AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mario Draghi ಇಟಲಿ ಪ್ರಧಾನಿ ಮಾರಿಯೊ ಡ್ರಾಘಿ ರಾಜೀನಾಮೆ

ಅಧ್ಯಕ್ಷ ಸರ್ಗಿಯೊ ಮಾಟರೆಲ್ಲಾ ಅವರಿಗೆ ಡ್ರಾಘಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸದ್ಯ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಅಧ್ಯಕ್ಷರು ಅವರಲ್ಲಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Mario Draghi ಇಟಲಿ ಪ್ರಧಾನಿ ಮಾರಿಯೊ ಡ್ರಾಘಿ ರಾಜೀನಾಮೆ
ಮಾರಿಯೊ ಡ್ರಾಘಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 21, 2022 | 3:01 PM

Share

ರೋಮ್: ಇಟಲಿ (Italy)  ಪ್ರಧಾನಿ ಮಾರಿಯೊ ಡ್ರಾಘಿ(Mario Draghi) ಗುರುವಾರ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಸರ್ಗಿಯೊ ಮಾಟರೆಲ್ಲಾ (President Sergio Mattarella) ಅವರಿಗೆ ಡ್ರಾಘಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸದ್ಯ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಅಧ್ಯಕ್ಷರು ಅವರಲ್ಲಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಅಧಕ್ಷ ಮಾಟರೆಲ್ಲಾ ಅವರು ಸಂಸತ್ ವಿಸರ್ಜನೆ ಮಾಡಲಿದ್ದಾರೆಯೇ ಅಥವಾ ಚುನಾವಣೆಗೆ ಕರೆ ನೀಡಲಿದ್ದಾರೆಯೇ ಎಂಬುದು ಸದ್ಯ ತಿಳಿದು ಬಂದಿಲ್ಲ. ಸರ್ಕಾರದ ಮೈತ್ರಿ ಪಕ್ಷಗಳು ವಿಶ್ವಾಸ ಮತವನ್ನು ಬಹಿಷ್ಕರಿಸಲು ನಿರ್ಧರಿಸಿದ್ದರಿಂದ ಡ್ರಾಘಿ ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷರು ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಡಾಘ್ರಿ ಅವರಿಗೆ ಹೇಳಿರುವುದಾಗಿ ಕ್ವಿರಿನಾಲೆ ಪ್ಯಾಲೇಸ್ ನಲ್ಲಿರುವ ಅಧ್ಯಕ್ಷರ ಕಚೇರಿ ಹೇಳಿದೆ. ಯುರೋಪಿಯನ್ ಒಕ್ಕೂಟ ಸಹಾಯದ ಕೋವಿಡ್ ಸಾಂಕ್ರಾಮಿಕ ಚೇತರಿಕೆ ಯೋಜನೆ ಅನುಷ್ಠಾನಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂಬ ಡ್ರಾಘಿ ಕರೆಯನ್ನು ಎಡ, ಬಲ ಮತ್ತು ಪ್ಯಾಪುಲಿಸ್ಟ್ ಪಕ್ಷಗಳನ್ನೊಳಗೊಂಡಿರುವ ಸಮ್ಮಿಶ್ರ ಸರ್ಕಾರದ ಸದಸ್ಯರು ನಿರಾಕರಿಸಿದ ಬೆನ್ನಲ್ಲೇ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.

Published On - 2:44 pm, Thu, 21 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ