AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದ ನೆರವು ಕೇಂದ್ರದ ಮೇಲೆ ಇಸ್ರೇಲ್​ನಿಂದ ಮನಬಂದಂತೆ ಗುಂಡಿನ ದಾಳಿ, 30 ಮಂದಿ ಸಾವು

ದಕ್ಷಿಣ ಗಾಜಾದ ರಫಾದಲ್ಲಿರುವ ಅಮೆರಿಕ ಬೆಂಬಲಿತ ನೆರವು ವಿತರಣಾ ಕೇಂದ್ರದ ಬಳಿ ಇಸ್ರೇಲಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 115 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಹಾರ ಸಾಮಗ್ರಿಗಳನ್ನು ಸ್ವೀಕರಿಸಲು ಸಾವಿರಾರು ಪ್ಯಾಲೆಸ್ಟೀನಿಯನ್ನರು ಕೇಂದ್ರದ ಬಳಿ ಜಮಾಯಿಸಿದ್ದಾಗ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ. ಇಸ್ರೇಲಿ ಟ್ಯಾಂಕ್‌ಗಳು ಜನಸಮೂಹದ ಮೇಲೆ ಮನಬಂದಂತೆ ಗುಂಡು ಹಾರಿಸಿದವು ಎಂದು ಸ್ಥಳೀಯ ಪತ್ರಕರ್ತರೊಬ್ಬರು ವರದಿ ಮಾಡಿದ್ದಾರೆ.

ಗಾಜಾದ ನೆರವು ಕೇಂದ್ರದ ಮೇಲೆ ಇಸ್ರೇಲ್​ನಿಂದ ಮನಬಂದಂತೆ ಗುಂಡಿನ ದಾಳಿ, 30 ಮಂದಿ ಸಾವು
ಗಾಜಾ (ಸಾಂದರ್ಭಿಕ ಚಿತ್ರ)Image Credit source: Le Monde
ನಯನಾ ರಾಜೀವ್
|

Updated on:Jun 01, 2025 | 2:21 PM

Share

ರಫಾ, ಜೂನ್ 1:   ದಕ್ಷಿಣ ಗಾಜಾದ ರಫಾದಲ್ಲಿರುವ ಅಮೆರಿಕ ಬೆಂಬಲಿತ ನೆರವು ಕೇಂದ್ರದ ಬಳಿ ಇಸ್ರೇಲಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 115 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಹಾರ ಸಾಮಗ್ರಿಗಳನ್ನು ಸ್ವೀಕರಿಸಲು ಸಾವಿರಾರು ಪ್ಯಾಲೆಸ್ಟೀನಿಯನ್ನರು ಕೇಂದ್ರದ ಬಳಿ ಜಮಾಯಿಸಿದ್ದಾಗ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ. ಇಸ್ರೇಲಿ ಟ್ಯಾಂಕ್‌ಗಳು ಜನಸಮೂಹದ ಮೇಲೆ ಮನಬಂದಂತೆ ಗುಂಡು ಹಾರಿಸಿವೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಕತ್ತೆ ಬಂಡಿಯ ಮೂಲಕ ಮೃತರು ಮತ್ತು ಗಾಯಗೊಂಡವರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಯಿತು. ಇದು ಈ ಪ್ರದೇಶದ ಭೀಕರ ಮಾನವೀಯ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಹಮಾಸ್ ಈ ಘಟನೆಯನ್ನು ನರಮೇಧ ಎಂದು ಕರೆದಿದೆ. ಏತನ್ಮಧ್ಯೆ, ಗಾಜಾದಲ್ಲಿ ಕದನ ವಿರಾಮಕ್ಕೆ ಅಮೆರಿಕದ ಪ್ರಸ್ತಾಪವನ್ನು ಹಮಾಸ್ ಒಪ್ಪಿಕೊಂಡಿಲ್ಲ. ಅವರು ಪ್ರಸ್ತಾವನೆಗೆ ತಿದ್ದುಪಡಿಗಳನ್ನು ಒತ್ತಾಯಿಸಿದರು. ಇಸ್ರೇಲ್ ಕದನ ವಿರಾಮ ಪ್ರಸ್ತಾಪವನ್ನು ಬೆಂಬಲಿಸಿತು.

ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲೆ ನಡೆಸಿದ ದಾಳಿಯ ಸಂದರ್ಭದಲ್ಲಿ ಹಮಾಸ್ 250 ಜನರನ್ನು ಸೆರೆಹಿಡಿದಿತ್ತು. ಅವರಲ್ಲಿ 58 ಜನರು ಇನ್ನೂ ಗಾಜಾದಲ್ಲಿ ಜೀವಂತವಾಗಿದ್ದಾರೆ. ಅಮೆರಿಕ ಬೆಂಬಲಿತ ಕದನ ವಿರಾಮ ಪ್ರಸ್ತಾವನೆಗೆ ತಾನು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವುದಾಗಿ ಹಮಾಸ್ ಶನಿವಾರ ಹೇಳಿದೆ.

ಮಾರ್ಚ್ 18 ರಂದು ಇಸ್ರೇಲ್ ತನ್ನ ದಾಳಿಯನ್ನು ಪುನರಾರಂಭಿಸಿದಾಗಿನಿಂದ ಹಮಾಸ್ ಆಡಳಿತದ ಗಾಜಾದ ಆರೋಗ್ಯ ಸಚಿವಾಲಯ ಶನಿವಾರ ಈ ಪ್ರದೇಶದಲ್ಲಿ ಕನಿಷ್ಠ 4,117 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ, ಇದು ಯುದ್ಧದ ಒಟ್ಟಾರೆ ಸಂಖ್ಯೆ 54,381 ಕ್ಕೆ ತಲುಪಿದೆ, ಅವರಲ್ಲಿ ಹೆಚ್ಚಿನವರು ನಾಗರಿಕರು.

ಇಸ್ರೇಲ್​ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕ ಮೊಹಮ್ಮದ್ ಸಿನ್ವಾರ್ ಸಾವು

ಇಸ್ರೇಲ್​ ಮೇ 13ರಂದು ಗಾಜಾದ ಮೇಲೆ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕ ಮೊಹಮ್ಮದ್ ಸಿನ್ವಾರ್ ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಸೇನೆ ಹೇಳಿದೆ. ಇದಕ್ಕು ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡ ಇದೇ ಮಾಹಿತಿ ನೀಡಿದ್ದರು. ಇಸ್ರೇಲಿ ಅಧಿಕಾರಿಗಳ ಪ್ರಕಾರ, ಮೇ 13 ರಂದು ನಡೆದ ವೈಮಾನಿಕ ದಾಳಿಯು ಗಾಜಾದ ಆಸ್ಪತ್ರೆಯ ಕೆಳಗಿರುವ ಸುರಂಗ ಸಂಕೀರ್ಣದ ಮೇಲೆ ಭಾರೀ ಬಾಂಬ್ ದಾಳಿ ನಡೆಸಿತು.ಅಲ್ಲಿ ಸಿನ್ವಾರ್ ಅಡಗಿಕೊಂಡಿದ್ದನೆಂದು ಶಂಕಿಸಲಾಗಿದೆ.

ಮತ್ತಷ್ಟು ಓದಿ: Benjamin Netanyahu: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು, ಯಾರಿವ್​ ಕೈಗೆ ತಾತ್ಕಾಲಿಕ ಅಧಿಕಾರ

ಇದಕ್ಕಾಗಿಯೇ ಇಲ್ಲಿ ದಾಳಿ ನಡೆಸಲಾಯಿತು. ಪ್ರಧಾನಿ ನೆತನ್ಯಾಹು ನಂತರ, ಈಗ ಇಸ್ರೇಲಿ ಸೇನೆಯು ಮೊಹಮ್ಮದ್ ಸಿನ್ವಾರ್ ಸಾವನ್ನು ದೃಢಪಡಿಸಿದೆ.ಮೊಹಮ್ಮದ್ ಸಿನ್ವಾರ್ ಸಾವಿಗೆ ಸಂಬಂಧಿಸಿದ ಯಾವುದೇ ಫೋಟೋ ಹೊರಬಂದಿಲ್ಲ.

ಇಸ್ರೇಲ್ ರಕ್ಷಣಾ ಅಧಿಕಾರಿಗಳ ಹೇಳಿಕೆಯ ಪ್ರಕಾರ, ಮೇ ಆರಂಭದಲ್ಲಿ ಗಾಜಾ ಪಟ್ಟಿಯ ಆಸ್ಪತ್ರೆಯ ಕೆಳಗಿನ ಸುರಂಗದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಉನ್ನತ ಮಿಲಿಟರಿ ಕಮಾಂಡರ್ ಮೊಹಮ್ಮದ್ ಸಿನ್ವಾರ್ ಸಾವನ್ನಪ್ಪಿದ್ದಾನೆ.

ಈ ಕಾರ್ಯಾಚರಣೆಯಲ್ಲಿ, ಇತರ ಇಬ್ಬರು ಹಮಾಸ್ ಕಮಾಂಡರ್‌ಗಳು ಸಹ ಕೊಲ್ಲಲ್ಪಟ್ಟರು. ಸಿನ್ವಾರ್ ಹಮಾಸ್‌ನ ಪ್ರಮುಖ ವ್ಯಕ್ತಿಯಾಗಿದ್ದು, ಒತ್ತೆಯಾಳುಗಳ ಬಿಡುಗಡೆ ಮತ್ತು ಕದನ ವಿರಾಮ ಮಾತುಕತೆಗಳನ್ನು ಹಾಳು ಮಾಡುತ್ತಿದ್ದ. ಇಸ್ರೇಲ್ ಸೇನೆಯ ಹೇಳಿಕೆಯ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:20 pm, Sun, 1 June 25

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು