AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್ ಮೇಲೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ; ಸುರಕ್ಷಿತ ಸ್ಥಳಕ್ಕೆ ತೆರಳಲು ಜಪಾನ್ ಜನರಿಗೆ ಪ್ರಧಾನಿ ಸೂಚನೆ

ಉತ್ತರ ಕೊರಿಯಾ ನಮ್ಮ ದೇಶದ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಸೂಚನೆಗಳಿವೆ. ಹೀಗಾಗಿ, ಆದಷ್ಟು ಬೇಗ ಜನರನ್ನು ಸುರಕ್ಷಿತ ಶೆಲ್ಟರ್​ಗಳಿಗೆ ಸ್ಥಳಾಂತರಿಸಿ ಎಂದು ಜಪಾನ್ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಜಪಾನ್ ಮೇಲೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ; ಸುರಕ್ಷಿತ ಸ್ಥಳಕ್ಕೆ ತೆರಳಲು ಜಪಾನ್ ಜನರಿಗೆ ಪ್ರಧಾನಿ ಸೂಚನೆ
ಜಪಾನ್​ನಲ್ಲಿ ಕ್ಷಿಪಣಿ ದಾಳಿ
TV9 Web
| Edited By: |

Updated on: Oct 04, 2022 | 11:43 AM

Share

ಟೋಕಿಯೊ: ಜಪಾನ್ (Japan) ಮೇಲೆ ಉತ್ತರ ಕೊರಿಯಾ (North Korea) ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಹೀಗಾಗಿ, ಆ ಪ್ರದೇಶದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಎಲ್ಲರೂ ಶೆಲ್ಟರ್​​ಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿರಲು ಜಪಾನ್ ಪ್ರಧಾನ ಮಂತ್ರಿ ತನ್ನ ದೇಶದ ನಿವಾಸಿಗಳಿಗೆ ಮನವಿ ಮಾಡಿದ್ದಾರೆ. ಉತ್ತರ ಕೊರಿಯಾ ನಮ್ಮ ದೇಶದ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಸೂಚನೆಗಳಿವೆ. ಹೀಗಾಗಿ, ಆದಷ್ಟು ಬೇಗ ಜನರನ್ನು ಸುರಕ್ಷಿತ ಶೆಲ್ಟರ್​ಗಳಿಗೆ ಸ್ಥಳಾಂತರಿಸಿ ಎಂದು ಜಪಾನ್ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಜಪಾನ್​ನ ಉತ್ತರ ಭಾಗದ 2 ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. “ಉತ್ತರ ಕೊರಿಯಾ ಕ್ಷಿಪಣಿಯನ್ನು ಉಡಾಯಿಸಿರುವಂತೆ ತೋರುತ್ತಿದೆ. ದಯವಿಟ್ಟು ಕಟ್ಟಡಗಳು ಅಥವಾ ಭೂಗತಕ್ಕೆ ಜನರನ್ನು ಸ್ಥಳಾಂತರಿಸಿ” ಎಂದು ಜಪಾನ್ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Shinzo Abe Funeral: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ; ಗೆಳೆಯನಿಗೆ ಪಿಎಂ ನರೇಂದ್ರ ಮೋದಿ ಪುಷ್ಪ ನಮನ

ಇಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಜಪಾನ್ ಪ್ರಧಾನಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ. ಉತ್ತರ ಕೊರಿಯಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಪಾನ್ ಮೇಲೆ ಹಾರಿರುವ ಸಾಧ್ಯತೆಯಿದೆ ಕ್ಷಿಪಣಿಯು ಈಗಾಗಲೇ ಸಮುದ್ರದಲ್ಲಿ ಇಳಿದಂತೆ ತೋರುತ್ತಿದೆ. ಮೇಲಿನಿಂದ ಬೀಳುವ ಯಾವುದೇ ವಸ್ತುಗಳ ಬಳಿ ಹೋಗದಂತೆ ಹಡಗುಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್‌ನ ಕೋಸ್ಟ್‌ಗಾರ್ಡ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!