AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಗೆ ಆಯಕಟ್ಟಿನ ಸ್ಥಾನ ನೀಡಿದ ಬೈಡನ್! ಯಾರವರು?

ವೇದಾಂತ್​ ಪಟೇಲ್​ ಇಷ್ಟು ದಿನ ಬೈಡನ್​ ಉದ್ಘಾಟನಾ ಸಮಿತಿಯ ವಕ್ತಾರ ಆಗಿದ್ದರು. ಹಾಗೇ ಬೈಡನ್​ ಚುನಾವಣಾ ಪ್ರಚಾರದ ವೇಳೆ ಪ್ರಾದೇಶಿಕ ಸಂವಹನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಗೆ ಆಯಕಟ್ಟಿನ ಸ್ಥಾನ ನೀಡಿದ ಬೈಡನ್! ಯಾರವರು?
ವೇದಾಂತ್ ಪಟೇಲ್​
Lakshmi Hegde
|

Updated on:Dec 19, 2020 | 12:02 PM

Share

ವಾಷಿಂಗ್ಟನ್: ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್​ ತಮ್ಮ ಕಾರ್ಯಾಂಗ ವ್ಯಾಪ್ತಿಯಲ್ಲಿ ಭಾರತೀಯ ಮೂಲದ ಅಮೆರಿಕನ್ನರಿಗೆ ಹೆಚ್ಚಿನ ಸ್ಥಾನ-ಮಾನ ನೀಡುತ್ತಿದ್ದಾರೆ. ಅಮೆರಿಕದ ನಿಯೋಜಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭಾರತೀಯ ಮೂಲದವರು ಎಂಬುದೇ ಒಂದು ವಿಶೇಷ ಆಗಿರುವಾಗ, ಇತ್ತೀಚೆಗೆ ಜೋ ಬೈಡನ್​ ಹೊಸದಾಗಿ ರಚಿಸಿದ್ದ ಏಜೆನ್ಸಿ ಪರಿಶೀಲನಾ ತಂಡದಲ್ಲೂ 20 ಮಂದಿ ಭಾರತೀಯ ಮೂಲದವರಿಗೆ ಸ್ಥಾನ ನೀಡಿದ್ದರು.

ಇದೀಗ ಇನ್ನೋರ್ವ ಭಾರತೀಯನಿಗೆ ಜೋ ಬೈಡನ್​ ಮನ್ನಣೆ ನೀಡಿದ್ದಾರೆ. ವೈಟ್​ ಹೌಸ್​​ನ ಸಂವಹನ ಮತ್ತು ಮಾಧ್ಯಮ ವಿಭಾಗಕ್ಕೆ ಹೆಚ್ಚುವರಿ ಸದಸ್ಯರನ್ನು ನೇಮಕ ಮಾಡಿದ ಬೈಡೆನ್​, ಭಾರತೀಯ ಮೂಲದ ವೇದಾಂತ್​ ಪಟೇಲ್​ರನ್ನು ಸಹಾಯಕ ಪತ್ರಿಕಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.

ಪಟೇಲ್​ ಇಷ್ಟು ದಿನ ಬೈಡನ್​ ಉದ್ಘಾಟನಾ ಸಮಿತಿಯ ವಕ್ತಾರ ಆಗಿದ್ದರು. ಹಾಗೇ ಬೈಡನ್​ ಚುನಾವಣಾ ಪ್ರಚಾರದ ವೇಳೆ ಪ್ರಾದೇಶಿಕ ಸಂವಹನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮೊದಲು ಅಮೆರಿಕ ಸಂಸದೆ, ಭಾರತೀಯ ಮೂಲದ ಪ್ರಮೀಳಾ ಜಯಪಾಲ್​ರ ಸಂವಹನ ನಿರ್ದೇಶಕರಾಗಿ, ಸಂಸದ ಮೈಕ್​ ಹೊಂಡಾರ ಸಂವಹನ ನಿರ್ದೇಶಕರಾಗಿ ಮತ್ತು ಡೆಮಾಕ್ರಟಿಕ್​​ ನ್ಯಾಷನಲ್ ಕಮಿಟಿಯ ಪಾಶ್ಚಿಮಾತ್ಯ ಪ್ರಾದೇಶಿಕ ಪತ್ರಿಕಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

ವೇದಾಂತ್​ ಹುಟ್ಟಿದ್ದು ಭಾರತದಲ್ಲಿ..ಬೆಳೆದಿದ್ದೆಲ್ಲ ಕ್ಯಾಲಿಫೋರ್ನಿಯಾದಲ್ಲಿ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ ಮತ್ತು ಫ್ಲೋರಿಡಾ ಯೂನಿವರ್ಸಿಟಿಯಲ್ಲಿ ಪದವೀಧರರಾಗಿದ್ದಾರೆ. ಜೋ ಬೈಡನ್​ ಶುಕ್ರವಾರ ಒಟ್ಟು 16 ಜನರನ್ನು ಶ್ವೇತಭವನದ ಸಂವಹನ ಮತ್ತು ಪತ್ರಿಕಾ ಸಿಬ್ಬಂದಿಯನ್ನಾಗಿ ನೇಮಕ ಮಾಡಿದ್ದು, ಅದರಲ್ಲಿ ವೇದಾಂತ್​ಗೆ ಒಂದು ಆಯಕಟ್ಟಿನ ಸ್ಥಾನ ನೀಡಲಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

Published On - 11:18 am, Sat, 19 December 20

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು