AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 19ಕ್ಕೂ ಅಧಿಕ ಮಂದಿ ಸಾವು

ಇಸ್ರೇಲ್​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 19ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗಾಜಾದ ಅಲ್​-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಕ್ಲಿನಿಕ್​ನ ಹೊರಭಾಗಕ್ಕೆ 4 ಶೆಲ್​ಗಳು ಬಂದು ಅಪ್ಪಳಿಸಿವೆ.

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 19ಕ್ಕೂ ಅಧಿಕ ಮಂದಿ ಸಾವು
ಗಾಜಾ
ನಯನಾ ರಾಜೀವ್
|

Updated on: Jun 06, 2024 | 8:34 AM

Share

ಇಸ್ರೇಲ್​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 19ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗಾಜಾದ ಅಲ್​-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಕ್ಲಿನಿಕ್​ನ ಹೊರಭಾಗಕ್ಕೆ 4 ಶೆಲ್​ಗಳು ಬಂದು ಅಪ್ಪಳಿಸಿವೆ.

ಹಮಾಸ್​ ಉಗ್ರರು ಅಕ್ಟೋಬರ್​ 7ರಂದು ಇಸ್ರೇಲ್​ನ ದಕ್ಷಿಣ ಭಾಗದಲ್ಲಿ ಸಾಳಿ ನಡೆಸಿ 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಜತೆಗೆ 250ಕ್ಕೂ ಹೆಚ್ಚು ಮಂದಿಯನ್ನು ಅಪಹರಿಸಿದ್ದರು.

ಮೇ 29ರಂದು ದಾಳಿ ನಡೆಸಿತ್ತು ಇಸ್ರೇಲ್ ವಾಯು ದಾಳಿಗೆ ಗಾಜಾದ ರಫಾದಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ ಕನಿಷ್ಠ 45 ಮಂದಿ ಮೃತಪಟ್ಟಿದ್ದರು, ಕಳೆದ ತಿಂಗಳು ಈ ಘಟನೆ ವರದಿಯಾಗಿತ್ತು.  ಇದರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ರಫಾದಲ್ಲಿ ನಡೆಸುತ್ತಿರುವ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯವು ಇಸ್ರೇಲ್‌ಗೆ ಆದೇಶಿಸಿದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿರುವುದು ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಗಾಜಾ ಭಾಗದಲ್ಲಿನ ಗಡಿಯಲ್ಲಿ ಕಳೆದ ತಿಂಗಳ ಆರಂಭದಲ್ಲಿ ಭೂ ಕಾರ್ಯಾಚರಣೆ ನಡೆಸಿದ ಇಸ್ರೇಲ್, ಗಡಿಯಲ್ಲಿ ದಾಟುವ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಿದೆ. ಅದಕ್ಕೂ ಮುನ್ನ ಮಾನವೀಯ ನೆರವು ಹರಿಸಲು ರಫಾ ಪ್ರಮುಖ ಪ್ರವೇಶ ಕೇಂದ್ರವಾಗಿತ್ತು.

ಟೆಲ್ ಅವಿವ್ ಪ್ರದೇಶದ ಮೇಲೆ ಹಮಾಸ್ ಉಗ್ರರು ರಾಕೆಟ್‌ಗಳ ದಾಳಿ ನಡೆಸಿದ ಬೆನ್ನಲ್ಲೇ ಭಾನುವಾರ ತಡರಾತ್ರಿ ರಫಾ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿತ್ತು. ಗಡಿ ಪಟ್ಟಣವಾದ ರಫಾದಲ್ಲಿ ಅಧಿಕ ಸಂಖ್ಯೆಯಲ್ಲಿ ನಿರಾಶ್ರಿತರಿದ್ದು, ಅವರಿಗೆ ಮೂಲ ಸೌಕರ್ಯಗಳು, ಮಾನವೀಯ ನೆರವುಗಳನ್ನು ಒದಗಿಸುವ ಸಲುವಾಗಿ ಅಲ್ಲಿನ ಕಾರ್ಯಾಚರಣೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯ ಸೂಚಿಸಿತ್ತು. ಆದರೆ ಇಸ್ರೇಲಿ ಪಡೆಗಳು ಇಲ್ಲಿನ ಆಕ್ರಮಣವನ್ನು ಮತ್ತಷ್ಟು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ