AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ, 80ಕ್ಕೂ ಅಧಿಕ ಮಂದಿ ಸಾವು: ಹಮಾಸ್

ಇಸ್ರೇಲ್(Israel)​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ನಬ್ಲುಸ್ ನಗರದಲ್ಲಿರುವ ಬಲಾಟ ಶಿಬಿರದ ಮೇಲೆ ನಡೆದಿರುವ ದಾಳಿಯ ಬಗ್ಗೆ ಇಸ್ರೇಲ್ ಸೇನೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 1967ರ ಮಧ್ಯಪ್ರಾಚ್ಯ ಯುದ್ಧ ಸಂದರ್ಭ ವೆಸ್ಟ್​ ಬ್ಯಾಂಕ್ ಪ್ರದೇಶವನ್ನು ಇಸ್ರೇಲ್ ವಶಪಡಿಸಿಕೊಂಡಿದೆ. ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್​ನಲ್ಲಿ ಅಕ್ಟೋಬರ್ 7 ರಂದು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ.

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ, 80ಕ್ಕೂ ಅಧಿಕ ಮಂದಿ ಸಾವು: ಹಮಾಸ್
ನಿರಾಶ್ರಿತರುImage Credit source: NDTV
ನಯನಾ ರಾಜೀವ್
|

Updated on: Nov 19, 2023 | 9:23 AM

Share

ಇಸ್ರೇಲ್(Israel)​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ನಬ್ಲುಸ್ ನಗರದಲ್ಲಿರುವ ಬಲಾಟ ಶಿಬಿರದ ಮೇಲೆ ನಡೆದಿರುವ ದಾಳಿಯ ಬಗ್ಗೆ ಇಸ್ರೇಲ್ ಸೇನೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 1967ರ ಮಧ್ಯಪ್ರಾಚ್ಯ ಯುದ್ಧ ಸಂದರ್ಭ ವೆಸ್ಟ್​ ಬ್ಯಾಂಕ್ ಪ್ರದೇಶವನ್ನು ಇಸ್ರೇಲ್ ವಶಪಡಿಸಿಕೊಂಡಿದೆ. ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್​ನಲ್ಲಿ ಅಕ್ಟೋಬರ್ 7 ರಂದು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ.

ವಿಶ್ವಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ ಸಂಘರ್ಷ ಆರಂಭವಾದಾಗಿನಿಂದ ವೆಸ್ಟ್​ ಬ್ಯಾಂಕ್​ನಲ್ಲಿ 51 ಮಕ್ಕಳು ಸೇರಿದಂತೆ ಕನಿಷ್ಠ 186 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಹಮಾಸ್ ಬಂಡುಕೋರರನ್ನು ಹತ್ತಿಕ್ಕುವವರೆಗೆ ಯುದ್ಧ ನಿಲ್ಲಿಸುವ ಮಾತಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ, ಯುದ್ಧವನ್ನು ಪ್ರಾರಂಭಿಸಿದವರು ನಾವಲ್ಲ, ಆದರೆ ಅಂತ್ಯವು ನಮ್ಮಿಂದಲೇ ಆಗಲಿದೆ ಎಂದು ಹೇಳಿದ್ದಾರೆ.

ಅದೇ ಸಮಯದಲ್ಲಿ, ಹಮಾಸ್ ವಿರುದ್ಧದ ಯುದ್ಧದಲ್ಲಿ ಇಸ್ರೇಲ್‌ಗೆ ಅಮೆರಿಕ ಸಹಾಯ ಮಾಡುವುದನ್ನು ಹಿಜ್ಬುಲ್ಲಾಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಿಜ್ಬುಲ್ಲಾ ಅಮೆರಿಕದ ನೌಕಾಪಡೆಯನ್ನು ಸ್ಫೋಟಿಸುವ ಬೆದರಿಕೆ ಹಾಕಿದೆ. ಹಿಜ್ಬುಲ್ಲಾದ ಈ ಬೆದರಿಕೆಯ ಬಗ್ಗೆ ಅಮೆರಿಕವು ಎಚ್ಚರವಾಗಿದೆ. ಮಾಹಿತಿಯ ಪ್ರಕಾರ, ಹಿಜ್ಬುಲ್ಲಾ ರಷ್ಯಾದ P-800 ಓನಿಕ್ಸ್ ಕ್ಷಿಪಣಿಗಳನ್ನು ಹೊಂದಿದ್ದು, ಅದು ಅಮೆರಿಕದ ಯುದ್ಧನೌಕೆಯನ್ನು ಗುರಿಯಾಗಿಸಬಹುದು.

ಮತ್ತಷ್ಟು ಓದಿ: ಗಾಜಾ ಶಾಲೆಯಲ್ಲಿ ರಾಕೆಟ್ ಲಾಂಚರ್‌, ಮಾರ್ಟರ್ ಶೆಲ್‌ ಪತ್ತೆ ಮಾಡಿದ ಇಸ್ರೇಲ್​​ ಪಡೆ

ಕಳೆದ 42 ದಿನಗಳಿಂದ ಇಸ್ರೇಲ್ ಹಮಾಸ್ ಅನ್ನು ತೊಡೆದುಹಾಕಲು ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸುತ್ತಿದೆ. ಗಾಜಾ ಪಟ್ಟಿಯಲ್ಲಿ ಕೊಲ್ಲಲ್ಪಟ್ಟ ಪ್ಯಾಲೆಸ್ತೀನಿಯರ ಸಂಖ್ಯೆ 11 ಸಾವಿರ 500 ಕ್ಕೆ ಏರಿದೆ. ಇವರಲ್ಲಿ ಸುಮಾರು 4,710 ಮಕ್ಕಳು ಮತ್ತು 3160 ಮಹಿಳೆಯರು ಸೇರಿದ್ದಾರೆ. ಇಸ್ರೇಲ್‌ನ ಕ್ರಮಕ್ಕೆ ಹಲವು ದೇಶಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಕದನ ವಿರಾಮಕ್ಕೆ ಆಗ್ರಹಿಸಿವೆ.

4 ದಿನಕ್ಕೂ ಮೊದಲು ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಡಜನ್‌ಗಟ್ಟಲೆ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ