AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯಂತೆ ಕಾಣಲು 12 ಲಕ್ಷ ರೂ. ಖರ್ಚು ಮಾಡಿದ್ದ ವ್ಯಕ್ತಿಗೆ ಈಗ ಪಾಂಡ ಆಗುವ ಆಸೆಯಂತೆ!

ಜಪಾನ್​ನ ಟೊಕೊ ಎಂಬ ವ್ಯಕ್ತಿ ತಾನು ನಾಯಿಯಂತೆ ಕಾಣಲು ಬರೋಬ್ಬರಿ 12 ಲಕ್ಷ ರೂ. ಖರ್ಚು ಮಾಡಿ ಕಾಸ್ಟ್ಯೂಮ್ ತಯಾರಿಸಿ ಎಲ್ಲೆಡೆ ಸುದ್ದಿಯಾಗಿದ್ದರು. ಆದರೆ ಇದೀಗ ಅವರಿಗೆ ಪಾಂಡ ಅಥವಾ ಬೆಕ್ಕಾಗುವ ಕನಸಿದೆಯಂತೆ.

ನಾಯಿಯಂತೆ ಕಾಣಲು 12 ಲಕ್ಷ ರೂ. ಖರ್ಚು ಮಾಡಿದ್ದ ವ್ಯಕ್ತಿಗೆ ಈಗ ಪಾಂಡ ಆಗುವ ಆಸೆಯಂತೆ!
ನಯನಾ ರಾಜೀವ್
|

Updated on: May 24, 2024 | 8:57 AM

Share

ನಾಯಿಯಂತೆ ಕಾಣಲು ಬರೋಬ್ಬರಿ 12 ಲಕ್ಷ ರೂ. ಖರ್ಚು ಮಾಡಿದ್ದ ಜಪಾನ್(Japan)​ ವ್ಯಕ್ತಿಗೆ ಈಗ ಪಾಂಡ ಅಥವಾ ಬೆಕ್ಕಾಗುವ ಆಸೆಯಂತೆ. ಸಾಕು ಪ್ರಾಣಿಗಳೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ, ಮನುಷ್ಯರಿಗಿಂತಲೂ ಪ್ರಾಣಿಗಳನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಾರೆ, ತಮ್ಮ ಮುದ್ದು ಪ್ರಾಣಿಗಳಿಗಾಗಿ ಜನ ಏನೆಲ್ಲಾ ಮಾಡುತ್ತಾರೆ ಎಂದು ನಾವು ಸಾಕಷ್ಟು ನಿದರ್ಶನಗಳನ್ನು ನೋಡಿದ್ದೇವೆ. ಅವುಗಳ ಆಹಾರ ನಿರ್ವಹಣೆಗಾಗಿಯೇ ಜನ ಲಕ್ಷಾಂತರ ರೂ ವ್ಯಯಿಸುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿದೆ.

ಆದರೆ ಈ ವ್ಯಕ್ತಿ ಖುದ್ದಾಗಿ ನಾಯಿಯಂತೆ ಕಾಣಲು 12 ಲಕ್ಷ ರೂ. ವ್ಯಯಿಸಿದ್ದರು. ಟೊಕೊ ಎಂಬಾತನ ಈ ನಾಯಿ ಕಾಸ್ಟ್ಯೂಮ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಟೊಕೊ ಯಾವಾಗಲೂ ಒಂದೇ ರೀತಿಯ ಬಟ್ಟೆಗಳನ್ನು ಧರಿಸುತ್ತಾರೆ. ಈ ಬಟ್ಟೆಗಳಲ್ಲಿ ಈ ಮನುಷ್ಯ ಸೇಮ್​ ನಾಯಿಯಂತೆ ಕಾಣುತ್ತಾರೆ. ಇವರನ್ನು ನೋಡಿದರೆ ನಾಯಿಯಲ್ಲ ಮನುಷ್ಯ ಎಂದು ಯಾರೂ ನಂಬಲು ಸಾಧ್ಯವಾಗುವುದಿಲ್ಲ. ಅಷ್ಟರ ಮಟ್ಟಿಗೆ ಈ ನಾಯಿ ಕಾಸ್ಟ್ಯೂಮ್ ನೈಜವಾಗಿದೆ.

ಮತ್ತಷ್ಟು ಓದಿ: ‘ನಾಯಿಯಂತೆ ಕಾಣಲು ನಾನು ರೂ. 12 ಲಕ್ಷ ಖರ್ಚು ಮಾಡಿದ್ದೆ’ ವರ್ಷದ ಹಿಂದಿನ ರಹಸ್ಯ ಬಿಚ್ಚಿಟ್ಟ ವ್ಯಕ್ತಿ

ಟೊಕೊ ಪ್ರಕಾರ, ಅವರು ಬಾಲ್ಯದಿಂದಲೂ ಪ್ರಾಣಿಗಳಂತೆ ಬದುಕಲು ಬಯಸಿದ್ದರು. ಇವರಿಗೆ ನಾಯಿಗಳ ಮೇಲೆ ವಿಶೇಷ ಪ್ರೀತಿ ಇತ್ತು. ಹಾಗಾಗಿ ನಾವು ನಾಯಿಗಳಂತೆ ಬದುಕಬೇಕೆಂದು ಅವರು ಬಯಸಿದ್ದರು.

ಇದೀಗ ಅವರಿಗೆ ಪಾಂಡ ಆಗಬೇಕೆಂದೆನಿಸುತ್ತಿದೆಯಂತೆ, ಹಾಗಾಗಿ ಅವರು ಆದಷ್ಟು ಬೇಗ ಬೆಕ್ಕು ಅಥವಾ ಪಾಂಡಾ ರೀತಿ ಕಾಸ್ಟ್ಯೂಮ್​ ಸಿದ್ಧಪಡಿಸಲಿದ್ದಾರೆ.

ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ, ವ್ಯಕ್ತಿ ನಾಯಿಯಂತೆ ನಡೆಯುವ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾನೆ. ಸಾವಿರಾರು ವೀಕ್ಷಣೆಗಳನ್ನು ಗಳಿಸಿರುವ ಈ ವೀಡಿಯೊಗಳಲ್ಲಿ, ಈ ಟೊಕೋ ನಾಯಿ ಧಿರಿಸು ಧರಿಸಿ ಹುಲ್ಲುಹಾಸಿನ ಮೇಲೆ ಕುಣಿದು ಕುಪ್ಪಳಿಸುವುದು, ನೆಲದ ಮೇಲೆ ಉರುಳಾಡುವುದು ಮತ್ತು ನಾಯಿಯಂತೆ ಆಟವಾಡುವುದನ್ನು ನೋಡಬಹುದಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!