AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು
ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡ ಜಾಕ್​ ಮಾ
ರಾಜೇಶ್ ದುಗ್ಗುಮನೆ
|

Updated on: Jan 20, 2021 | 5:40 PM

Share

ಬೀಜಿಂಗ್: ಕಳೆದ ಕೆಲ ತಿಂಗಳಿಂದ ಕಾಣೆಯಾಗಿದ್ದ ಚೀನಾದ ಅತ್ಯಂತ ಶ್ರೀಮಂತ ವ್ಯಕ್ತಿ, ಅಲಿಬಾಬಾ ಸಂಸ್ಥೆಯ ಸ್ಥಾಪಕ ಜಾಕ್ ಮಾ ಬುಧವಾರ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದಾರೆ! ಆದರೆ, ತಾವು ಇರುವ ಸ್ಥಳದ ಬಗ್ಗೆ ಅವರು ಉಲ್ಲೇಖ ಮಾಡಿಲ್ಲ.

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಜಾಕ್ ಮಾ ನೇತೃತ್ವದ ಟಾಲೆಂಟ್ ಶೋ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ಅಂತಿಮ ಎಪಿಸೋಡ್​ನಲ್ಲಿ ಜಾಕ್ ಮಾ ತೀರ್ಪುಗಾರರಾಗಿ ಭಾಗವಹಿಸಬೇಕಿತ್ತು. ಆದರೆ, ಆ ಕಾರ್ಯಕ್ರಮದಲ್ಲೂ ಜಾಕ್ ಮಾ ಕಾಣಿಸಿಕೊಂಡಿಲ್ಲ. ಅಲ್ಲದೆ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ವೆಬ್​ಸೈಟಿನಿಂದಲೂ ಜಾಕ್ ಮಾ ಫೋಟೋಗಳನ್ನು ತೆಗೆಯಲಾಗಿದೆ. ಈ ಬೆನ್ನಲ್ಲೇ ಅವರು ಕಾಣೆ ಆಗಿರುವ ವಿಚಾರ ಹರಿದಾಡಲು ಆರಂಭಿಸಿತ್ತು.

ಚೀನಾ ಕಮ್ಯುನಿಸ್ಟ್ ಸರ್ಕಾರದ ಹಣಕಾಸು ನಿರ್ವಹಣೆ ಮತ್ತು ಬ್ಯಾಂಕ್​ಗಳನ್ನು ಉದ್ಯಮಿ ಜಾಕ್ ಮಾ ಕಟುವಾಗಿ ಟೀಕಿಸಿದ್ದರು. ಅಕ್ಟೋಬರ್​ನಲ್ಲಿ ಶಾಂಘೈನಲ್ಲಿ ಜಾಕ್ ಮಾ ಭಾಷಣದಲ್ಲಿ, ವಾಣಿಜ್ಯ ಉದ್ಯಮ ವಲಯದಲ್ಲಿ ಹೊಸ ಆವಿಷ್ಕಾರಗಳಾಗಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಜಾಕ್ ಮಾ ಮಾಡಿದ್ದ ಈ ಭಾಷಣವು ಚೀನಾ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು. ಕ್ರಿಸ್ಮಸ್​ ಸಂದರ್ಭದಲ್ಲಿ ಅಲಿಬಾಬಾ ಸಂಸ್ಥೆಯ ಕುರಿತು ತನಿಖೆ ಪ್ರಾರಂಭ ಮಾಡಲಾಗಿತ್ತು. ಈ ಬೆನ್ನಲ್ಲೇ ಅವರು ಕಾಣೆ ಆಗಿದ್ದರು. ಇದೀಗ ಕೋಟ್ಯಧಿಪತಿ ಉದ್ಯಮಿ ಜಾಕ್ ಮಾ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದರೂ ತಾವಿರುವ ತಾವಿನ ಬಗ್ಗೆ ಹೇಳದಿರುವುದು ಇನ್ನಷ್ಟು ಅನುಮಾನ/ ಗೊಂದಲಗಳಿಗೆ ಎಡೆಮಾಡಿ ಕೊಟ್ಟಿದೆ.

ಚೀನಾ ಕಾಯಂ ಅಧ್ಯಕ್ಷ ಜಿನ್​ ಪಿಂಗ್ ಜೊತೆ ಸಂಘರ್ಷ: ಅಲಿಬಾಬಾ ಸಂಸ್ಥಾಪಕ ಜಾಕ್ ಮಾ 2 ತಿಂಗಳಿಂದ ಕಣ್ಮರೆ?

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ