AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Earthquake In Japan: ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 13, 2021 | 9:48 PM

Share

ಟೋಕಿಯೋ: ಶನಿವಾರ ತಡರಾತ್ರಿ (ಸ್ಥಳೀಯ ಕಾಲಮಾನ) ಪೂರ್ವ ಜಪಾನ್​ನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 7.1 ದಾಖಲಾಗಿದೆ. ಭೂಕಂಪದ ತೀವ್ರತೆ ಹೆಚ್ಚಿದ್ದರೂ, ಯಾವುದೇ ಸುನಾಮಿ ಮುನ್ಸೂಚನೆ ಇಲ್ಲ ಎಂದು ಜಪಾನ್​ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ. ಭೂಕಂಪ ಸಂಭವಿಸಿದ ಬಿನ್ನಲ್ಲೇ ಈ ಭಾಗದಲ್ಲಿ ವಿದ್ಯುತ್​ ಸಮಸ್ಯೆ ಉಂಟಾಗಿದೆ.

ಫುಕುಶಿಮಾದಲ್ಲಿರುವ ಅಣುವಿದ್ಯುತ್​ ಸ್ಥಾವರದ ಸದ್ಯದ ಪರಿಸ್ಥಿತಿ ಏನು ಎನ್ನುವ ಬಗ್ಗೆ ವಿಜ್ಞಾನಿಗಳು ಪರೀಕ್ಷೆ ನಡೆಸುತ್ತಿದ್ದಾರೆ. 2011ರ ಸುನಾಮಿ ಸಂದರ್ಭದಲ್ಲಿ ಈ ಅಣುವಿದ್ಯುತ್​ ಸ್ಥಾವರ ಸಂಪೂರ್ಣವಾಗಿ ಹಾನಿಗೆ ತುತ್ತಾಗಿತ್ತು.

ಭೂಕಂಪ ಸಂಭವಿಸುತ್ತಿದ್ದಂತೆ, ಈ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ರೈಲ್ವೆ ಸಂಚಾರವನ್ನು ಸ್ಥಗಿತಮಾಡಲಾಗಿದೆ. ಭೂಕಂಪದಿಂದ ಎಷ್ಟರಮಟ್ಟಿಗೆ ಹಾನಿ ಉಂಟಾಗಿದೆ ಎನ್ನುವ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದೆ.

ಇದನ್ನೂ ಓದಿ: ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

2011ರಲ್ಲಿ ಜಗತ್ತು ಕಂಡು ಕೇಳರಿಯದ ಸುನಾಮಿ ಸಂಭವಿಸಿತ್ತು. ಜಪಾನ್​ ಸುನಾಮಿಗೆ ಸಂಪೂರ್ಣವಾಗಿ ತತ್ತರಿಸಿ ಹೋಗಿತ್ತು. ಈ ವೇಳೆ ಸುಮಾರು 18 ಸಾವಿರ ಜನರು ಮೃತಪಟ್ಟಿದ್ದರು.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ