Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ಜಾಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ ಜಜೀರಾ ಪ್ರಕಾರ, ಹೆಚ್ಚಿನ ದೇಹಗಳು ಅವಶೇಷಗಳ ಒಳಗೆ ಸಿಲುಕಿಕೊಂಡಿರಬಹುದು ಎನ್ನಲಾಗಿದೆ. ಮಕ್ಕಳು ಸೇರಿದಂತೆ ಗಾಯಗೊಂಡ ಅನೇಕ ಜನರನ್ನು ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಗಾಜಾ ಜಾಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು
ಗಾಜಾ ಜಾಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವುImage Credit source: Getty Images
Follow us
Ganapathi Sharma
|

Updated on: Dec 18, 2023 | 10:33 AM

ನವದೆಹಲಿ, ಡಿಸೆಂಬರ್ 18: ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Isrel) ಪಡೆಗಳು ನಡೆಸಿದ ಇತ್ತೀಚಿನ ದಾಳಿಯಲ್ಲಿ ಭಾನುವಾರ ಕನಿಷ್ಠ 90 ಪ್ಯಾಲೆಸ್ತೀನಿಯರು (Palestine) ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಜಬಾಲಿಯಾ ಪಟ್ಟಣದಲ್ಲಿರುವ ಅಲ್-ಬರ್ಶ್ ಮತ್ತು ಅಲ್ವಾನ್​​ಗಳಿಗೆ ಸೇರಿದ ವಸತಿ ಸಂಕೀರ್ಣಗಳ ಮೇಲೆ ದಾಳಿ ನಡೆದಿತ್ತು ಎಂದು ಪ್ಯಾಲೆಸ್ತೀನ್ ಸುದ್ದಿಸಂಸ್ಥೆ ವಾಫಾ ತಿಳಿಸಿದೆ.

ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ ಜಜೀರಾ ಪ್ರಕಾರ, ಹೆಚ್ಚಿನ ದೇಹಗಳು ಅವಶೇಷಗಳ ಒಳಗೆ ಸಿಲುಕಿಕೊಂಡಿರಬಹುದು ಎನ್ನಲಾಗಿದೆ. ಮಕ್ಕಳು ಸೇರಿದಂತೆ ಗಾಯಗೊಂಡ ಅನೇಕ ಜನರನ್ನು ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ವೈದ್ಯಕೀಯ ಕೇಂದ್ರಗಳು ಈಗಾಗಲೇ ರೋಗಿಗಳಿಂದ ತುಂಬಿ ತುಳುಕುತ್ತಿವೆ.

ಇಸ್ರೇಲ್ ದಾಳಿಯಲ್ಲಿ ಮೃತಪಟ್ಟವರಲ್ಲಿ ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೆಹಾಬ್ ಅವರ ಪುತ್ರನೂ ಸೇರಿದ್ದಾನೆ ಎಂದು ಗುಂಪಿನ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಈ ಮಧ್ಯೆ, ಗಾಜಾದ ಮತ್ತೊಂದು ಕಡೆಯಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ನಾಲ್ಕು ಜನ ಮೃತಪಟ್ಟಿದ್ದಾರೆ. ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಹಠಾತ್ ದಾಳಿಯ ನಂತರ ಇಲ್ಲಿಯವರೆಗೆ ನಡೆದ ಸಂಘರ್ಷದಲ್ಲಿ 19,000 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲು; ವಿಷಪ್ರಾಶನದ ಶಂಕೆ

ಏತನ್ಮಧ್ಯೆ, ದಕ್ಷಿಣ ಗಾಜಾದಲ್ಲಿ ಖಾನ್ ಯೂನಿಸ್ ಮತ್ತು ರಫಾ ನಗರಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ಪಡೆಗಳು ಫಿರಂಗಿ ಶೆಲ್ ದಾಳಿಯನ್ನು ತೀವ್ರಗೊಳಿಸಿವೆ. ಅಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯಾದವರು ಆಶ್ರಯ ಪಡೆದಿದ್ದಾರೆ. ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ, 1.9 ಮಿಲಿಯನ್ ಜನರು, ಗಾಜಾದ ಜನಸಂಖ್ಯೆಯ ಸುಮಾರು 80 ಪ್ರತಿಶತದಷ್ಟು ಜನರು ಯುದ್ಧದಿಂದಾಗಿ ಸ್ಥಳಾಂತರಗೊಂಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ