AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ರಾಜಧಾನಿ ಟೆಹರಾನ್​ ಮೇಲೆ ಇಸ್ರೇಲ್​​ನಿಂದ ಕ್ಷಿಪ್ಪಣಿ ದಾಳಿ: ಖಮೇನಿ ನಿವಾಸ ಗುರಿಯಾಗಿಸಿ ಅಟ್ಯಾಕ್​

ಇಸ್ರೇಲ್ ಇರಾನ್ ರಾಜಧಾನಿ ಟೆಹರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳ ಗುರಿಯಾಗಿಸಿ ದಾಳಿ ನಡೆದಿದ್ದು, ನಗರದಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ. ಇರಾನ್ ಸಂಭಾವ್ಯ ದಾಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಂಡಿರುವುದಾಗಿ ಇಸ್ರೇಲ್ ಸ್ಪಷ್ಟಪಡಿಸಿದೆ. ಅಮೆರಿಕ ಸಹಯೋಗದಲ್ಲಿ ಹಲವು ತಿಂಗಳುಗಳ ಯೋಜನೆಯಂತೆ ನಡೆದ ಈ ದಾಳಿಯಿಂದ ಅಮೆರಿಕ-ಇರಾನ್ ರಾಜತಾಂತ್ರಿಕ ಮಾತುಕತೆಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಇರಾನ್ ರಾಜಧಾನಿ ಟೆಹರಾನ್​ ಮೇಲೆ ಇಸ್ರೇಲ್​​ನಿಂದ ಕ್ಷಿಪ್ಪಣಿ ದಾಳಿ: ಖಮೇನಿ ನಿವಾಸ ಗುರಿಯಾಗಿಸಿ ಅಟ್ಯಾಕ್​
ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ದಾಳಿImage Credit source: Google
ಪ್ರಸನ್ನ ಹೆಗಡೆ
|

Updated on:Feb 28, 2026 | 1:07 PM

Share

ಟೆಹರಾನ್​, ಫೆಬ್ರವರಿ 28: ಇರಾನ್​​ ಮತ್ತು ಇಸ್ರೇಲ್​​ ನಡುವೆ ಯುದ್ಧದ ಕಾರ್ಮೋಡ ಹೆಚ್ಚಿದ್ದು, ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ಇಸ್ರೇಲ್​​ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಈ ಅಟ್ಯಾಕ್​​ ನಡೆದಿದ್ದು, ಟೆಹರಾನ್​ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್ ಜನತೆ ತತ್ತರಿಸಿದ್ದಾರೆ. ಇರಾನ್​ ಸೇನೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇರಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸ್ಪಷ್ಟನೆ ನೀಡಿದೆ.

ಪೂರ್ವಯೋಜಿತ ದಾಳಿ

2025ರ ಜೂನ್‌ನಲ್ಲಿ 12 ದಿನಗಳ ಕಾಲ ನಡೆದ ಇರಾನ್–ಇಸ್ರೇಲ್ ವಾಯುಯುದ್ಧದ ಬಳಿಕ ಈ ದಾಳಿ ನಡೆದಿದೆ. ಇರಾನ್ ತನ್ನ ಅಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮ ಮುಂದುವರಿಸಿದರೆ ಮತ್ತೆ ದಾಳಿ ನಡೆಸುವುದಾಗಿ ಅಮೆರಿಕಾ ಮತ್ತು ಇಸ್ರೇಲ್ ಮುಂಚೆಯೇ ಎಚ್ಚರಿಸಿದ್ದವು. ಇಂದು (ಶನಿವಾರ) ನಡೆದ ಇಸ್ರೇಲ್ ಕಾರ್ಯಾಚರಣೆ ಅಮೆರಿಕದ ಜೊತೆ ಸಂಯೋಜಿತವಾಗಿತ್ತು ಎಂದು ಇಸ್ರೇಲಿ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕಾರ್ಯಾಚರಣೆ ತಿಂಗಳುಗಳ ಕಾಲ ಯೋಜಿತವಾಗಿದ್ದು, ದಾಳಿ ದಿನಾಂಕವನ್ನು ವಾರಗಳ ಹಿಂದೆ ನಿಗದಿಪಡಿಸಲಾಗಿತ್ತು ಎಂದು ಹೇಳಲಾಗಿದೆ. ಈ ತಿಂಗಳಷ್ಟೇ ಅಮೆರಿಕಾ ಮತ್ತು ಇರಾನ್ ಹಲವು ವರ್ಷಗಳ ವಿವಾದವನ್ನು ರಾಜತಾಂತ್ರಿಕವಾಗಿ ಪರಿಹರಿಸಲು ಮಾತುಕತೆ ಪುನರಾರಂಭಿಸಿತ್ತು. ಆದರೆ ಈ ದಾಳಿಯ ಹಿನ್ನೆಲೆ ಮಾತುಕತೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ಸರ್ಕಾರದಿಂದ ಹೊಸ ಸಲಹೆ

ಇಸ್ರೇಲ್​​ ಪ್ರಕಟಣೆ

ಇರಾನ್​​ ಮೇಲಿನ ದಾಳಿ ಬೆನ್ನಲ್ಲೇ ಇಸ್ರೇಲ್​​ ದೇಶಾದ್ಯಂತ ತುರ್ತು ಪರಿಸ್ಥಿತಿ ​​​​ಘೋಷಣೆ ಮಾಡಲಾಗಿದ್ದು, ತುರ್ತುಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ತನ್ನ ವಾಯುಪ್ರದೇಶದಲ್ಲಿ ವಿಮಾನ ಹಾರಾಟವನ್ನೂ ಇಸ್ರೇಲ್​​ ನಿರ್ಬಂಧಿಸಿದೆ. ಇನ್ನು ಇಸ್ರೇಲ್​​ ನಡೆಸಿದ ದಾಳಿ ವೇಳೆ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ತೇಹ್ರಾನ್‌ನಲ್ಲಿ ಇಲ್ಲ ಎಂದು ವರದಿಯಾಗಿದೆ. ಅಮೆರಿಕಾ ಅಧಿಕಾರಿಗಳು ನ್ಯೂಯಾರ್ಕ್​​ ಟೈಮ್ಸ್​​ ಮತ್ತು ರಾಯಟರ್ಸ್​ಗೆ ನೀಡಿರುವ ಮಾಹಿತಿಯ ಪ್ರಕಾರ, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:01 pm, Sat, 28 February 26

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ