AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಒಂದೇ ದಿನ 155 ಕಂಪನಗಳಿಂದ ನಲುಗಿದ ಜಪಾನ್​, 13 ಮಂದಿ ಸಾವು

ಜಪಾನ್​ನಲ್ಲಿ ಒಂದೇ ದಿನ 155 ಭೂಕಂಪಗಳು ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕುಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.

Japan Earthquake: ಒಂದೇ ದಿನ 155 ಕಂಪನಗಳಿಂದ ನಲುಗಿದ ಜಪಾನ್​, 13 ಮಂದಿ ಸಾವು
ಜಪಾನ್ ಭೂಕಂಪImage Credit source: Mint
ನಯನಾ ರಾಜೀವ್
|

Updated on: Jan 02, 2024 | 9:23 AM

Share

ಜಪಾನ್​ನಲ್ಲಿ ಒಂದೇ ದಿನ 155 ಭೂಕಂಪ(Earthquake)ಗಳು ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕುಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹೆಚ್ಚಿನ ಭೂಕಂಪಗಳು ರಿಕ್ಟರ್ ಮಾಪಕದಲ್ಲಿ 3 ಕ್ಕಿಂತ ಹೆಚ್ಚು ತೀವ್ರತೆಯನ್ನು ಹೊಂದಿವೆ. ಭೂಕಂಪದ ತೀವ್ರತೆ ಕ್ರಮೇಣ ಕಡಿಮೆಯಾಗಿದೆ.

ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು.ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.

2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಮತ್ತಷ್ಟು ಓದಿ: Japan Earthquake: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಅವಶೇಷಗಳ ಅಡಿಯಲ್ಲಿ ಹುದುಗಿರುವ ಜನರನ್ನು ಪತ್ತೆಮಾಡಲಾಗುತ್ತಿದೆ. ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮೊದಲ ಆರು ಕಂಪನಗಳು ಪ್ರಬಲವಾಗಿದ್ದು, ಈ ಕಂಪನಗಳು ರಿಕ್ಟರ್ ಮಾಪಕದಲ್ಲಿ 6.2 ರಿಂದ 6.7ರವರೆಗೂ ದಾಖಲಾಗಿವೆ. ಬಳಿಕ ಕನಿಷ್ಠ 3 ರಂತೆ 140ಕ್ಕೂ ಅಧಿಕ ಕಂಪನಗಳು ಸಂಭವಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ