AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಶಂಕರ್ ಚೀನಾ ಭೇಟಿ, ಭಾರತ-ಚೀನಾ ಸಂವಾದ ಮಾರ್ಗವನ್ನು ಮತ್ತೆ ತೆರೆಯಲು ನಿರ್ಧಾರ

ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಂಗಳವಾರ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಭೇಟಿಯಾದರು. 2020 ರ ಗಾಲ್ವಾನ್ ಕಣಿವೆ ಸಂಘರ್ಷದ ನಂತರ ಉಭಯ ನಾಯಕರ ಮೊದಲ ಸಭೆ ಇದಾಗಿದೆ. ಪೂರ್ವ ಲಡಾಖ್‌ನಲ್ಲಿನ ಗಡಿ ವಿವಾದದ ನಂತರ ತಣ್ಣಗಾಗಿದ್ದ ಸಂಬಂಧಗಳನ್ನು ಮತ್ತೆ ಹಳಿಗೆ ತರಲು ಎರಡೂ ದೇಶಗಳು ಈಗ ಪ್ರಯತ್ನಿಸುತ್ತಿವೆ. ಭಾರತ-ಚೀನಾ ಸಂಬಂಧಗಳಿಗೆ ಈ ಸಭೆ ಮಹತ್ವದ್ದಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಬಣ್ಣಿಸಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ (SCO) ವಿದೇಶಾಂಗ ಸಚಿವರ ಸಭೆಗಾಗಿ ಅವರು ಬೀಜಿಂಗ್‌ಗೆ ಆಗಮಿಸಿದ್ದಾರೆ.

ಜೈಶಂಕರ್ ಚೀನಾ ಭೇಟಿ, ಭಾರತ-ಚೀನಾ ಸಂವಾದ ಮಾರ್ಗವನ್ನು ಮತ್ತೆ ತೆರೆಯಲು ನಿರ್ಧಾರ
ಜೈಶಂಕರ್
ನಯನಾ ರಾಜೀವ್
|

Updated on:Jul 15, 2025 | 11:36 AM

Share

ಬೀಜಿಂಗ್, ಜುಲೈ 15: ವಿದೇಶಾಂಗ ಸಚಿವ ಎಸ್. ಜೈಶಂಕರ್ ಐದು ವರ್ಷಗಳಲ್ಲಿ ಮೊದಲ ಬಾರಿಗೆ ಚೀನಾ(China)ಗೆ ಭೇಟಿ ನೀಡಿದ್ದಾರೆ. ಅವರು ಮಂಗಳವಾರ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಪೂರ್ವ ಲಡಾಖ್‌ನಲ್ಲಿ ಗಡಿ ವಿವಾದದ ನಂತರ ಉಭಯ ದೇಶಗಳ ನಡುವಿನ ಸಂಬಂಧವನ್ನು ಸಾಮಾನ್ಯಗೊಳಿಸುವ ಪ್ರಯತ್ನದ ಭಾಗವಾಗಿ ಈ ಸಭೆ ನಡೆದಿದೆ. ಶಾಂಘೈ ಸಹಕಾರ ಸಂಸ್ಥೆಯ (SCO) ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು ಜೈಶಂಕರ್ ಚೀನಾಕ್ಕೆ ಹೋಗಿದ್ದರು. ಈ ಸಮಯದಲ್ಲಿ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಮಾಹಿತಿ ನೀಡಿದ್ದೇನೆ ಎಂದು ಜೈಶಂಕರ್ ಹೇಳಿದರು.

ಭಾರತದ ರಾಯಭಾರ ಕಚೇರಿ (ಬೀಜಿಂಗ್, ಚೀನಾ) ಸಭೆಯ ವೀಡಿಯೊವನ್ನು ಬಿಡುಗಡೆ ಮಾಡಿದೆ. ಈ ವೀಡಿಯೊದಲ್ಲಿ, ಇಬ್ಬರೂ ಕೈಕುಲುಕುವುದನ್ನು ಕಾಣಬಹುದು. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದ ನಂತರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಈಗ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಎಸ್ ಜೈಶಂಕರ್ ಅವರು  ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ಅವರಿಗೆ ತಲುಪಿಸಿದ್ದಾರೆ.

ಇದು ಭಾರತ-ಚೀನಾ ಸಂಬಂಧಗಳನ್ನು ಸುಧಾರಿಸಲು ಮತ್ತು ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಬದ್ಧತೆಯನ್ನು ಪುನರುಚ್ಚರಿಸುತ್ತದೆ. 2020 ರಲ್ಲಿ ಗಾಲ್ವಾನ್ ಹಿಂಸಾಚಾರದ ನಂತರ ಜೈಶಂಕರ್ ಅವರ ಮೊದಲ ಚೀನಾ ಭೇಟಿ ಇದಾಗಿದೆ. ಇದು ಚೀನಾ ಮತ್ತು ಭಾರತದ ನಡುವಿನ ಸಂಬಂಧವನ್ನು ಸುಧಾರಿಸುತ್ತದೆ ಎಂದು ನಂಬಲಾಗಿದೆ. ಇದಕ್ಕೂ ಮೊದಲು, ರಾಜನಾಥ್ ಸಿಂಗ್ ಎಸ್‌ಸಿಒ ರಕ್ಷಣಾ ಸಚಿವರ ಸಭೆಗಾಗಿ ಚೀನಾಕ್ಕೆ ಹೋಗಿದ್ದರು.

ಮತ್ತಷ್ಟು ಓದಿ: ಫಾಕ್ಸ್​ಕಾನ್ ಘಟಕದಿಂದ 300ಕ್ಕೂ ಹೆಚ್ಚು ಚೀನೀ ಉದ್ಯೋಗಿಗಳು ವಾಪಸ್; ಭಾರತಕ್ಕೆ ಹಿನ್ನಡೆ ತರಲು ಚೀನಾದ ಸಂಚು?

ಇದು ಬಹುಶಃ ಎಸ್ ಜೈಶಂಕರ್ ಮತ್ತು ಷಿ ಜಿನ್‌ಪಿಂಗ್ ಅವರ ಮೊದಲ ಭೇಟಿಯಾಗಿರಬಹುದು. ಇಲ್ಲಿಯವರೆಗೆ ಷಿ ಜಿನ್‌ಪಿಂಗ್ ಮತ್ತು ಜೈಶಂಕರ್ ಪರಸ್ಪರ ಭೇಟಿಯಾಗಿರಲಿಲ್ಲ.

ಮೂಲಗಳ ಪ್ರಕಾರ, ಭಾರತ ಮತ್ತು ಚೀನಾ ನಡುವಿನ ಮುಕ್ತ ಸಂವಾದದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಗಾಲ್ವಾನ್ ಹಿಂಸಾಚಾರದ ನಂತರ, ಭಾರತ ಮತ್ತು ಚೀನಾ ನಡುವಿನ ಸಂಬಂಧಗಳು ಹಳಸಿತ್ತು. ಆದರೆ ಕಳೆದ ವರ್ಷ ಕಜಾನ್‌ನಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಷಿ ಭೇಟಿಯ ನಂತರ, ಸಂಬಂಧ ಉತ್ತಮವಾಗಿದೆ. ಎರಡೂ ದೇಶಗಳ ಹೆಜ್ಜೆಗಳು ಈಗ ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ. ಜೈಶಂಕರ್ ಅವರ ಈ ಭೇಟಿಯು ಪರಸ್ಪರ ನಂಬಿಕೆಯನ್ನು ಪುನಃಸ್ಥಾಪಿಸಲು ಮತ್ತು ಗಡಿ ವಿವಾದವನ್ನು ಪರಿಹರಿಸಲು ಎರಡೂ ದೇಶಗಳಿಗೆ ಒಂದು ಪ್ರಮುಖ ಹೆಜ್ಜೆಯಾಗಿದೆ.

ಎಸ್ ಜೈಶಂಕರ್ ಪೋಸ್ಟ್​

ಒಪ್ಪಂದದ ನಂತರ, ಭಾರತ ಮತ್ತು ಚೀನಾ ಪರಸ್ಪರ ಸಂವಾದದ ಮಾರ್ಗಗಳನ್ನು ಮತ್ತೆ ತೆರೆಯಲು ನಿರ್ಧರಿಸಿವೆ. ಗಾಲ್ವಾನ್ ಸಂಘರ್ಷದ ನಂತರ ಎರಡೂ ದೇಶಗಳ ನಡುವಿನ ಮಾತುಕತೆ ಸ್ಥಗಿತಗೊಂಡಿತ್ತು. ಕಳೆದ ಒಂಬತ್ತು ತಿಂಗಳಲ್ಲಿ, ನಮ್ಮ ಸಂಬಂಧಗಳನ್ನು ಸಾಮಾನ್ಯಗೊಳಿಸುವಲ್ಲಿ ನಾವು ಉತ್ತಮ ಪ್ರಗತಿಯನ್ನು ಸಾಧಿಸಿದ್ದೇವೆ.

ಈಗ ನಾವು ಗಡಿಗೆ ಸಂಬಂಧಿಸಿದ ಇತರ ಅಂಶಗಳತ್ತ ಗಮನಹರಿಸಬೇಕು, ವಿಶೇಷವಾಗಿ ಉದ್ವಿಗ್ನತೆಯನ್ನು ಕಡಿಮೆ ಮಾಡಬೇಕು ಎಂದು ಜೈಶಂಕರ್ ಹೇಳಿದರು. ಭಿನ್ನಾಭಿಪ್ರಾಯಗಳು ವಿವಾದದ ರೂಪ ಪಡೆಯಲು ಮತ್ತು ಸ್ಪರ್ಧೆಯು ಸಂಘರ್ಷಕ್ಕೆ ತಿರುಗಲು ಬಿಡಬಾರದು.

ಸಂಬಂಧಗಳನ್ನು ಸಂಪೂರ್ಣವಾಗಿ ಸಾಮಾನ್ಯಗೊಳಿಸುವಲ್ಲಿ ಇನ್ನೂ ಕೆಲವು ಅಡೆತಡೆಗಳಿವೆ. ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ನಡೆದುಕೊಂಡ ರೀತಿ, ದಲೈ ಲಾಮಾ ಅವರ ಉತ್ತರಾಧಿಕಾರದ ವಿಷಯ ಮತ್ತು ಪಾಕಿಸ್ತಾನಕ್ಕೆ ಚೀನಾ ನೀಡಿದ ಬೆಂಬಲ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:36 am, Tue, 15 July 25

ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್