ಗಾಜಾ ಮೇಲೆ ಇಸ್ರೇಲ್​ನಿಂದ ವೈಮಾನಿಕ ದಾಳಿ; ಮಕ್ಕಳು ಸೇರಿ 18 ಜನ ಸಾವು

ಗಾಜಾದ ಮೇಲೆ ಇಸ್ರೇಲ್​ ನಡೆಸಿದ ಮಾರಣಾಂತಿಕ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಒಟ್ಟು 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸೆಂಟ್ರಲ್ ಗಾಜಾ ಸ್ಟ್ರಿಪ್‌ನಲ್ಲಿ ನಡೆದ ಮತ್ತೊಂದು ವೈಮಾನಿಕ ದಾಳಿಯಲ್ಲಿ 8 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಅವರು ಮೃತದೇಹಗಳನ್ನು ಸ್ಥಳಾಂತರಿಸಲಾಗಿದೆ. ಕುಸಿದುಬಿದ್ದ ಮನೆಗಳು, ಛಿದ್ರವಾದ ಮೃತದೇಹಗಳ ಎದುರು ಜನರು ಅಳುತ್ತಾ ಗೋಳಾಡುತ್ತಿರುವ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಗಾಜಾ ಮೇಲೆ ಇಸ್ರೇಲ್​ನಿಂದ ವೈಮಾನಿಕ ದಾಳಿ; ಮಕ್ಕಳು ಸೇರಿ 18 ಜನ ಸಾವು
Airstrike On Gaza

Updated on: Jan 02, 2025 | 5:58 PM

ಗಾಜಾ: ಹಮಾಸ್ ನಡೆಸುತ್ತಿರುವ ಪೊಲೀಸ್ ಪಡೆಗಳಲ್ಲಿ ಮೂವರು ಮಕ್ಕಳು ಮತ್ತು ಇಬ್ಬರು ಉನ್ನತ ಶ್ರೇಣಿಯ ಅಧಿಕಾರಿಗಳು ಸೇರಿದಂತೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಂದು ಗಾಜಾ ಪಟ್ಟಿಯಲ್ಲಿ 18 ಜನರು ಮೃತಪಟ್ಟಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಮತ್ತು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು ಮುಂಜಾನೆ ನಡೆದ ವೈಮಾನಿಕ ದಾಳಿ ಮುವಾಸಿ ಎಂದು ಕರೆಯಲ್ಪಡುವ ಪ್ರದೇಶದ ಟೆಂಟ್‌ಗೆ ಅಪ್ಪಳಿಸಿತು. ಬೇರೆಡೆಯಿಂದ ಸ್ಥಳಾಂತರಗೊಂಡ ನೂರಾರು ಜನರು ಅಲ್ಲಿ ಶೀತ ಮತ್ತು ಚಳಿಯಿಂದ ಡೇರೆಗಳಲ್ಲಿ ಆಶ್ರಯ ಪಡೆಯುತ್ತಿದ್ದರು.

ಮತ್ತೊಂದು ವೈಮಾನಿಕ ದಾಳಿಯಲ್ಲಿ ಸೆಂಟ್ರಲ್ ಗಾಜಾ ಪಟ್ಟಿಯಲ್ಲಿ ಕನಿಷ್ಠ 8 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದರು. ಮೃತರು ಸ್ಥಳೀಯ ಸಮಿತಿಗಳ ಸದಸ್ಯರಾಗಿದ್ದರು. ಈ ದಾಳಿಯ ಕುರಿತು ಇಸ್ರೇಲಿ ಸೇನೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ಇಸ್ರೇಲ್ ಯುದ್ಧ; ಗಾಜಾದಲ್ಲಿ 1 ವರ್ಷದಲ್ಲಿ 43,000ಕ್ಕೂ ಹೆಚ್ಚು ಪ್ಯಾಲೆಸ್ತೇನಿಯನ್ನರ ಹತ್ಯೆ

ಹಮಾಸ್ ನೇತೃತ್ವದ ಉಗ್ರಗಾಮಿಗಳು ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲೆ ನಡೆಸಿದ ದಾಳಿಯಿಂದ ಈ ಯುದ್ಧವು ಆರಂಭವಾಯಿತು. ಅವರು ಸುಮಾರು 1,200 ಜನರನ್ನು ಕೊಂದರು ಮತ್ತು ಸುಮಾರು 250 ಜನರನ್ನು ಅಪಹರಿಸಿದರು. ಗಾಜಾದಲ್ಲಿ ಸುಮಾರು 100 ಒತ್ತೆಯಾಳುಗಳು ಇನ್ನೂ ಇದ್ದಾರೆ. ಅವರಲ್ಲಿ ಕನಿಷ್ಠ ಮೂರನೇ ಒಂದು ಭಾಗದಷ್ಟು ಜನರು ಸತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇಸ್ರೇಲ್‌ನ ಆಕ್ರಮಣವು ಗಾಜಾದಲ್ಲಿ 45,000 ಪ್ಯಾಲೆಸ್ಟೀನಿಯಾದವರನ್ನು ಕೊಂದಿದೆ ಎನ್ನಲಾಗಿದೆ. ಇಂದು ಮುಂಜಾನೆ, ಇಸ್ರೇಲಿ ಮಿಲಿಟರಿಯು ಗಾಜಾ ಪಟ್ಟಿಯ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಆಂತರಿಕ ಭದ್ರತಾ ಉಪಕರಣದ ಹಿರಿಯ ಸದಸ್ಯರನ್ನು ಗುರಿಯಾಗಿಸಿಕೊಂಡಿದೆ ಎಂದು ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ಹೇಳುತ್ತಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us