AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 16ನ್ನು ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನವನ್ನಾಗಿ ಘೋಷಿಸಿದ ಫ್ಲೋರಿಡಾದ ಜಾಕ್ಸನ್​​ವಿಲ್ಲೆ

ಆರ್ಟ್​ ಆಫ್​ ಲಿವಿಂಗ್​​ನ ಶ್ರೀ ರವಿಶಂಕರ್ ಗುರೂಜಿಯ ಜೀವಮಾನದ ಸೇವೆ, ಜ್ಞಾನವನ್ನು ಗಮನದಲ್ಲಿಟ್ಟುಕೊಂಡು ಜೂನ್ 16ನ್ನು ಅಧಿಕೃತವಾಗಿ ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನವನ್ನಾಗಿ ಆಚರಿಸುವುದಾಗಿ ಫ್ಲೋರಿಡಾದ ಜಾಕ್ಸನ್​​ವಿಲ್ಲೆ ಘೋಷಣೆ ಮಾಡಿದೆ. ಆಧ್ಯಾತ್ಮಿಕ ಗುರು ಶ್ರೀಶ್ರೀ ರವಿಶಂಕರ್ ಅವರ ಅಪ್ರತಿಮ ಕೊಡುಗೆಯನ್ನು ಗುರುತಿಸಿ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರ ಫ್ಲೋರಿಡಾದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದ ಸಂದರ್ಭದಲ್ಲಿ ಜಾಕ್ಸನ್​​ವಿಲ್ಲೆಯ ಮೇಯರ್ ಈ ಔಪಚಾರಿಕ ಘೋಷಣೆ ಮಾಡಿದರು

ಜೂನ್ 16ನ್ನು ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನವನ್ನಾಗಿ ಘೋಷಿಸಿದ ಫ್ಲೋರಿಡಾದ ಜಾಕ್ಸನ್​​ವಿಲ್ಲೆ
ಶ್ರೀ ಶ್ರೀ ರವಿಶಂಕರ್ ಗುರೂಜಿ
TV9 Web
| Edited By: |

Updated on:Jun 18, 2025 | 11:51 AM

Share

ಜಾಕ್ಸನ್​​ವಿಲ್ಲೆ, ಜೂನ್ 18: ಆರ್ಟ್​ ಆಫ್​ ಲಿವಿಂಗ್​​ನ ಗುರುದೇವ  ಶ್ರೀ ರವಿಶಂಕರ್ ( Sri Ravishankar Guruji) ಅವರ ಜೀವಮಾನದ ಸೇವೆ, ಜ್ಞಾನವನ್ನು ಗಮನದಲ್ಲಿಟ್ಟುಕೊಂಡು ಜೂನ್ 16ನ್ನು ಅಧಿಕೃತವಾಗಿ ‘ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನ’ವನ್ನಾಗಿ ಆಚರಿಸುವುದಾಗಿ ಫ್ಲೋರಿಡಾದ ಜಾಕ್ಸನ್​​ವಿಲ್ಲೆ ಘೋಷಣೆ ಮಾಡಿದೆ.

ಆಧ್ಯಾತ್ಮಿಕ ಗುರು ಶ್ರೀ ರವಿಶಂಕರ್ ಅವರ ಅಪ್ರತಿಮ ಕೊಡುಗೆಯನ್ನು ಗುರುತಿಸಿ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರ ಫ್ಲೋರಿಡಾದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದ ಸಂದರ್ಭದಲ್ಲಿ ಜಾಕ್ಸನ್​​ವಿಲ್ಲೆಯ ಮೇಯರ್ ಈ ಔಪಚಾರಿಕ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ರವಿಶಂಕರ್ ಅವರ ‘ಆರ್ಟ್ ಆಫ್ ಲಿವಿಂಗ್’ (AOL) ಸಂಸ್ಥೆಯ ಕಾರ್ಯವನ್ನು ವಿಶೇಷವಾಗಿ ಪ್ರಶಂಸಿಸಲಾಯಿತು. ಈ ಸಂಸ್ಥೆಯು ಪ್ರಪಂಚದಾದ್ಯಂತ ಒತ್ತಡ-ಮುಕ್ತ ಸಮಾಜವನ್ನು ಸೃಷ್ಟಿಸಲು ಯೋಗ, ಧ್ಯಾನ ಮತ್ತು ಸಮುದಾಯ ಸೇವೆಯ ಮೂಲಕ ಜಾಗೃತಿ ಮೂಡಿಸುತ್ತಿದೆ.

ಶ್ರೀ ಶ್ರೀ ರವಿಶಂಕರ್ ದಿನ ಎಂದು ಘೋಷಿಸಿದ ವಿಶ್ವದ 32ನೇ ನಗರ ಜಾಕ್ಸನ್‌ವಿಲ್ಲೆ. ಈ ನಿರ್ಧಾರವು ಮತ್ತೊಮ್ಮೆ ರವಿಶಂಕರ್ ಗುರೂಜಿ ಹಾಗೂ ಆರ್ಟ್​ ಆಫ್ ಲಿವಿಂಗ್​​ನ ಜಾಗತಿಕ ಖ್ಯಾತಿಯನ್ನು  ಎತ್ತಿ ತೋರಿಸುತ್ತದೆ.

Guruji 3

ಈ ದಿನವನ್ನು ಇನ್ನು ಮುಂದೆ  ಜಾಕ್ಸನ್‌ವಿಲ್ಲೆಯಲ್ಲಿ ಶಾಂತಿ, ಆರೋಗ್ಯ ಮತ್ತು ಸಮುದಾಯದ ಉನ್ನತಿಗೆ ಮೀಸಲಾದ ದಿನವಾಗಿ ಆಚರಿಸಲಾಗುತ್ತದೆ. ಇದು ಸ್ಥಳೀಯ ನಾಗರಿಕರು ಸಕಾರಾತ್ಮಕ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:38 am, Wed, 18 June 25

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ