AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್ ವೇಳೆ ಧ್ವಂಸಗೊಂಡಿದ್ದ ಜೈಶ್ ಪ್ರಧಾನ ಕಚೇರಿ ರೆಡಿ, ಮತ್ತೆ ಚುರುಕಾಯ್ತು ಜೆಇಎಂ ಉಗ್ರ ಜಾಲ

ಆಪರೇಷನ್ ಸಿಂಧೂರ್ ನಂತರ ಧ್ವಂಸವಾಗಿದ್ದ ಜೈಶ್-ಎ-ಮೊಹಮ್ಮದ್ (JeM) ಪ್ರಧಾನ ಕಚೇರಿ ಬಹಾವಲ್ಪುರದಲ್ಲಿ ಪಾಕ್ ನೆರವಿನಿಂದ 15 ತಿಂಗಳಲ್ಲಿ ಪುನರ್ನಿರ್ಮಾಣಗೊಂಡಿದೆ. 25 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಮರುನಿರ್ಮಾಣಗೊಂಡು, ಶಸ್ತ್ರಾಸ್ತ್ರ ಸಂಗ್ರಹ, ಡ್ರೋನ್ ಕಾರ್ಯಾಚರಣೆ ಹಾಗೂ ಭಾರತ ವಿರೋಧಿ ಪ್ರಚಾರಕ್ಕೆ ಸಿದ್ಧವಾಗಿದೆ. ಭಾರತವು ಯಾವುದೇ ಪ್ರಚೋದನೆಗೆ ಮರು ದಾಳಿ ನಡೆಸಲು ಸನ್ನದ್ಧವಾಗಿದೆ ಎಂದು ಎಚ್ಚರಿಕೆ ನೀಡಿದೆ.

ಆಪರೇಷನ್ ಸಿಂಧೂರ್ ವೇಳೆ ಧ್ವಂಸಗೊಂಡಿದ್ದ ಜೈಶ್ ಪ್ರಧಾನ ಕಚೇರಿ ರೆಡಿ, ಮತ್ತೆ ಚುರುಕಾಯ್ತು ಜೆಇಎಂ ಉಗ್ರ ಜಾಲ
ಪಾಕಿಸ್ತಾನ
ನಯನಾ ರಾಜೀವ್
|

Updated on:Aug 24, 2026 | 10:23 AM

Share

ಇಸ್ಲಾಮಾಬಾದ್, ಆಗಸ್ಟ್ 24: ಭಯೋತ್ಪಾದನೆ(Terrorism)ಗೆ ಕುಮ್ಮಕ್ಕು ನೀಡುವುದನ್ನು ಪಾಕಿಸ್ತಾನ ಎಂದಿಗೂ ನಿಲ್ಲಿಸುವುದಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಮೂಲಕ ಧ್ವಂಸಗೊಳಿಸಿದ್ದ ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಬಹಾವಲ್ಪುರ ಪ್ರಧಾನ ಕಚೇರಿ ‘ಮರ್ಕಜ್ ಸುಭಾನಲ್ಲಾ’ ಕೇವಲ 15 ತಿಂಗಳಲ್ಲಿ ಮತ್ತೆ ತಲೆ ಎತ್ತಿದೆ.

ದಾಳಿಯ ಕುರುಹುಗಳನ್ನೆಲ್ಲಾ ಮುಚ್ಚಿಹಾಕಿ ಹೊಸದಾಗಿ ನಿರ್ಮಿಸಲಾಗಿರುವ ಈ ಭಯೋತ್ಪಾದಕ ಕೇಂದ್ರದ ವಿಡಿಯೋ ಹಾಗೂ ಸ್ಯಾಟಲೈಟ್ ಚಿತ್ರಗಳು ಬಹಿರಂಗವಾಗಿವೆ. ಆಪರೇಷನ್ ಸಿಂಧೂರ್ ದಾಳಿಯ ಬಳಿಕ ಪಾಕಿಸ್ತಾನ ಸರ್ಕಾರವು ಜೈಶ್ ಸಂಘಟನೆಗೆ ಸುಮಾರು 25 ಕೋಟಿ ಪಾಕಿಸ್ತಾನಿ ರೂಪಾಯಿ (PKR) ನಗದು ನೆರವು ನೀಡಿದೆ ಎಂದು ಗುಪ್ತಚರ ವರದಿಗಳು ತಿಳಿಸಿವೆ.

ಇದರಲ್ಲಿ ಸುಮಾರು 11 ಕೋಟಿ ರೂ. ವೆಚ್ಚ ಮಾಡಿ ಬಾಂಬ್ ದಾಳಿಗೆ ಸೀಳಿಹೋಗಿದ್ದ ಸೆಂಟ್ರಲ್ ಹಾಲ್, ನೆಲಸಮವಾಗಿದ್ದ ಗುಮ್ಮಟಗಳು ಹಾಗೂ ಮದರಸಾ ಅಲ್-ಸಬೀರ್ ಸಂಕೀರ್ಣವನ್ನು ಆಮದು ಮಾಡಿಕೊಂಡ ಅಮೃತಶಿಲೆ ಮತ್ತು ಹೊಸ ಪ್ಲ್ಯಾಸ್ಟರಿಂಗ್ ಮೂಲಕ ಅದ್ದೂರಿಯಾಗಿ ಮರುನಿರ್ಮಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಮೌಲಾನಾ ಮಸೂದ್ ಅಜರ್‌ನನ್ನು ಸದ್ಯ ಕಾರ್ಯಾಚರಣೆಗಳಿಂದ ದೂರವಿರಿಸಲಾಗಿದೆ.

ಮತ್ತಷ್ಟು ಓದಿ: ಹಿಂದೂಗಳನ್ನು ಸುಲಭವಾಗಿ ಕೊಲ್ಲಬಹುದು: ಬಾಂಗ್ಲಾದಲ್ಲಿ ಅಲ್-ಖೈದಾ ನಂಟು ಹೊಂದಿರುವ ಹರುನ್ ಇಝಾರ್ ಬಹಿರಂಗ ಬೆದರಿಕೆ

ಪ್ರಸ್ತುತ ಈ ಪುನರ್ನಿರ್ಮಿತ ಉಗ್ರ ನೆಲೆಯ ಕಮಾಂಡ್ ಮಸೂದ್ ಅಜರ್‌ನ ಸಹೋದರರಾದ ತಲ್ಹಾ ಅಲ್-ಸೈಫ್ ಮತ್ತು ಮೊಹಿನುದ್ದೀನ್ ಔರಂಗಜೇಬ್ ಕೈಯಲ್ಲಿದೆ. ಮಸೂದ್ ಅಜರ್ ಮತ್ತು ರೌಫ್ ಅಸ್ಗರ್ ಸದ್ಯ ಸಿಂಧ್ ಪ್ರಾಂತ್ಯದ ನವಾಬ್‌ಶಾ ಜಿಲ್ಲೆಯಲ್ಲಿ ಪಾಕ್ ಸರ್ಕಾರದ ಬಿಗಿ ಭದ್ರತೆಯ ಆಶ್ರಯದಲ್ಲಿದ್ದಾರೆ.

ಭಾರತದ ಸಹಿಷ್ಣುತೆ ಮತ್ತು ಔದಾರ್ಯವನ್ನು ನಮ್ಮ ದೌರ್ಬಲ್ಯವೆಂದು ತಿಳಿಯಬಾರದು. ಭಾರತ ರಿಸ್ಕ್ ತೆಗೆದುಕೊಂಡು ಶತ್ರು ಶಿಬಿರಗಳ ಮೇಲೆ ಯಾವುದೇ ಪರಿಣಾಮ ಲೆಕ್ಕಿಸದೆ ಮತ್ತೆ ತೀವ್ರವಾಗಿ ದಾಳಿ ನಡೆಸಲು ಸದಾ ಸಿದ್ಧ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸಂದೇಶ ರವಾನಿಸಿದ್ದಾರೆ.

ಮತ್ತೊಂದು ದಾಳಿಯ ಮುನ್ಸೂಚನೆ: ಗಡಿಯಾಚೆಗಿನ ಉಗ್ರ ಶಿಬಿರಗಳು ಮತ್ತೆ ಸಕ್ರಿಯಗೊಂಡರೆ, ಭಾರತವು ಯಾವುದೇ ಮುಲಾಜಿಲ್ಲದೆ ಮತ್ತೊಮ್ಮೆ ಗಡಿಯಾಚೆ ನುಗ್ಗಿ ಸರ್ಜಿಕಲ್, ವಾಯುದಾಳಿ ನಡೆಸುವ ಎಚ್ಚರಿಕೆಯನ್ನು ಈಗಾಗಲೇ ಜಾಗತಿಕ ವೇದಿಕೆಯಲ್ಲಿ ಸ್ಪಷ್ಟಪಡಿಸಿದೆ.

ನವೀಕೃತ ಮರ್ಕಜ್ ಸುಭಾನಲ್ಲಾ ಸಂಕೀರ್ಣದಲ್ಲಿ ಶಸ್ತ್ರಾಸ್ತ್ರ ಸಂಗ್ರಹದ ಜೊತೆಗೆ, ಗಡಿಯಾಚೆಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳನ್ನು ಕಳ್ಳಸಾಗಣೆ ಮಾಡಲು ಡ್ರೋನ್ ನಿಯಂತ್ರಣ ಕೊಠಡಿಗಳು ಹಾಗೂ ಭಾರತ ವಿರೋಧಿ ಪ್ರಚಾರಕ್ಕಾಗಿ ಪ್ರತ್ಯೇಕ ಸೈಬರ್ ಸೆಲ್ ಅನ್ನು ಸ್ಥಾಪಿಸಲಾಗಿದೆ.

ನಿಯಂತ್ರಣ ರೇಖೆ (LoC) ಮತ್ತು ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಭಾರತೀಯ ರಕ್ಷಣಾ ಪಡೆಗಳು ತನ್ನ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಮತ್ತು ಸರ್ವೈಲೆನ್ಸ್ ಡ್ರೋನ್‌ಗಳನ್ನು ಸಜ್ಜುಗೊಳಿಸಿದ್ದು, ಗಡಿಯಾಚೆಯಿಂದ ಯಾವುದೇ ಪ್ರಚೋದನೆ ಕಂಡುಬಂದರೂ ತಕ್ಷಣವೇ ಹೊಸ ವಾಯುದಾಳಿ ನಡೆಸಲು ಮುಕ್ತ ಅನುಮತಿ ನೀಡಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:22 am, Mon, 24 August 26

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ