AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗಿನ ವ್ಯಾಪಾರ ಏಕಪಕ್ಷೀಯ ವಿಪತ್ತು; ಡೊನಾಲ್ಡ್ ಟ್ರಂಪ್

ಅಮೆರಿಕದ ಮೇಲಿನ ಸುಂಕವನ್ನು ಭಾರತ ಶೂನ್ಯಕ್ಕೆ ಇಳಿಸಲು ಮುಂದಾಗಿದೆ. ಆದರೆ, ಈಗಾಗಲೇ ಬಹಳ ತಡವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತದ ಜೊತೆಗಿನ ಸಂಬಂಧಗಳ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್ ಭಾರತದೊಂದಿಗಿನ ವ್ಯಾಪಾರ 'ಏಕಪಕ್ಷೀಯ ವಿಪತ್ತು' ಎಂದು ಹೇಳಿದ್ದಾರೆ. ಚೀನಾದ ಶೃಂಗಸಭೆಯಲ್ಲಿ ರಷ್ಯಾ, ಚೀನಾ ಅಧ್ಯಕ್ಷರ ಜೊತೆ ಮೋದಿ ಆತ್ಮೀಯವಾಗಿ ಕಾಣಿಸಿಕೊಂಡ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ಭಾರತದೊಂದಿಗಿನ ವ್ಯಾಪಾರ ಏಕಪಕ್ಷೀಯ ವಿಪತ್ತು; ಡೊನಾಲ್ಡ್ ಟ್ರಂಪ್
Trump
ಸುಷ್ಮಾ ಚಕ್ರೆ
|

Updated on: Sep 01, 2025 | 9:16 PM

Share

ವಾಷಿಂಗ್ಟನ್, ಸೆಪ್ಟೆಂಬರ್ 1: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (donald trump) ಇಂದು ಭಾರತ-ಅಮೆರಿಕ ವ್ಯಾಪಾರವನ್ನು “ಏಕಪಕ್ಷೀಯ ವಿಪತ್ತು” ಎಂದು ಕರೆದಿದ್ದಾರೆ. ಹಾಗೇ, ಭಾರತವು ಅಮೆರಿಕದ ಸರಕುಗಳ ಮೇಲಿನ ತನ್ನ ಆಮದು ತೆರಿಗೆಯನ್ನು ಶೂನ್ಯಕ್ಕೆ ಇಳಿಸಲು ಮುಂದಾಗಿದೆ. ಆದರೆ, ಭಾರತ ಈ ನಿರ್ಧಾರ ತೆಗೆದುಕೊಳ್ಳುವುದು ಬಹಳ ತಡವಾಗಿದೆ ಎಂದಿದ್ದಾರೆ. ಅಮೆರಿಕ ಭಾರತದ ಮೇಲೆ ಶೇ. 50ರಷ್ಟು ಆಮದು ಸುಂಕ ವಿಧಿಸಿದೆ. ಇದರ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಟ್ರಂಪ್ ಸುಂಕ ನೀತಿಗೆ ಟಾಂಗ್ ನೀಡಲೆಂಬಂತೆ ಚೀನಾದ ಶೃಂಗಸಭೆಯಲ್ಲಿ ರಷ್ಯನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಬಹಳ ಆತ್ಮೀಯವಾಗಿ ಕಾಣಿಸಿಕೊಂಡಿದ್ದು, ಖಾಸಗಿಯಾಗಿ ಮಾತುಕತೆಯನ್ನೂ ನಡೆಸಿದ್ದಾರೆ.

ರಷ್ಯಾದ ತೈಲ ಖರೀದಿಗೆ ಸಂಬಂಧಿಸಿದಂತೆ ಟ್ರಂಪ್ ಭಾರತೀಯ ಆಮದುಗಳ ಮೇಲೆ 50% ಸುಂಕ ವಿಧಿಸಿದ ಹಿನ್ನೆಲೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಕ್ಕೆ ಭೇಟಿ ನೀಡಿ ಅಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ನಂತರ ಟ್ರಂಪ್ ಅವರ ಈ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಕಾರಿನಲ್ಲಿ ಹೋಗಲು 10 ನಿಮಿಷ ಕಾದ ಪುಟಿನ್; ಟ್ರೆಂಡ್ ಆಯ್ತು ಫೋಟೋ

“ಕೆಲವು ಜನರು ಅರ್ಥಮಾಡಿಕೊಳ್ಳಬೇಕಾದ ವಿಷಯವೆಂದರೆ ನಾವು ಭಾರತದೊಂದಿಗೆ ಬಹಳ ಕಡಿಮೆ ವ್ಯವಹಾರ ಮಾಡುತ್ತೇವೆ, ಆದರೆ ಅವರು ನಮ್ಮೊಂದಿಗೆ ಅಪಾರ ಪ್ರಮಾಣದ ವ್ಯವಹಾರ ಮಾಡುತ್ತಾರೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಅವರು ನಮಗೆ ಬೃಹತ್ ಪ್ರಮಾಣದ ಸರಕುಗಳನ್ನು ಮಾರಾಟ ಮಾಡುತ್ತಾರೆ. ನಾವು ಅವರ ಅತಿದೊಡ್ಡ “ಕ್ಲೈಂಟ್”. ಆದರೆ ನಾವು ಭಾರತಕ್ಕೆ ಬಹಳ ಕಡಿಮೆ ಮಾರಾಟ ಮಾಡುತ್ತೇವೆ. ಈ ವ್ಯಾಪಾರವೊಂದು ಏಕಪಕ್ಷೀಯ ವಿಪತ್ತು ಎಂದಿದ್ದಾರೆ.

“ಭಾರತವು ಇಲ್ಲಿಯವರೆಗೆ ಯಾವುದೇ ದೇಶಕ್ಕಿಂತ ಹೆಚ್ಚಿನ ಸುಂಕಗಳನ್ನು ನಮಗೆ ವಿಧಿಸಿದೆ. ಇದು ಸಂಪೂರ್ಣವಾಗಿ ಏಕಪಕ್ಷೀಯ ವಿಪತ್ತು! ಅಲ್ಲದೆ, ಭಾರತವು ತನ್ನ ಹೆಚ್ಚಿನ ತೈಲ ಮತ್ತು ಮಿಲಿಟರಿ ಉತ್ಪನ್ನಗಳನ್ನು ರಷ್ಯಾದಿಂದ ಖರೀದಿಸುತ್ತದೆ, ಯುಎಸ್‌ನಿಂದ ಬಹಳ ಕಡಿಮೆ ಖರೀದಿ ಮಾಡುತ್ತದೆ. ಅವರು ಈಗ ತಮ್ಮ ಸುಂಕಗಳನ್ನು ಶೂನ್ಯಕ್ಕೆ ಇಳಿಸಲು ಮುಂದಾಗಿದ್ದಾರೆ, ಆದರೆ ಅದು ಬಹಳ ತಡವಾಗಿದೆ. ಅವರು ವರ್ಷಗಳ ಹಿಂದೆಯೇ ಹಾಗೆ ಮಾಡಬೇಕಾಗಿತ್ತು” ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!