AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ

ಇಟಲಿ ರಾಜಧಾನಿ ರೋಮ್​ನ ಸ್ಪಲ್ಲಾಂಜಾನಿ ಆಸ್ಪತ್ರೆಯ ಮೂವರು ಆರೋಗ್ಯ ಕಾರ್ಯಕರ್ತರಿಗೆ ಫೈಜರ್ ಮತ್ತು ಬಯೋಎನ್​ಟೆಕ್ ಅಭಿವೃದ್ಧಿಪಡಿಸಿದ ಲಸಿಕೆಯನ್ನು ನೀಡಲಾಗಿದೆ ಎಂದು ಸಾಂಕ್ರಾಮಿಕ ರೋಗದ ಆಯುಕ್ತ ಡೊಮೆನಿಕೊ ಅರ್ಕುರಿ ಹೇಳಿದ್ದಾರೆ.

ಇಟಲಿಯಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 7:46 PM

Share

ರೋಮ್​: ಇಟಲಿಯಲ್ಲಿ ಕೊರೊನಾ ರೋಗಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಇಂದಿನಿಂದ (ಡಿ.27) ಆರಂಭಗೊಂಡಿದೆ. ಆರಂಭದ ದಿನಗಳಲ್ಲಿ ಇಟಲಿಯಲ್ಲಿ ದೊಡ್ಡ ಪ್ರಮಾಣದ ಕೊರೊನಾ ಅಲೆ ಕಾಣಿಸಿಕೊಂಡಿತ್ತು. ಇದರಿಂದ ಸಾಕಷ್ಟು ಮಂದಿ ಮೃತಪಟ್ಟಿದ್ದರು. ಈಗ ಇಟಲಿ ಸರ್ಕಾರ ಕೊರೊನಾ ಲಸಿಕೆ ನೀಡಲು ಆರಂಭಿಸಿದ್ದು, ಅಲ್ಲಿನ ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ಇಟಲಿ ರಾಜಧಾನಿ ರೋಮ್​ನ ಸ್ಪಲ್ಲಾಂಜಾನಿ ಆಸ್ಪತ್ರೆಯ ಮೂವರು ಆರೋಗ್ಯ ಕಾರ್ಯಕರ್ತರಿಗೆ ಫೈಜರ್ ಮತ್ತು ಬಯೋಎನ್​ಟೆಕ್ ಅಭಿವೃದ್ಧಿಪಡಿಸಿದ ಲಸಿಕೆಯನ್ನು ನೀಡಲಾಗಿದೆ ಎಂದು ಸಾಂಕ್ರಾಮಿಕ ರೋಗದ ಆಯುಕ್ತ ಡೊಮೆನಿಕೊ ಅರ್ಕುರಿ ಹೇಳಿದ್ದಾರೆ.

ಕೊರೊನಾ ಲಸಿಕೆ ಪರಿಣಾಮಕಾರಿಯಾಗಿದೆ. ಇಟಲಿಗರ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣ. ಇದು ಕೊರೊನಾ ಅಂತ್ಯದ ಆರಂಭವಾಗಿದೆ ಎಂದು ಇಟಲಿ ವೈದ್ಯರು ಹೇಳಿದ್ದಾರೆ. ಸಾಕಷ್ಟು ರಾಷ್ಟ್ರಗಳಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಿದೆ. ಭಾರತದಲ್ಲೂ ಶೀಘ್ರವೇ ಕೊರೊನಾ ಔಷಧ ಸಿಗುವ ನಿರೀಕ್ಷೆ ಇದೆ.

ವಿಶ್ವದಲ್ಲಿ 20 ಲಕ್ಷ ಕೊರೊನಾ ಪ್ರಕರಣ ದಾಟಿದ ಎಂಟನೇ ರಾಷ್ಟ್ರ ಎನ್ನುವ ಕುಖ್ಯಾತಿಗೆ ಇಟಲಿ ಪಾತ್ರವಾಗಿದೆ. ಇಟಲಿಯಲ್ಲಿ ಈವರೆಗೆ ಕೊರೊನಾದಿಂದ 70,999 ಜನರು ಮೃತಪಟ್ಟಿದ್ದಾರೆ. ಕೊರೊನಾಗೆ ಅತಿ ಹೆಚ್ಚು ಬಲಿಯಾದ ರಾಷ್ಟ್ರಗಳ ಪೈಕಿ ಇಟಲಿ ಐದನೇ ಸ್ಥಾನದಲ್ಲಿದೆ.

ಇನ್ನು, ಫೈಜರ್​ ಸಂಸ್ಥೆಯ ಕೊರೊನಾ ಲಸಿಕೆ ಅಡ್ಡಪರಿಣಾಮ ಬೀರುವ ಬಗ್ಗೆಯೂ ವರದಿಯಾಗಿದೆ. ಫೈಜರ್ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆ ಊಹೆಗೂ ಮೀರಿದ ಅಡ್ಡಪರಿಣಾಮ ಬೀರುತ್ತಿದೆ ಎಂದು ಅಮೆರಿಕಾದ ಆಪರೇಷನ್​ ವಾರ್ಪ್​ ಸ್ಪೀಡ್​ನ (Operation Warp Speed) ಮುಖ್ಯ ವೈಜ್ಞಾನಿಕ ಸಲಹೆಗಾರ ಡಾ. ಮಾನ್ಸೆಫ್ ಸ್ಲಾಯ್ ಆತಂಕ ವ್ಯಕ್ತಪಡಿಸಿದ್ದರು.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ – ಡಾ. ಮಾನ್ಸೆಫ್ ಸ್ಲಾಯ್

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'