AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 19ಕ್ಕೂ ಅಧಿಕ ಮಂದಿ ಸಾವು

ಇಸ್ರೇಲ್​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 19ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗಾಜಾದ ಅಲ್​-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಕ್ಲಿನಿಕ್​ನ ಹೊರಭಾಗಕ್ಕೆ 4 ಶೆಲ್​ಗಳು ಬಂದು ಅಪ್ಪಳಿಸಿವೆ.

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 19ಕ್ಕೂ ಅಧಿಕ ಮಂದಿ ಸಾವು
ಗಾಜಾ
ನಯನಾ ರಾಜೀವ್
|

Updated on: Jun 06, 2024 | 8:34 AM

Share

ಇಸ್ರೇಲ್​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 19ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗಾಜಾದ ಅಲ್​-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಕ್ಲಿನಿಕ್​ನ ಹೊರಭಾಗಕ್ಕೆ 4 ಶೆಲ್​ಗಳು ಬಂದು ಅಪ್ಪಳಿಸಿವೆ.

ಹಮಾಸ್​ ಉಗ್ರರು ಅಕ್ಟೋಬರ್​ 7ರಂದು ಇಸ್ರೇಲ್​ನ ದಕ್ಷಿಣ ಭಾಗದಲ್ಲಿ ಸಾಳಿ ನಡೆಸಿ 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಜತೆಗೆ 250ಕ್ಕೂ ಹೆಚ್ಚು ಮಂದಿಯನ್ನು ಅಪಹರಿಸಿದ್ದರು.

ಮೇ 29ರಂದು ದಾಳಿ ನಡೆಸಿತ್ತು ಇಸ್ರೇಲ್ ವಾಯು ದಾಳಿಗೆ ಗಾಜಾದ ರಫಾದಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ ಕನಿಷ್ಠ 45 ಮಂದಿ ಮೃತಪಟ್ಟಿದ್ದರು, ಕಳೆದ ತಿಂಗಳು ಈ ಘಟನೆ ವರದಿಯಾಗಿತ್ತು.  ಇದರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ರಫಾದಲ್ಲಿ ನಡೆಸುತ್ತಿರುವ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯವು ಇಸ್ರೇಲ್‌ಗೆ ಆದೇಶಿಸಿದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿರುವುದು ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಗಾಜಾ ಭಾಗದಲ್ಲಿನ ಗಡಿಯಲ್ಲಿ ಕಳೆದ ತಿಂಗಳ ಆರಂಭದಲ್ಲಿ ಭೂ ಕಾರ್ಯಾಚರಣೆ ನಡೆಸಿದ ಇಸ್ರೇಲ್, ಗಡಿಯಲ್ಲಿ ದಾಟುವ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಿದೆ. ಅದಕ್ಕೂ ಮುನ್ನ ಮಾನವೀಯ ನೆರವು ಹರಿಸಲು ರಫಾ ಪ್ರಮುಖ ಪ್ರವೇಶ ಕೇಂದ್ರವಾಗಿತ್ತು.

ಟೆಲ್ ಅವಿವ್ ಪ್ರದೇಶದ ಮೇಲೆ ಹಮಾಸ್ ಉಗ್ರರು ರಾಕೆಟ್‌ಗಳ ದಾಳಿ ನಡೆಸಿದ ಬೆನ್ನಲ್ಲೇ ಭಾನುವಾರ ತಡರಾತ್ರಿ ರಫಾ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿತ್ತು. ಗಡಿ ಪಟ್ಟಣವಾದ ರಫಾದಲ್ಲಿ ಅಧಿಕ ಸಂಖ್ಯೆಯಲ್ಲಿ ನಿರಾಶ್ರಿತರಿದ್ದು, ಅವರಿಗೆ ಮೂಲ ಸೌಕರ್ಯಗಳು, ಮಾನವೀಯ ನೆರವುಗಳನ್ನು ಒದಗಿಸುವ ಸಲುವಾಗಿ ಅಲ್ಲಿನ ಕಾರ್ಯಾಚರಣೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯ ಸೂಚಿಸಿತ್ತು. ಆದರೆ ಇಸ್ರೇಲಿ ಪಡೆಗಳು ಇಲ್ಲಿನ ಆಕ್ರಮಣವನ್ನು ಮತ್ತಷ್ಟು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ