AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್​ ವಿರುದ್ಧದ ಹೋರಾಟಕ್ಕೆ ಇಸ್ರೇಲ್ ಸಾಥ್​; ತಜ್ಞರ ತಂಡವನ್ನು ಕಳಿಸಲು ತೀರ್ಮಾನಿಸಿದ ಅಲ್ಲಿನ ಸರ್ಕಾರ

ಭಾರತದಲ್ಲಿ ಕೊವಿಡ್​ 19 ಕ್ಷಿಪ್ರ ತಪಾಸಣೆ ನಡೆಸಲು ಮತ್ತು ಸುಲಭವಾಗಿ ಆಮ್ಲಜನಕ ಉತ್ಪತ್ತಿ ಮಾಡುವ ಸಾಂದ್ರಕಗಳನ್ನು ಅಭಿವೃದ್ಧಿಪಡಿಸಲು ತಜ್ಞರ ತಂಡವನ್ನು ನಾವು ಕಳಿಸುತ್ತೇವೆ ಎಂದು ಇಸ್ರೇಲ್ ಹೇಳಿದೆ.

ಭಾರತದಲ್ಲಿ ಕೊವಿಡ್​ ವಿರುದ್ಧದ ಹೋರಾಟಕ್ಕೆ ಇಸ್ರೇಲ್ ಸಾಥ್​; ತಜ್ಞರ ತಂಡವನ್ನು ಕಳಿಸಲು ತೀರ್ಮಾನಿಸಿದ ಅಲ್ಲಿನ ಸರ್ಕಾರ
ರಾನ್​ ಮಲ್ಕಾ
Lakshmi Hegde
|

Updated on: May 10, 2021 | 1:04 PM

Share

ಕೊವಿಡ್ 19 ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿರುವ ಭಾರತದ ಸಹಾಯಕ್ಕೆ ಜಗತ್ತಿನ ಹಲವು ದೇಶಗಳು ನಿಂತಿವೆ. ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಭಾರತ ತಮಗೆ ಮಾಡಿದ ಸಹಾಯವನ್ನು ನೆನಪಿಸಿಕೊಂಡ ಅಮೆರಿಕ, ಕೆನಡಾ, ಯುಕೆ, ಅರಬ್​ ಸಂಯುಕ್ತ ರಾಷ್ಟ್ರ ಸೇರಿ ಹಲವು ದೇಶಗಳು ಭಾರತದ ನೆರವಿಗೆ ನಿಂತಿವೆ. ಇದೀಗ ಆ ಸಾಲಿಗೆ ಇಸ್ರೇಲ್​ ಕೂಡ ಸೇರಿದೆ. ಭಾರತದಲ್ಲಿ ಕೊವಿಡ್ ವಿರುದ್ಧ ಹೋರಾಟಕ್ಕೆ ಸಹಾಯವಾಗಲಿ ಎಂಬ ದೃಷ್ಟಿಯಿಂದ ಇಸ್ರೇಲ್​​ನಿಂದ ತಜ್ಞ ವೈದ್ಯರ ತಂಡವೊಂದು ಭಾರತಕ್ಕೆ ಆಗಮಿಸಲಿದೆ.

ಭಾರತದಲ್ಲಿ ಕೊವಿಡ್​ 19 ಕ್ಷಿಪ್ರ ತಪಾಸಣೆ ನಡೆಸಲು ಮತ್ತು ಸುಲಭವಾಗಿ ಆಮ್ಲಜನಕ ಉತ್ಪತ್ತಿ ಮಾಡುವ ಸಾಂದ್ರಕಗಳನ್ನು ಅಭಿವೃದ್ಧಿಪಡಿಸಲು ತಜ್ಞರ ತಂಡವನ್ನು ನಾವು ಕಳಿಸುತ್ತೇವೆ. ಈ ಮೂಲಕ ಕೊವಿಡ್​ 19 ವಿರುದ್ಧ ಭಾರತ ಮಾಡುತ್ತಿರುವ ಹೋರಾಟಕ್ಕೆ ನಾವು ನೆರವು ನೀಡುತ್ತಿದ್ದೇವೆ ಎಂದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರಾನ್​ ಮಲ್ಕಾ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಪ್ರಾರಂಭವಾದ ದಿನಗಳಲ್ಲಿ ನಾವು ಕಷ್ಟದಲ್ಲಿದ್ದಾಗ ನಮ್ಮ ನೆರವಿಗೆ ಬಂದಿದ್ದು ಭಾರತ. ಅದು ನಮಗೆ ನೀಡಿದ ಗುರುತರ ಸಹಾಯ, ನೆರವನ್ನು ಎಂದಿಗೂ ಮರೆಯೋದಿಲ್ಲ. ಇಸ್ರೇಲ್​ ಹಾಗೂ ಭಾರತದ ನಡುವೆ ಸದೃಢ ಸ್ನೇಹ-ಸಂಬಂಧವಿದೆ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ ಜೀವಗಳನ್ನು ರಕ್ಷಿಸಬೇಕು. ಭಾರತದ ಸಹಾಯಕ್ಕೆ ಇಸ್ರೇಲ್​ ಎಂದಿಗೂ ಬದ್ಧ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಬಿ ಮಾರಾಟ ಋತುವಿನಲ್ಲಿ ಹರ್ಯಾಣ ಮತ್ತು ಪಂಜಾಬ್​ನಲ್ಲಿ ಗೋಧಿ ಸಂಗ್ರಹಣೆ ಹೆಚ್ಚಳ

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ