Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Earthquake In Japan: ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Feb 13, 2021 | 9:48 PM

ಟೋಕಿಯೋ: ಶನಿವಾರ ತಡರಾತ್ರಿ (ಸ್ಥಳೀಯ ಕಾಲಮಾನ) ಪೂರ್ವ ಜಪಾನ್​ನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 7.1 ದಾಖಲಾಗಿದೆ. ಭೂಕಂಪದ ತೀವ್ರತೆ ಹೆಚ್ಚಿದ್ದರೂ, ಯಾವುದೇ ಸುನಾಮಿ ಮುನ್ಸೂಚನೆ ಇಲ್ಲ ಎಂದು ಜಪಾನ್​ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ. ಭೂಕಂಪ ಸಂಭವಿಸಿದ ಬಿನ್ನಲ್ಲೇ ಈ ಭಾಗದಲ್ಲಿ ವಿದ್ಯುತ್​ ಸಮಸ್ಯೆ ಉಂಟಾಗಿದೆ.

ಫುಕುಶಿಮಾದಲ್ಲಿರುವ ಅಣುವಿದ್ಯುತ್​ ಸ್ಥಾವರದ ಸದ್ಯದ ಪರಿಸ್ಥಿತಿ ಏನು ಎನ್ನುವ ಬಗ್ಗೆ ವಿಜ್ಞಾನಿಗಳು ಪರೀಕ್ಷೆ ನಡೆಸುತ್ತಿದ್ದಾರೆ. 2011ರ ಸುನಾಮಿ ಸಂದರ್ಭದಲ್ಲಿ ಈ ಅಣುವಿದ್ಯುತ್​ ಸ್ಥಾವರ ಸಂಪೂರ್ಣವಾಗಿ ಹಾನಿಗೆ ತುತ್ತಾಗಿತ್ತು.

ಭೂಕಂಪ ಸಂಭವಿಸುತ್ತಿದ್ದಂತೆ, ಈ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ರೈಲ್ವೆ ಸಂಚಾರವನ್ನು ಸ್ಥಗಿತಮಾಡಲಾಗಿದೆ. ಭೂಕಂಪದಿಂದ ಎಷ್ಟರಮಟ್ಟಿಗೆ ಹಾನಿ ಉಂಟಾಗಿದೆ ಎನ್ನುವ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದೆ.

ಇದನ್ನೂ ಓದಿ: ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

2011ರಲ್ಲಿ ಜಗತ್ತು ಕಂಡು ಕೇಳರಿಯದ ಸುನಾಮಿ ಸಂಭವಿಸಿತ್ತು. ಜಪಾನ್​ ಸುನಾಮಿಗೆ ಸಂಪೂರ್ಣವಾಗಿ ತತ್ತರಿಸಿ ಹೋಗಿತ್ತು. ಈ ವೇಳೆ ಸುಮಾರು 18 ಸಾವಿರ ಜನರು ಮೃತಪಟ್ಟಿದ್ದರು.

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್