AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Israel Gaza War: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್​ ವೈಮಾನಿಕ ದಾಳಿ, ಮಕ್ಕಳು ಸೇರಿ 35 ಮಂದಿ ಸಾವು

ಇಸ್ರೇಲ್​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಹಮಾಸ್ ರಾಕೆಟ್ ದಾಳಿಯ ನಂತರ, ಇಸ್ರೇಲ್ ರಾಫಾ ಮೇಲೆ ದೊಡ್ಡ ವೈಮಾನಿಕ ದಾಳಿ ನಡೆಸಿದೆ.ಇಸ್ರೇಲಿ ವಾಯುಪಡೆಯು ದೊಡ್ಡ ಭಯೋತ್ಪಾದಕರು ಇರುವ ಭಯೋತ್ಪಾದಕ ಸಂಘಟನೆ ಹಮಾಸ್‌ನ ರಫಾ ಸಂಕೀರ್ಣವನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ.

Israel Gaza War: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್​ ವೈಮಾನಿಕ ದಾಳಿ, ಮಕ್ಕಳು ಸೇರಿ 35 ಮಂದಿ ಸಾವು
ನಯನಾ ರಾಜೀವ್
|

Updated on: May 27, 2024 | 8:36 AM

Share

ಇಸ್ರೇಲ್(Israel)​ ಗಾಜಾ(Gaza)ದ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿ 35 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಹಮಾಸ್ ರಾಕೆಟ್ ದಾಳಿಯ ನಂತರ, ಇಸ್ರೇಲ್ ರಾಫಾ ಮೇಲೆ ದೊಡ್ಡ ವೈಮಾನಿಕ ದಾಳಿ ನಡೆಸಿದೆ.ಇಸ್ರೇಲಿ ವಾಯುಪಡೆಯು ದೊಡ್ಡ ಭಯೋತ್ಪಾದಕರು ಇರುವ ಭಯೋತ್ಪಾದಕ ಸಂಘಟನೆ ಹಮಾಸ್‌ನ ರಫಾ ಸಂಕೀರ್ಣವನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ.

ದಾಳಿಯಲ್ಲಿ ವೆಸ್ಟ್ ಬ್ಯಾಂಕ್ ಪ್ರಧಾನ ಕಚೇರಿಯ ಮುಖ್ಯಸ್ಥ ಯಾಸಿನ್ ರಬಿಯಾ ಮತ್ತು ಇನ್ನೊಬ್ಬ ಭಯೋತ್ಪಾದಕ ಕಮಾಂಡರ್ ಖಾಲಿದ್ ನಜ್ಜಾರ್ ಹತರಾಗಿದ್ದಾರೆ.

ಇಸ್ರೇಲಿ ಬಾಂಬ್ ದಾಳಿಯಲ್ಲಿ 35 ಪ್ಯಾಲೆಸ್ತೀನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಶೆಲ್ ದಾಳಿಯ ಪರಿಣಾಮವಾಗಿ ಈ ಪ್ರದೇಶದಲ್ಲಿ ಹಲವಾರು ನಾಗರಿಕರು ಗಾಯಗೊಂಡಿದ್ದಾರೆ.

ಇಸ್ರೇಲ್ ವೈಮಾನಿಕ ದಾಳಿಯ ನಂತರ ತನ್ನ ಕಮಾಂಡರ್‌ಗಳ ಸಾವಿನಿಂದ ಹಮಾಸ್ ಆಘಾತಕ್ಕೊಳಗಾಗಿದೆ. ರಫಾದಲ್ಲಿ ಇಸ್ರೇಲ್ ಸೇನೆಯ ವಿರುದ್ಧ ಪ್ರತಿಭಟಿಸುವಂತೆ ಹಮಾಸ್ ಪ್ಯಾಲೆಸ್ತೀನ್ ಜನರಿಗೆ ಮನವಿ ಮಾಡಿದೆ.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಹಮಾಸ್​ ಅಧಿಕಾರಿಯೊಬ್ಬರು ಈ ದಾಳಿಗೆ ಇಸ್ರೇಲ್ ಹಾಗೂ ಅಮೆರಿಕ ಎರಡನ್ನೂ ದೂಷಿಸಿದ್ದಾರೆ. ಇದು ನರಮೇಧ ಎಂದು ಆರೋಪಿಸಿದ್ದಾರೆ. ಅಮೆರಿಕದ ಶಸ್ತ್ರಾಸ್ತ್ರಗಳ ನೆರವಿನಿಂದ ಇಸ್ರೇಲ್ ಸೇನೆ ಈಗ ರಫಾದಲ್ಲಿ ನರಮೇಧ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ವಾರದ ಹಿಂದೆ ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿತ್ತು ಇಸ್ರೇಲ್​ನ ಟೆಲ್ ಅವಿವ್​ ನಗರದ ಮೇಲೆ ಬೃಹತ್ ಕ್ಷಿಪಣಿ ದಾಳಿ ಮಾಡಿರುವುದಾಗಿ ಹಮಾಸ್ ಬೆಂಬಲಿತ ಅಲ್ ಖಾಸಮ್ ಸಂಘಟನೆ ಹೇಳಿದೆ. ನಗರದ ಮೇಲೆ ರಾಕೆಟ್ ದಾಳಿ ನಡೆದಿರುವ ಕುರಿತಾಗಿ ಸೈರನ್ ಕೇಳಿ ಬಂದಿದೆ ಎಂದು ಇಸ್ರೇಲ್ ಸೇನೆ ಒಪ್ಪಿಕೊಂಡಿದೆ.

ಗಾಜಾ ಪಟ್ಟಿಯಿಂದ ಈ ರಾಕೆಟ್​ಗಳನ್ನು ಹಾರಿಸಲಾಗಿದ್ದು, 4 ತಿಂಗಳ ಬಳಿಕ ಟೆಲ್ ಅವಿವ್ ನಗರದಲ್ಲಿ ಸೈರನ್ ಶಬ್ದ ಕೇಳಿ ಬಂದಿತ್ತು. ಹೀಗಾಗಿ ಮತ್ತೆ ಮಧ್ಯ ಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಕೈಮೀರಿ ಹೋಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ