AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ವೈಮಾನಿಕ ದಾಳಿ, 11 ಮಂದಿ ಸಾವು, 48 ಜನರಿಗೆ ಗಾಯ

ಲೆಬನಾನ್‌ನ ದಕ್ಷಿಣ ಪ್ರದೇಶವಾದ ಟೈರ್‌ನಲ್ಲಿ ಇಸ್ರೇಲ್‌ನ ಪ್ರಮುಖ ದಾಳಿ ನಡೆದಿದೆ. ವೈಮಾನಿಕ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 48 ಜನರು ಗಾಯಗೊಂಡಿದ್ದಾರೆ. ಲೆಬನಾನಿನ ಸಚಿವಾಲಯವು AFP ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದೆ. ಈ ಪ್ರದೇಶವು ಇರಾನ್ ಬೆಂಬಲಿತ ಹಿಜ್ಬುಲ್ಲಾದ ಭದ್ರಕೋಟೆಯಾಗಿದೆ. ಇದಲ್ಲದೇ ಲೆಬನಾನ್ ರಾಜಧಾನಿ ಬೈರುತ್ ಮೇಲೂ ಭಾನುವಾರ ದಾಳಿ ನಡೆದಿದೆ.

ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ವೈಮಾನಿಕ ದಾಳಿ, 11 ಮಂದಿ ಸಾವು, 48 ಜನರಿಗೆ ಗಾಯ
ವೈಮಾನಿಕ ದಾಳಿImage Credit source: The New Arab
ನಯನಾ ರಾಜೀವ್
|

Updated on: Nov 18, 2024 | 12:06 PM

Share

ಲೆಬನಾನ್‌ನ ದಕ್ಷಿಣ ಪ್ರದೇಶವಾದ ಟೈರ್‌ನಲ್ಲಿ ಇಸ್ರೇಲ್‌ನ ಪ್ರಮುಖ ದಾಳಿ ನಡೆದಿದೆ. ವೈಮಾನಿಕ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 48 ಜನರು ಗಾಯಗೊಂಡಿದ್ದಾರೆ. ಲೆಬನಾನಿನ ಸಚಿವಾಲಯವು AFP ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದೆ. ಈ ಪ್ರದೇಶವು ಇರಾನ್ ಬೆಂಬಲಿತ ಹಿಜ್ಬುಲ್ಲಾದ ಭದ್ರಕೋಟೆಯಾಗಿದೆ. ಇದಲ್ಲದೇ ಲೆಬನಾನ್ ರಾಜಧಾನಿ ಬೈರುತ್ ಮೇಲೂ ಭಾನುವಾರ ದಾಳಿ ನಡೆದಿದೆ.

ಇಸ್ರೇಲಿ ಸೈನ್ಯವು ರಾಜಧಾನಿಯ ಹೊರವಲಯವನ್ನು ಗುರಿಯಾಗಿಸಿಕೊಂಡಿದೆ, ಈ ಕಾರಣದಿಂದಾಗಿ ಬೈರುತ್‌ನಲ್ಲಿ ಬಾಂಬ್ ಸ್ಫೋಟದ ಘಟನೆಯನ್ನು ಅತ್ಯಂತ ಅಸಾಮಾನ್ಯವೆಂದು ಪರಿಗಣಿಸಲಾಗಿದೆ. ಲೆಬನಾನ್ ಸರ್ಕಾರ ಹಾಗೂ ಹಿಜ್ಬುಲ್ಲಾ ಮೇಲೆ ಒತ್ತಡ ಬೀರುವುದು ಇಸ್ರೇಲ್​ನ ನಿರಂತರ ದಾಳಿಯ ಉದ್ದೇಶವಾಗಿದೆ.

ಕಳೆದ ಕೆಲವು ವಾರಗಳಲ್ಲಿ ಬೈರುತ್‌ನಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ರಾಜಧಾನಿಯ ಮೇಲಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ನಡೆದ ದಾಳಿಯಲ್ಲಿ ಹಿಜ್ಬುಲ್ಲಾದ ಮಾಧ್ಯಮ ಕಚೇರಿಯ ಮುಖ್ಯಸ್ಥ ಮೊಹಮ್ಮದ್ ಅಫೀಕ್ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 73 ಮಂದಿ ಸಾವು

ಬೈರುತ್ ಮೇಲೆ ನಡೆದ ದಾಳಿಯಲ್ಲಿ ರಾಸ್ ಅಲ್-ನಬಾ ಅಕ್ಕಪಕ್ಕದಲ್ಲಿರುವ ಏಳು ಅಂತಸ್ತಿನ ಕಟ್ಟಡವನ್ನು ನಾಶಪಡಿಸಿತು. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡವು ಕಾರ್ಯನಿರ್ವಹಿಸುತ್ತಿದೆ. ಇಸ್ರೇಲ್ ಈ ಕಟ್ಟಡದ ಮೇಲೆ ದಾಳಿ ನಡೆಸಿದಾಗ, ಮೊಹಮ್ಮದ್ ಅಫೀಕ್ ಅದರೊಳಗೆ ಇದ್ದರು.

ಈ ಕಟ್ಟಡವು ಅರಬ್ ಸೋಷಿಯಲಿಸ್ಟ್ ಬಾತ್ ಪಾರ್ಟಿಯ ಪ್ರಧಾನ ಕಛೇರಿಯನ್ನು ಹೊಂದಿತ್ತು, ಇದು ಹಿಜ್ಬುಲ್ಲಾ ಜೊತೆಗಿನ ಸಣ್ಣ ರಾಜಕೀಯ ಬಣವಾಗಿದೆ. ದಾಳಿಯ ಸಂದರ್ಭದಲ್ಲಿ ಅದರ ನಾಯಕ ಅಲಿ ಹಿಜ್ಜಿ ಕಟ್ಟಡದಲ್ಲಿ ಇರಲಿಲ್ಲ ಎಂಬುದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ