನು ಕಳಿಸಲು ತೀರ್ಮಾನಿಸಿದ ಅಲ್ಲಿನ ಸರ್ಕಾರ

ಭಾರತದಲ್ಲಿ ಕೊವಿಡ್​ 19 ಕ್ಷಿಪ್ರ ತಪಾಸಣೆ ನಡೆಸಲು ಮತ್ತು ಸುಲಭವಾಗಿ ಆಮ್ಲಜನಕ ಉತ್ಪತ್ತಿ ಮಾಡುವ ಸಾಂದ್ರಕಗಳನ್ನು ಅಭಿವೃದ್ಧಿಪಡಿಸಲು ತಜ್ಞರ ತಂಡವನ್ನು ನಾವು ಕಳಿಸುತ್ತೇವೆ ಎಂದು ಇಸ್ರೇಲ್ ಹೇಳಿದೆ.

ಭಾರತದಲ್ಲಿ ಕೊವಿಡ್​ ವಿರುದ್ಧದ ಹೋರಾಟಕ್ಕೆ ಇಸ್ರೇಲ್ ಸಾಥ್​; ತಜ್ಞರ ತಂಡವನ್ನು ಕಳಿಸಲು ತೀರ್ಮಾನಿಸಿದ ಅಲ್ಲಿನ ಸರ್ಕಾರ
ರಾನ್​ ಮಲ್ಕಾ
Lakshmi Hegde
|

Updated on: May 10, 2021 | 1:04 PM

Share

ಕೊವಿಡ್ 19 ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿರುವ ಭಾರತದ ಸಹಾಯಕ್ಕೆ ಜಗತ್ತಿನ ಹಲವು ದೇಶಗಳು ನಿಂತಿವೆ. ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಭಾರತ ತಮಗೆ ಮಾಡಿದ ಸಹಾಯವನ್ನು ನೆನಪಿಸಿಕೊಂಡ ಅಮೆರಿಕ, ಕೆನಡಾ, ಯುಕೆ, ಅರಬ್​ ಸಂಯುಕ್ತ ರಾಷ್ಟ್ರ ಸೇರಿ ಹಲವು ದೇಶಗಳು ಭಾರತದ ನೆರವಿಗೆ ನಿಂತಿವೆ. ಇದೀಗ ಆ ಸಾಲಿಗೆ ಇಸ್ರೇಲ್​ ಕೂಡ ಸೇರಿದೆ. ಭಾರತದಲ್ಲಿ ಕೊವಿಡ್ ವಿರುದ್ಧ ಹೋರಾಟಕ್ಕೆ ಸಹಾಯವಾಗಲಿ ಎಂಬ ದೃಷ್ಟಿಯಿಂದ ಇಸ್ರೇಲ್​​ನಿಂದ ತಜ್ಞ ವೈದ್ಯರ ತಂಡವೊಂದು ಭಾರತಕ್ಕೆ ಆಗಮಿಸಲಿದೆ.

ಭಾರತದಲ್ಲಿ ಕೊವಿಡ್​ 19 ಕ್ಷಿಪ್ರ ತಪಾಸಣೆ ನಡೆಸಲು ಮತ್ತು ಸುಲಭವಾಗಿ ಆಮ್ಲಜನಕ ಉತ್ಪತ್ತಿ ಮಾಡುವ ಸಾಂದ್ರಕಗಳನ್ನು ಅಭಿವೃದ್ಧಿಪಡಿಸಲು ತಜ್ಞರ ತಂಡವನ್ನು ನಾವು ಕಳಿಸುತ್ತೇವೆ. ಈ ಮೂಲಕ ಕೊವಿಡ್​ 19 ವಿರುದ್ಧ ಭಾರತ ಮಾಡುತ್ತಿರುವ ಹೋರಾಟಕ್ಕೆ ನಾವು ನೆರವು ನೀಡುತ್ತಿದ್ದೇವೆ ಎಂದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರಾನ್​ ಮಲ್ಕಾ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಪ್ರಾರಂಭವಾದ ದಿನಗಳಲ್ಲಿ ನಾವು ಕಷ್ಟದಲ್ಲಿದ್ದಾಗ ನಮ್ಮ ನೆರವಿಗೆ ಬಂದಿದ್ದು ಭಾರತ. ಅದು ನಮಗೆ ನೀಡಿದ ಗುರುತರ ಸಹಾಯ, ನೆರವನ್ನು ಎಂದಿಗೂ ಮರೆಯೋದಿಲ್ಲ. ಇಸ್ರೇಲ್​ ಹಾಗೂ ಭಾರತದ ನಡುವೆ ಸದೃಢ ಸ್ನೇಹ-ಸಂಬಂಧವಿದೆ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ ಜೀವಗಳನ್ನು ರಕ್ಷಿಸಬೇಕು. ಭಾರತದ ಸಹಾಯಕ್ಕೆ ಇಸ್ರೇಲ್​ ಎಂದಿಗೂ ಬದ್ಧ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಬಿ ಮಾರಾಟ ಋತುವಿನಲ್ಲಿ ಹರ್ಯಾಣ ಮತ್ತು ಪಂಜಾಬ್​ನಲ್ಲಿ ಗೋಧಿ ಸಂಗ್ರಹಣೆ ಹೆಚ್ಚಳ

CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!