AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯ ಹೊಟ್ಟೆ ಸೀಳಿತ್ತು, ಭ್ರೂಣಕ್ಕೆ ಚೂರಿಯಿಂದ ಇರಿಯಲಾಗಿತ್ತು, ಇದು ಇಸ್ರೇಲ್​ನ ಈಗಿನ ಭಯಾನಕ ಸ್ಥಿತಿ

ಹಮಾಸ್ ಉಗ್ರರು ನಿಜಕ್ಕೂ ರಾಕ್ಷಸರಂತೆ ವರ್ತಿಸಿದ್ದಾರೆ. ಗರ್ಭಿಣಿಯರು, ಪುಟ್ಟ ಮಕ್ಕಳೆನ್ನದೇ ಕೊಂದಿದ್ದಾರೆ. ಇಸ್ರೇಲ್​ ಹಾಗೂ ಹಮಾಸ್ ಉಗ್ರರ ನಡುವೆ ಸಂಘರ್ಷ ಮುಂದುವರೆದಿದೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಎಲ್ಲರೂ ಸೇರಿದ್ದಾರೆ. ಮಕ್ಕಳ ತಲೆ ಕತ್ತರಿಸಿ, ಅವರ ಕತ್ತು ಸೀಳಿ ಕೊಲೆ ಮಾಡಿರುವ ಭಯಾನಕ ಫೋಟೊಗಳು ವೈರಲ್​ ಆಗಿವೆ. ಇಸ್ರೇಲ್​ನ ಮೃತಪಟ್ಟಿರುವ ಶವಗಳನ್ನು ಒಂದೆಡೆ ಸಂಗ್ರಹಿಸಲು ತೆರಳಿದ್ದ ಯೋಸ್ಸಿ ಲ್ಯಾಂಡೌ ಎಂಬುವವರು ಕೆಲವು ಭಯಾನಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

ಗರ್ಭಿಣಿಯ ಹೊಟ್ಟೆ ಸೀಳಿತ್ತು, ಭ್ರೂಣಕ್ಕೆ ಚೂರಿಯಿಂದ ಇರಿಯಲಾಗಿತ್ತು, ಇದು ಇಸ್ರೇಲ್​ನ ಈಗಿನ ಭಯಾನಕ ಸ್ಥಿತಿ
ಇಸ್ರೇಲ್Image Credit source: NDTV
ನಯನಾ ರಾಜೀವ್
|

Updated on: Oct 13, 2023 | 10:09 AM

Share

ಹಮಾಸ್(Hamas) ಉಗ್ರರು ನಿಜಕ್ಕೂ ರಾಕ್ಷಸರಂತೆ ವರ್ತಿಸಿದ್ದಾರೆ. ಗರ್ಭಿಣಿಯರು, ಪುಟ್ಟ ಮಕ್ಕಳೆನ್ನದೇ ಕೊಂದಿದ್ದಾರೆ. ಇಸ್ರೇಲ್​ ಹಾಗೂ ಹಮಾಸ್ ಉಗ್ರರ ನಡುವೆ ಸಂಘರ್ಷ ಮುಂದುವರೆದಿದೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಎಲ್ಲರೂ ಸೇರಿದ್ದಾರೆ. ಮಕ್ಕಳ ತಲೆ ಕತ್ತರಿಸಿ, ಅವರ ಕತ್ತು ಸೀಳಿ ಕೊಲೆ ಮಾಡಿರುವ ಭಯಾನಕ ಫೋಟೊಗಳು ವೈರಲ್​ ಆಗಿವೆ. ಇಸ್ರೇಲ್​ನ ಮೃತಪಟ್ಟಿರುವ ಶವಗಳನ್ನು ಒಂದೆಡೆ ಸಂಗ್ರಹಿಸಲು ತೆರಳಿದ್ದ ಯೋಸ್ಸಿ ಲ್ಯಾಂಡೌ ಎಂಬುವವರು ಕೆಲವು ಭಯಾನಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

15 ನಿಮಿಷಗಳ ದೂರದ ಪ್ರಯಾಣ ಬರೋಬ್ಬರಿ 11 ಗಂಟೆಗಳನ್ನು ತೆಗೆದುಕೊಂಡಿತು, ಈ ಸಂಘರ್ಷದ ತೀವ್ರತೆ ಎಷ್ಟಿದೆ ಎಂಬುದನ್ನು ಅವರ ಮಾತಿನಿಂದಲೇ ಅರಿಯಬಹುದಾಗಿದೆ. ನಾವು ಹೋಗಿ ಎಲ್ಲಾ ಶವಗಳನ್ನು ಚೀಲದಲ್ಲಿ ತುಂಬಿಸಿದ್ದೇವೆ ಎಂದಿದ್ದಾರೆ.

ಎಲ್ಲೆಲ್ಲೂ ಸುಟ್ಟ ಕಾರುಗಳು, ಸುಟ್ಟ ಸ್ಥಿತಿಯಲ್ಲಿ ಶವಗಳು, ಕಟ್ಟಡದ ಅವಶೇಷಗಳು ಇವೇ ಗೋಚರಿಸುತ್ತವೆ, ಟ್ರಕ್​ಗಳಲ್ಲಿ ಶವಗಳನ್ನು ಹಾಕಿ ಲೋಡ್ ಮಾಡಿ ಬಳಿಕ ಗಾಜಾದಿಂದ ಐದು ಕಿ.ಮೀ ದೂರದಲ್ಲಿರುವ 1200 ನಿವಾಸಿಗಳಿರುವ ಕಿಬ್ಬುಟ್ಜ್​ ಬೀರಿಯನ್ನು ತಲುಪಿದೆವು.

ಮತ್ತಷ್ಟು ಓದಿ: ಹಮಾಸ್ ಕೇವಲ ಉಗ್ರರಲ್ಲ, ರಾಕ್ಷಸರು: ಶತ್ರುಗಳು ಯಾರೆಂದು ಅರಿಯದ ಮುದ್ದು ಮಕ್ಕಳನ್ನು ಕೊಂದು ಸುಟ್ಟು ಹಾಕಿದ ಹಂತಕರು

ಮೊದಲ ಮನೆಗೆ ಪ್ರವೇಶಿಸುತ್ತಿದ್ದಂತೆ ಅಲ್ಲಿನ ದೃಶ್ಯವನ್ನು ನೋಡಿ ನಾನು ಕುಸಿದುಬಿದ್ದೆ, ಗರ್ಭಿಣಿಯ ಹೊಟ್ಟೆಯನ್ನು ಸೀಳಲಾಗಿತ್ತು, ಮಗು ಕಾಣಿಸುತ್ತಿತ್ತು, ಮಗುವಿಗೆ ಚೂರಿಯಿಂದ ಇರಿಯಲಾಗಿತ್ತು, ಹೊಕ್ಕುಳ ಬಳ್ಳಿಯೊಂದಿಗೆ ಇನ್ನೂ ಸಂಪರ್ಕವಿತ್ತು. ಹಾಗೆಯೇ ಮುಂದೆ ಹೋಗುತ್ತಿದ್ದಂತೆ 20 ಮಕ್ಕಳು ಸತ್ತಿರುವುದು ಕಂಡುಬಂದಿತ್ತು, ಎಲ್ಲರ ಕೈಗಳನ್ನು ಹಿಂದೆ ಕಟ್ಟಲಾಗಿತ್ತು. ಕೆಲವರಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು.

ಕಿಬ್ಬುಟ್ಜ್​ನಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ, ಹತ್ತಿರದಲ್ಲೇ ನಡೆದ ಸೂಪರ್ನೋವಾ ಸಂಗೀತ ಉತ್ಸವದಲ್ಲಿ ಸುಮಾರು 270 ಮಂದಿ ಸಾವನ್ನಪ್ಪಿದ್ದರು. ಹಮಾಸ್​ ದಾಳಿಗೆ ಪ್ರತಿಯಾಗಿ ಗಾಜಾದ ಮೇಲೆ ಇಸ್ರೇಲ್ 6 ಸಾವಿರ ಬಾಂಬ್​ಗಳನ್ನು ಹಾಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ