AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 19ಕ್ಕೂ ಅಧಿಕ ಮಂದಿ ಸಾವು

ಇಸ್ರೇಲ್​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 19ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗಾಜಾದ ಅಲ್​-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಕ್ಲಿನಿಕ್​ನ ಹೊರಭಾಗಕ್ಕೆ 4 ಶೆಲ್​ಗಳು ಬಂದು ಅಪ್ಪಳಿಸಿವೆ.

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 19ಕ್ಕೂ ಅಧಿಕ ಮಂದಿ ಸಾವು
ಗಾಜಾ
ನಯನಾ ರಾಜೀವ್
|

Updated on: Jun 06, 2024 | 8:34 AM

Share

ಇಸ್ರೇಲ್​ ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 19ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗಾಜಾದ ಅಲ್​-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಕ್ಲಿನಿಕ್​ನ ಹೊರಭಾಗಕ್ಕೆ 4 ಶೆಲ್​ಗಳು ಬಂದು ಅಪ್ಪಳಿಸಿವೆ.

ಹಮಾಸ್​ ಉಗ್ರರು ಅಕ್ಟೋಬರ್​ 7ರಂದು ಇಸ್ರೇಲ್​ನ ದಕ್ಷಿಣ ಭಾಗದಲ್ಲಿ ಸಾಳಿ ನಡೆಸಿ 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಜತೆಗೆ 250ಕ್ಕೂ ಹೆಚ್ಚು ಮಂದಿಯನ್ನು ಅಪಹರಿಸಿದ್ದರು.

ಮೇ 29ರಂದು ದಾಳಿ ನಡೆಸಿತ್ತು ಇಸ್ರೇಲ್ ವಾಯು ದಾಳಿಗೆ ಗಾಜಾದ ರಫಾದಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ ಕನಿಷ್ಠ 45 ಮಂದಿ ಮೃತಪಟ್ಟಿದ್ದರು, ಕಳೆದ ತಿಂಗಳು ಈ ಘಟನೆ ವರದಿಯಾಗಿತ್ತು.  ಇದರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ರಫಾದಲ್ಲಿ ನಡೆಸುತ್ತಿರುವ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯವು ಇಸ್ರೇಲ್‌ಗೆ ಆದೇಶಿಸಿದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿರುವುದು ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಗಾಜಾ ಭಾಗದಲ್ಲಿನ ಗಡಿಯಲ್ಲಿ ಕಳೆದ ತಿಂಗಳ ಆರಂಭದಲ್ಲಿ ಭೂ ಕಾರ್ಯಾಚರಣೆ ನಡೆಸಿದ ಇಸ್ರೇಲ್, ಗಡಿಯಲ್ಲಿ ದಾಟುವ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಿದೆ. ಅದಕ್ಕೂ ಮುನ್ನ ಮಾನವೀಯ ನೆರವು ಹರಿಸಲು ರಫಾ ಪ್ರಮುಖ ಪ್ರವೇಶ ಕೇಂದ್ರವಾಗಿತ್ತು.

ಟೆಲ್ ಅವಿವ್ ಪ್ರದೇಶದ ಮೇಲೆ ಹಮಾಸ್ ಉಗ್ರರು ರಾಕೆಟ್‌ಗಳ ದಾಳಿ ನಡೆಸಿದ ಬೆನ್ನಲ್ಲೇ ಭಾನುವಾರ ತಡರಾತ್ರಿ ರಫಾ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿತ್ತು. ಗಡಿ ಪಟ್ಟಣವಾದ ರಫಾದಲ್ಲಿ ಅಧಿಕ ಸಂಖ್ಯೆಯಲ್ಲಿ ನಿರಾಶ್ರಿತರಿದ್ದು, ಅವರಿಗೆ ಮೂಲ ಸೌಕರ್ಯಗಳು, ಮಾನವೀಯ ನೆರವುಗಳನ್ನು ಒದಗಿಸುವ ಸಲುವಾಗಿ ಅಲ್ಲಿನ ಕಾರ್ಯಾಚರಣೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯ ಸೂಚಿಸಿತ್ತು. ಆದರೆ ಇಸ್ರೇಲಿ ಪಡೆಗಳು ಇಲ್ಲಿನ ಆಕ್ರಮಣವನ್ನು ಮತ್ತಷ್ಟು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ