AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದಲ್ಲಿ ಅಂತಾರಾಷ್ಟ್ರೀಯ ಮಾಧ್ಯಮಗಳ ಕಚೇರಿಗಳಿದ್ದ 13 ಅಂತಸ್ತಿನ ಕಟ್ಟಡ ಧ್ವಂಸಗೊಳಿಸಿದ ಇಸ್ರೇಲ್​

ಈ ಕಟ್ಟಡ ಕೇವಲ ಅಂತಾರಾಷ್ಟ್ರೀಯ ಮಾಧ್ಯಮಗಳ ಕಚೇರಿಯನ್ನಷ್ಟೇ ಅಲ್ಲ, ಹಮಾಸ್ ಉಗ್ರ ಸಂಘಟನೆಯ ಕಚೇರಿಯನ್ನೂ ಒಳಗೊಂಡಿದೆ. ಹಾಗಾಗಿಯೇ ಕಟ್ಟಡವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್​ ಸೈನ್ಯಾಧಿಕಾರಿಗಳು ತಿಳಿಸಿದ್ದಾರೆ.

ಗಾಜಾದಲ್ಲಿ ಅಂತಾರಾಷ್ಟ್ರೀಯ ಮಾಧ್ಯಮಗಳ ಕಚೇರಿಗಳಿದ್ದ 13 ಅಂತಸ್ತಿನ ಕಟ್ಟಡ ಧ್ವಂಸಗೊಳಿಸಿದ ಇಸ್ರೇಲ್​
ಏರ್​ಸ್ಟ್ರೈಕ್​
Lakshmi Hegde
|

Updated on:May 15, 2021 | 11:43 PM

Share

ಇಸ್ರೇಲ್​ ಮತ್ತು ಪ್ಯಾಲೆಸ್ಟೀನ್​ ನಡುವೆ ದಾಳಿ-ಪ್ರತಿದಾಳಿ ಮುಂದುವರಿದಿದ್ದು, ಮೊನ್ನೆ ಹಮಾಸ್​ ನಡೆಸಿದ್ದ ರಾಕೆಟ್​ ದಾಳಿಗೆ ಪ್ರತಿಯಾಗಿ ಇಂದು ಇಸ್ರೇಲ್​ ವೈಮಾನಿಕ ದಾಳಿ ನಡೆಸಿದೆ. ಗಾಜಾವನ್ನು ಗುರಿಯಾಗಿಸಿಕೊಂಡು ನಡೆಸಿದ ಈ ದಾಳಿಯಿಂದ ಗಾಜಾ ಸ್ಟ್ರಿಪ್​ನಲ್ಲಿದ್ದ 13 ಅಂತಸ್ತಿನ ಕಟ್ಟಡ ನೆಲಸಮಗೊಂಡಿದೆ. ಈ ಕಟ್ಟಡದಲ್ಲಿ ಅಲ್​ ಜಝೀರಾ ಸೇರಿ ಹಲವು ಮಾಧ್ಯಮಗಳ ಕಚೇರಿಯೂ ಇತ್ತು ಎಂದು ಅಲ್​ ಜಝೀರಾ ಟ್ವೀಟ್ ಮಾಡಿದೆ. ಇಸ್ರೇಲ್​ನ ರಾಕೆಟ್​ ದಾಳಿಗೆ ಗಾಜಾ ಸ್ಟ್ರಿಪ್​ ಸುತ್ತಲಿನ ಪ್ರದೇಶ ಹೊಗೆಯಿಂದ ಕೂಡಿತ್ತು ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

ಇನ್ನು ಏರ್​ಸ್ಟ್ರೈಕ್​ ನಡೆಸುವುದಕ್ಕೂ ಮೊದಲು ಇಸ್ರೇಲ್​ ಸೈನ್ಯ ಕಟ್ಟಡದ ಮಾಲೀಕರಲ್ಲಿ ಒಬ್ಬರಾದ ಜವಾದ್​ ಮೆಹೆಂದಿ ಎಂಬುವರಿಗೆ ಕರೆ ಮಾಡಿತ್ತು. ಈ ಕಟ್ಟಡ ಕೇವಲ ಅಂತಾರಾಷ್ಟ್ರೀಯ ಮಾಧ್ಯಮಗಳ ಕಚೇರಿಯನ್ನಷ್ಟೇ ಅಲ್ಲ, ಹಮಾಸ್ ಉಗ್ರ ಸಂಘಟನೆಯ ಕಚೇರಿಯನ್ನೂ ಒಳಗೊಂಡಿದೆ. ಹಾಗಾಗಿಯೇ ಕಟ್ಟಡವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್​ ಸೈನ್ಯಾಧಿಕಾರಿಗಳು ತಿಳಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕೂಡ ಇಸ್ರೇಲ್​ ಗಾಜಾದಲ್ಲಿ ದಾಳಿ ನಡೆಸಿತ್ತು. ಇನ್ನು ಇಸ್ರೇಲ್ ಭೂಸೇನೆ ಕೂಡ ಸುಮಾರು 9 ಸಾವಿರ ಸೈನಿಕರೊಂದಿಗೆ ದಾಳಿಗೆ ಸಜ್ಜಾಗಿದೆ. ಹಮಾಸ್​ ಬಂಡುಕೋರರನ್ನು ಬಗ್ಗುಬಡೆಯುವುದೇ ನಮ್ಮ ಗುರಿ. ಇದಕ್ಕಾಗಿ ಎಲ್ಲ ರೀತಿಯ ವ್ಯವಸ್ಥೆ, ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸೇನಾ ವಕ್ತಾರ ತಿಳಿಸಿದ್ದಾರೆ.

ಇದನ್ನೂ ಓದಿ: ಟಗ್ ಮುಳುಗಡೆ ಪ್ರಕರಣ: ಪತ್ತೆಯಾದ 9 ಮಂದಿ ರಕ್ಷಣೆಗೆ ಗಾಳಿ ಮಳೆ ಅಡ್ಡಿ; ನಾಳೆ ಮುಂಜಾನೆವರೆಗೆ ಸಮುದ್ರದಲ್ಲೇ ಇರುವ ಅನಿವಾರ್ಯತೆ

Published On - 11:41 pm, Sat, 15 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ