AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಸುಂಕ ಏರಿಕೆ ಬೆನ್ನಲ್ಲೇ ಭಾರತದ ಬೆಂಬಲಕ್ಕೆ ನಿಂತ ಇಸ್ರೇಲ್

ಭಾರತದ ಮೇಲಿನ ಆಮದು ವಸ್ತುಗಳ ಮೇಲಿನ ಸುಂಕವನ್ನು ಅಮೆರಿಕ ಶೇ. 50ಕ್ಕೆ ಏರಿಸಿದೆ. ಇದರ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಭಾರತಕ್ಕೆ ಬೆಂಬಲಿಸಿದ್ದಾರೆ. ಇದೀಗ ನಡೆಯುತ್ತಿರುವ ಸುಂಕ ವಿವಾದದಲ್ಲಿ ಭಾರತಕ್ಕೆ ನೆತನ್ಯಾಹು ಬೆಂಬಲ ವ್ಯಕ್ತಪಡಿಸಿದ್ದಾರೆ. ನೆತನ್ಯಾಹು ಭಾರತವನ್ನು ಇಸ್ರೇಲ್ ಮತ್ತು ಅಮೆರಿಕ ಎರಡಕ್ಕೂ "ಘನ ಪಾಲುದಾರ". ಅಮೆರಿಕದ ನಡುವೆ ಇರುವ ಅಡೆತಡೆಯನ್ನು ಭಾರತ ನಿಭಾಯಿಸಬಹುದು. ಇದು ತಾತ್ಕಾಲಿಕ ಅಡಚಣೆಯಾಗಿದೆ ಎಂದು ಕರೆದಿದ್ದಾರೆ.

ಅಮೆರಿಕದ ಸುಂಕ ಏರಿಕೆ ಬೆನ್ನಲ್ಲೇ ಭಾರತದ ಬೆಂಬಲಕ್ಕೆ ನಿಂತ ಇಸ್ರೇಲ್
Benjamin Netanyahu
ಸುಷ್ಮಾ ಚಕ್ರೆ
|

Updated on: Aug 07, 2025 | 8:23 PM

Share

ನವದೆಹಲಿ, ಆಗಸ್ಟ್ 7: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತೀಯ ಸರಕುಗಳ ಮೇಲೆ ತೀವ್ರ ಸುಂಕಗಳನ್ನು ಘೋಷಿಸಿದ ನಂತರ ಭಾರತ ಮತ್ತು ಅಮೆರಿಕದ ನಡುವೆ ಹೆಚ್ಚುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಇಂದು ಭಾರತ ಮತ್ತು ಅಮೆರಿಕ ಎರಡೂ ರಾಷ್ಟ್ರಗಳು ಸಾಮಾನ್ಯ ನೆಲೆಯನ್ನು ಕಂಡುಕೊಳ್ಳಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಅಮೆರಿಕ “ಗಮನಾರ್ಹವಾದ ಸಾಮಾನ್ಯ ನೆಲೆಯನ್ನು ಹೊಂದಿವೆ” ಎಂದು ನೆತನ್ಯಾಹು ಹೇಳಿದ್ದಾರೆ. ಹಾಗೇ, ಅದಕ್ಕೆ ಎರಡೂ ದೇಶಗಳ ನಡುವಿನ ಮಾತುಕತೆಯ ಮೂಲಕ ಪರಿಹಾರ ಕೂಡ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎನ್‌ಎನ್-ನ್ಯೂಸ್ 18 ವರದಿಯ ಪ್ರಕಾರ, ಇದೀಗ ನಡೆಯುತ್ತಿರುವ ಸುಂಕ ವಿವಾದದಲ್ಲಿ ಭಾರತದ ನಿಲುವಿಗೆ ಬೆಂಜಮಿನ್ ನೆತನ್ಯಾಹು ಬಲವಾದ ಬೆಂಬಲ ವ್ಯಕ್ತಪಡಿಸಿದ್ದು, “ವಾಷಿಂಗ್ಟನ್ ಡಿಸಿಯಲ್ಲಿ ಭಾರತವು ಘನ ಪಾಲುದಾರ ಎಂಬ ಮೂಲಭೂತ ನಂಬಿಕೆ ಇದೆ” ಎಂದು ಹೇಳಿದ್ದಾರೆ. ಭಾರತದ ಪ್ರಾದೇಶಿಕ ಮಹತ್ವವನ್ನು ಎತ್ತಿ ತೋರಿಸಿದ ನೆತನ್ಯಾಹು, ಇಸ್ರೇಲಿ ನಾಯಕ ಭಾರತವನ್ನು “ಏಷ್ಯಾದಲ್ಲಿ ಎದ್ದು ಕಾಣುವ ದೇಶ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ

ಭಾರತೀಯ ಸರಕುಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ ಕೇವಲ ಒಂದು ವಾರದ ನಂತರ, ಟ್ರಂಪ್ ನಿನ್ನೆ (ಬುಧವಾರ) ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕವನ್ನು ಘೋಷಿಸಿದ್ದರು. ಇದು ಭಾರತ ರಷ್ಯಾದ ತೈಲವನ್ನು ನಿರಂತರವಾಗಿ ಖರೀದಿಸುತ್ತಿರುವುದಕ್ಕೆ ಅಮೆರಿಕ ವಿಧಿಸುತ್ತಿರುವ “ದಂಡ” ಎಂದು ಟ್ರಂಪ್ ಕರೆದಿದ್ದಾರೆ. ಒಟ್ಟಾರೆಯಾಗಿ ಶೇ. 50ರಷ್ಟು ಸುಂಕವು ಈಗ ಒಂದು ದೇಶದ ಮೇಲೆ ವಿಧಿಸಲಾದ ಅತ್ಯಧಿಕವಾಗಿದೆ.

ಇದನ್ನೂ ಓದಿ: ಅಮೆರಿಕದ ಸರಕುಗಳ ಮೇಲೆ ಭಾರತವೂ ಶೇ.50ರಷ್ಟು ಸುಂಕ ವಿಧಿಸಬೇಕು; ಟ್ರಂಪ್ ವಿರುದ್ಧ ಶಶಿ ತರೂರ್ ಕಿಡಿ

ಇದಕ್ಕೆ ಪ್ರತಿಕ್ರಿಯೆಯಾಗಿ, ಪ್ರಧಾನಿ ನರೇಂದ್ರ ಮೋದಿ ಇಂದು ಬಲವಾದ ಸಂದೇಶವನ್ನು ನೀಡಿದ್ದರು. ಭಾರತವು ತನ್ನ ರೈತರು, ಜಾನುವಾರು ಸಾಕಣೆದಾರರು ಮತ್ತು ಮೀನುಗಾರರ ಹಿತಾಸಕ್ತಿಗಳ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. “ಭಾರತ ತನ್ನ ರೈತರು, ಜಾನುವಾರು ಸಾಕಣೆದಾರರು ಮತ್ತು ಮೀನುಗಾರ ಸಹೋದರ ಸಹೋದರಿಯರ ಹಿತಾಸಕ್ತಿಗಳ ಬಗ್ಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ನಾನು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ವೈಯಕ್ತಿಕವಾಗಿ ತಿಳಿದಿದೆ. ಆದರೆ ನಾನು ಅದಕ್ಕೆ ಸಿದ್ಧನಿದ್ದೇನೆ. ಭಾರತ ತನ್ನ ರೈತರೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ಅವರ ಕಲ್ಯಾಣಕ್ಕಾಗಿ ನಾನು ಏನು ಬೇಕಾದರೂ ಎದುರಿಸಲು ಸಿದ್ಧನಿದ್ದೇನೆ” ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು