AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Earthquake In Japan: ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 13, 2021 | 9:48 PM

Share

ಟೋಕಿಯೋ: ಶನಿವಾರ ತಡರಾತ್ರಿ (ಸ್ಥಳೀಯ ಕಾಲಮಾನ) ಪೂರ್ವ ಜಪಾನ್​ನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 7.1 ದಾಖಲಾಗಿದೆ. ಭೂಕಂಪದ ತೀವ್ರತೆ ಹೆಚ್ಚಿದ್ದರೂ, ಯಾವುದೇ ಸುನಾಮಿ ಮುನ್ಸೂಚನೆ ಇಲ್ಲ ಎಂದು ಜಪಾನ್​ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ. ಭೂಕಂಪ ಸಂಭವಿಸಿದ ಬಿನ್ನಲ್ಲೇ ಈ ಭಾಗದಲ್ಲಿ ವಿದ್ಯುತ್​ ಸಮಸ್ಯೆ ಉಂಟಾಗಿದೆ.

ಫುಕುಶಿಮಾದಲ್ಲಿರುವ ಅಣುವಿದ್ಯುತ್​ ಸ್ಥಾವರದ ಸದ್ಯದ ಪರಿಸ್ಥಿತಿ ಏನು ಎನ್ನುವ ಬಗ್ಗೆ ವಿಜ್ಞಾನಿಗಳು ಪರೀಕ್ಷೆ ನಡೆಸುತ್ತಿದ್ದಾರೆ. 2011ರ ಸುನಾಮಿ ಸಂದರ್ಭದಲ್ಲಿ ಈ ಅಣುವಿದ್ಯುತ್​ ಸ್ಥಾವರ ಸಂಪೂರ್ಣವಾಗಿ ಹಾನಿಗೆ ತುತ್ತಾಗಿತ್ತು.

ಭೂಕಂಪ ಸಂಭವಿಸುತ್ತಿದ್ದಂತೆ, ಈ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ರೈಲ್ವೆ ಸಂಚಾರವನ್ನು ಸ್ಥಗಿತಮಾಡಲಾಗಿದೆ. ಭೂಕಂಪದಿಂದ ಎಷ್ಟರಮಟ್ಟಿಗೆ ಹಾನಿ ಉಂಟಾಗಿದೆ ಎನ್ನುವ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದೆ.

ಇದನ್ನೂ ಓದಿ: ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

2011ರಲ್ಲಿ ಜಗತ್ತು ಕಂಡು ಕೇಳರಿಯದ ಸುನಾಮಿ ಸಂಭವಿಸಿತ್ತು. ಜಪಾನ್​ ಸುನಾಮಿಗೆ ಸಂಪೂರ್ಣವಾಗಿ ತತ್ತರಿಸಿ ಹೋಗಿತ್ತು. ಈ ವೇಳೆ ಸುಮಾರು 18 ಸಾವಿರ ಜನರು ಮೃತಪಟ್ಟಿದ್ದರು.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ