AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು
ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡ ಜಾಕ್​ ಮಾ
ರಾಜೇಶ್ ದುಗ್ಗುಮನೆ
|

Updated on: Jan 20, 2021 | 5:40 PM

Share

ಬೀಜಿಂಗ್: ಕಳೆದ ಕೆಲ ತಿಂಗಳಿಂದ ಕಾಣೆಯಾಗಿದ್ದ ಚೀನಾದ ಅತ್ಯಂತ ಶ್ರೀಮಂತ ವ್ಯಕ್ತಿ, ಅಲಿಬಾಬಾ ಸಂಸ್ಥೆಯ ಸ್ಥಾಪಕ ಜಾಕ್ ಮಾ ಬುಧವಾರ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದಾರೆ! ಆದರೆ, ತಾವು ಇರುವ ಸ್ಥಳದ ಬಗ್ಗೆ ಅವರು ಉಲ್ಲೇಖ ಮಾಡಿಲ್ಲ.

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಜಾಕ್ ಮಾ ನೇತೃತ್ವದ ಟಾಲೆಂಟ್ ಶೋ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ಅಂತಿಮ ಎಪಿಸೋಡ್​ನಲ್ಲಿ ಜಾಕ್ ಮಾ ತೀರ್ಪುಗಾರರಾಗಿ ಭಾಗವಹಿಸಬೇಕಿತ್ತು. ಆದರೆ, ಆ ಕಾರ್ಯಕ್ರಮದಲ್ಲೂ ಜಾಕ್ ಮಾ ಕಾಣಿಸಿಕೊಂಡಿಲ್ಲ. ಅಲ್ಲದೆ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ವೆಬ್​ಸೈಟಿನಿಂದಲೂ ಜಾಕ್ ಮಾ ಫೋಟೋಗಳನ್ನು ತೆಗೆಯಲಾಗಿದೆ. ಈ ಬೆನ್ನಲ್ಲೇ ಅವರು ಕಾಣೆ ಆಗಿರುವ ವಿಚಾರ ಹರಿದಾಡಲು ಆರಂಭಿಸಿತ್ತು.

ಚೀನಾ ಕಮ್ಯುನಿಸ್ಟ್ ಸರ್ಕಾರದ ಹಣಕಾಸು ನಿರ್ವಹಣೆ ಮತ್ತು ಬ್ಯಾಂಕ್​ಗಳನ್ನು ಉದ್ಯಮಿ ಜಾಕ್ ಮಾ ಕಟುವಾಗಿ ಟೀಕಿಸಿದ್ದರು. ಅಕ್ಟೋಬರ್​ನಲ್ಲಿ ಶಾಂಘೈನಲ್ಲಿ ಜಾಕ್ ಮಾ ಭಾಷಣದಲ್ಲಿ, ವಾಣಿಜ್ಯ ಉದ್ಯಮ ವಲಯದಲ್ಲಿ ಹೊಸ ಆವಿಷ್ಕಾರಗಳಾಗಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಜಾಕ್ ಮಾ ಮಾಡಿದ್ದ ಈ ಭಾಷಣವು ಚೀನಾ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು. ಕ್ರಿಸ್ಮಸ್​ ಸಂದರ್ಭದಲ್ಲಿ ಅಲಿಬಾಬಾ ಸಂಸ್ಥೆಯ ಕುರಿತು ತನಿಖೆ ಪ್ರಾರಂಭ ಮಾಡಲಾಗಿತ್ತು. ಈ ಬೆನ್ನಲ್ಲೇ ಅವರು ಕಾಣೆ ಆಗಿದ್ದರು. ಇದೀಗ ಕೋಟ್ಯಧಿಪತಿ ಉದ್ಯಮಿ ಜಾಕ್ ಮಾ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದರೂ ತಾವಿರುವ ತಾವಿನ ಬಗ್ಗೆ ಹೇಳದಿರುವುದು ಇನ್ನಷ್ಟು ಅನುಮಾನ/ ಗೊಂದಲಗಳಿಗೆ ಎಡೆಮಾಡಿ ಕೊಟ್ಟಿದೆ.

ಚೀನಾ ಕಾಯಂ ಅಧ್ಯಕ್ಷ ಜಿನ್​ ಪಿಂಗ್ ಜೊತೆ ಸಂಘರ್ಷ: ಅಲಿಬಾಬಾ ಸಂಸ್ಥಾಪಕ ಜಾಕ್ ಮಾ 2 ತಿಂಗಳಿಂದ ಕಣ್ಮರೆ?

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ