AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ವೈಮಾನಿಕ ದಾಳಿ, 11 ಮಂದಿ ಸಾವು, 48 ಜನರಿಗೆ ಗಾಯ

ಲೆಬನಾನ್‌ನ ದಕ್ಷಿಣ ಪ್ರದೇಶವಾದ ಟೈರ್‌ನಲ್ಲಿ ಇಸ್ರೇಲ್‌ನ ಪ್ರಮುಖ ದಾಳಿ ನಡೆದಿದೆ. ವೈಮಾನಿಕ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 48 ಜನರು ಗಾಯಗೊಂಡಿದ್ದಾರೆ. ಲೆಬನಾನಿನ ಸಚಿವಾಲಯವು AFP ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದೆ. ಈ ಪ್ರದೇಶವು ಇರಾನ್ ಬೆಂಬಲಿತ ಹಿಜ್ಬುಲ್ಲಾದ ಭದ್ರಕೋಟೆಯಾಗಿದೆ. ಇದಲ್ಲದೇ ಲೆಬನಾನ್ ರಾಜಧಾನಿ ಬೈರುತ್ ಮೇಲೂ ಭಾನುವಾರ ದಾಳಿ ನಡೆದಿದೆ.

ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ವೈಮಾನಿಕ ದಾಳಿ, 11 ಮಂದಿ ಸಾವು, 48 ಜನರಿಗೆ ಗಾಯ
ವೈಮಾನಿಕ ದಾಳಿImage Credit source: The New Arab
ನಯನಾ ರಾಜೀವ್
|

Updated on: Nov 18, 2024 | 12:06 PM

Share

ಲೆಬನಾನ್‌ನ ದಕ್ಷಿಣ ಪ್ರದೇಶವಾದ ಟೈರ್‌ನಲ್ಲಿ ಇಸ್ರೇಲ್‌ನ ಪ್ರಮುಖ ದಾಳಿ ನಡೆದಿದೆ. ವೈಮಾನಿಕ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 48 ಜನರು ಗಾಯಗೊಂಡಿದ್ದಾರೆ. ಲೆಬನಾನಿನ ಸಚಿವಾಲಯವು AFP ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದೆ. ಈ ಪ್ರದೇಶವು ಇರಾನ್ ಬೆಂಬಲಿತ ಹಿಜ್ಬುಲ್ಲಾದ ಭದ್ರಕೋಟೆಯಾಗಿದೆ. ಇದಲ್ಲದೇ ಲೆಬನಾನ್ ರಾಜಧಾನಿ ಬೈರುತ್ ಮೇಲೂ ಭಾನುವಾರ ದಾಳಿ ನಡೆದಿದೆ.

ಇಸ್ರೇಲಿ ಸೈನ್ಯವು ರಾಜಧಾನಿಯ ಹೊರವಲಯವನ್ನು ಗುರಿಯಾಗಿಸಿಕೊಂಡಿದೆ, ಈ ಕಾರಣದಿಂದಾಗಿ ಬೈರುತ್‌ನಲ್ಲಿ ಬಾಂಬ್ ಸ್ಫೋಟದ ಘಟನೆಯನ್ನು ಅತ್ಯಂತ ಅಸಾಮಾನ್ಯವೆಂದು ಪರಿಗಣಿಸಲಾಗಿದೆ. ಲೆಬನಾನ್ ಸರ್ಕಾರ ಹಾಗೂ ಹಿಜ್ಬುಲ್ಲಾ ಮೇಲೆ ಒತ್ತಡ ಬೀರುವುದು ಇಸ್ರೇಲ್​ನ ನಿರಂತರ ದಾಳಿಯ ಉದ್ದೇಶವಾಗಿದೆ.

ಕಳೆದ ಕೆಲವು ವಾರಗಳಲ್ಲಿ ಬೈರುತ್‌ನಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ರಾಜಧಾನಿಯ ಮೇಲಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ನಡೆದ ದಾಳಿಯಲ್ಲಿ ಹಿಜ್ಬುಲ್ಲಾದ ಮಾಧ್ಯಮ ಕಚೇರಿಯ ಮುಖ್ಯಸ್ಥ ಮೊಹಮ್ಮದ್ ಅಫೀಕ್ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 73 ಮಂದಿ ಸಾವು

ಬೈರುತ್ ಮೇಲೆ ನಡೆದ ದಾಳಿಯಲ್ಲಿ ರಾಸ್ ಅಲ್-ನಬಾ ಅಕ್ಕಪಕ್ಕದಲ್ಲಿರುವ ಏಳು ಅಂತಸ್ತಿನ ಕಟ್ಟಡವನ್ನು ನಾಶಪಡಿಸಿತು. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡವು ಕಾರ್ಯನಿರ್ವಹಿಸುತ್ತಿದೆ. ಇಸ್ರೇಲ್ ಈ ಕಟ್ಟಡದ ಮೇಲೆ ದಾಳಿ ನಡೆಸಿದಾಗ, ಮೊಹಮ್ಮದ್ ಅಫೀಕ್ ಅದರೊಳಗೆ ಇದ್ದರು.

ಈ ಕಟ್ಟಡವು ಅರಬ್ ಸೋಷಿಯಲಿಸ್ಟ್ ಬಾತ್ ಪಾರ್ಟಿಯ ಪ್ರಧಾನ ಕಛೇರಿಯನ್ನು ಹೊಂದಿತ್ತು, ಇದು ಹಿಜ್ಬುಲ್ಲಾ ಜೊತೆಗಿನ ಸಣ್ಣ ರಾಜಕೀಯ ಬಣವಾಗಿದೆ. ದಾಳಿಯ ಸಂದರ್ಭದಲ್ಲಿ ಅದರ ನಾಯಕ ಅಲಿ ಹಿಜ್ಜಿ ಕಟ್ಟಡದಲ್ಲಿ ಇರಲಿಲ್ಲ ಎಂಬುದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು