AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Istanbul Blast: ಟರ್ಕಿಯ ಇಸ್ತಾಂಬುಲ್ ಸ್ಫೋಟ ಪ್ರಕರಣ; ಬಾಂಬ್ ಇಟ್ಟ ಶಂಕಿತನ ಬಂಧನ

ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಕಾರಣವಾದ ಶಂಕಿತನನ್ನು ಟರ್ಕಿಶ್ ಪೊಲೀಸರು ಬಂಧಿಸಿದ್ದಾರೆ.

Istanbul Blast: ಟರ್ಕಿಯ ಇಸ್ತಾಂಬುಲ್ ಸ್ಫೋಟ ಪ್ರಕರಣ; ಬಾಂಬ್ ಇಟ್ಟ ಶಂಕಿತನ ಬಂಧನ
ಟರ್ಕಿ ಪೊಲೀಸ್
TV9 Web
| Updated By: ಸುಷ್ಮಾ ಚಕ್ರೆ|

Updated on: Nov 14, 2022 | 10:12 AM

Share

ಇಸ್ತಾಂಬುಲ್: ಟರ್ಕಿಯ ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ (Bomb Blast) ಕಾರಣವಾದ ಬಾಂಬ್ ಅನ್ನು ಇಟ್ಟುಹೋದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಟರ್ಕಿಯ ಇಸ್ತಾಂಬುಲ್‌ನ (Istanbul Blast) ಪ್ರಸಿದ್ಧ ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ನಲ್ಲಿ ಶನಿವಾರ ಮಾರಣಾಂತಿಕ ಸ್ಫೋಟ ಸಂಭವಿಸಿತ್ತು. ಈ ದುರಂತದಲ್ಲಿ 6 ಜನರು ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದರು. ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ ಯಾವಾಗಲೂ ಪ್ರವಾಸಿಗರಿಂದ ತುಂಬಿರುವ ಸ್ಥಳವಾಗಿದ್ದರಿಂದ ಇದೇ ಪ್ರದೇಶವನ್ನು ಬಾಂಬ್ ಸ್ಫೋಟಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು.

ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಈ ಬಾಂಬ್ ದಾಳಿಯ ಹಿಂದೆ ಭಯೋತ್ಪಾದನೆಯ ಕೈವಾಡದ ಶಂಕೆಯಿದೆ ಎಂದು ಹೇಳಿದ್ದರು. ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಕಾರಣವಾದ ಶಂಕಿತನನ್ನು ಟರ್ಕಿಶ್ ಪೊಲೀಸರು ಬಂಧಿಸಿದ್ದಾರೆ ಎಂದು ಸರ್ಕಾರಿ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ: Istanbul Blast: ಟರ್ಕಿಯ ಇಸ್ತಾಂಬುಲ್​ನಲ್ಲಿ ಮಹಿಳಾ ಉಗ್ರರಿಂದ ಬಾಂಬ್ ಸ್ಫೋಟ; 6 ಜನ ಸಾವು, 81 ಮಂದಿಗೆ ಗಾಯ

“ಈ ಭೀಕರ ಭಯೋತ್ಪಾದಕ ದಾಳಿಗೆ ಕಾರಣರಾದವರ ವಿರುದ್ಧ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ” ಎಂದು ಟರ್ಕಿಶ್ ಅಧಿಕಾರಿಗಳು ಹೇಳಿದ್ದಾರೆ. ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ಮಹಿಳಾ ಭಯೋತ್ಪಾದಕರು ಶಾಪಿಂಗ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಿಸಿರುವ ಶಂಕೆ ಇದೆ ಎಂದು ಹೇಳಿದ್ದರು.

ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಗಳು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಹಿಳೆಯೊಬ್ಬರು ಸುಮಾರು 40 ನಿಮಿಷಗಳ ಕಾಲ ಬೆಂಚ್ ಮೇಲೆ ಕುಳಿತಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಆಕೆ ಈ ಬಾಂಬ್ ಸ್ಫೋಟ ನಡೆಯುವುದಕ್ಕೂ ಕೆಲವೇ ನಿಮಿಷಗಳ ಮೊದಲು ಆ ಜಾಗದಿಂದ ಹೊರಟುಹೋಗಿದ್ದಾರೆ. ಇಬ್ಬರು ಪುರುಷ ದಾಳಿಕೋರರು ಸಹ ಆ ಮಹಿಳೆಯೊಂದಿಗೆ ಸೇರಿ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್