AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಗೆ ಆಯಕಟ್ಟಿನ ಸ್ಥಾನ ನೀಡಿದ ಬೈಡನ್! ಯಾರವರು?

ವೇದಾಂತ್​ ಪಟೇಲ್​ ಇಷ್ಟು ದಿನ ಬೈಡನ್​ ಉದ್ಘಾಟನಾ ಸಮಿತಿಯ ವಕ್ತಾರ ಆಗಿದ್ದರು. ಹಾಗೇ ಬೈಡನ್​ ಚುನಾವಣಾ ಪ್ರಚಾರದ ವೇಳೆ ಪ್ರಾದೇಶಿಕ ಸಂವಹನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಗೆ ಆಯಕಟ್ಟಿನ ಸ್ಥಾನ ನೀಡಿದ ಬೈಡನ್! ಯಾರವರು?
ವೇದಾಂತ್ ಪಟೇಲ್​
Lakshmi Hegde
|

Updated on:Dec 19, 2020 | 12:02 PM

Share

ವಾಷಿಂಗ್ಟನ್: ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್​ ತಮ್ಮ ಕಾರ್ಯಾಂಗ ವ್ಯಾಪ್ತಿಯಲ್ಲಿ ಭಾರತೀಯ ಮೂಲದ ಅಮೆರಿಕನ್ನರಿಗೆ ಹೆಚ್ಚಿನ ಸ್ಥಾನ-ಮಾನ ನೀಡುತ್ತಿದ್ದಾರೆ. ಅಮೆರಿಕದ ನಿಯೋಜಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭಾರತೀಯ ಮೂಲದವರು ಎಂಬುದೇ ಒಂದು ವಿಶೇಷ ಆಗಿರುವಾಗ, ಇತ್ತೀಚೆಗೆ ಜೋ ಬೈಡನ್​ ಹೊಸದಾಗಿ ರಚಿಸಿದ್ದ ಏಜೆನ್ಸಿ ಪರಿಶೀಲನಾ ತಂಡದಲ್ಲೂ 20 ಮಂದಿ ಭಾರತೀಯ ಮೂಲದವರಿಗೆ ಸ್ಥಾನ ನೀಡಿದ್ದರು.

ಇದೀಗ ಇನ್ನೋರ್ವ ಭಾರತೀಯನಿಗೆ ಜೋ ಬೈಡನ್​ ಮನ್ನಣೆ ನೀಡಿದ್ದಾರೆ. ವೈಟ್​ ಹೌಸ್​​ನ ಸಂವಹನ ಮತ್ತು ಮಾಧ್ಯಮ ವಿಭಾಗಕ್ಕೆ ಹೆಚ್ಚುವರಿ ಸದಸ್ಯರನ್ನು ನೇಮಕ ಮಾಡಿದ ಬೈಡೆನ್​, ಭಾರತೀಯ ಮೂಲದ ವೇದಾಂತ್​ ಪಟೇಲ್​ರನ್ನು ಸಹಾಯಕ ಪತ್ರಿಕಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.

ಪಟೇಲ್​ ಇಷ್ಟು ದಿನ ಬೈಡನ್​ ಉದ್ಘಾಟನಾ ಸಮಿತಿಯ ವಕ್ತಾರ ಆಗಿದ್ದರು. ಹಾಗೇ ಬೈಡನ್​ ಚುನಾವಣಾ ಪ್ರಚಾರದ ವೇಳೆ ಪ್ರಾದೇಶಿಕ ಸಂವಹನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮೊದಲು ಅಮೆರಿಕ ಸಂಸದೆ, ಭಾರತೀಯ ಮೂಲದ ಪ್ರಮೀಳಾ ಜಯಪಾಲ್​ರ ಸಂವಹನ ನಿರ್ದೇಶಕರಾಗಿ, ಸಂಸದ ಮೈಕ್​ ಹೊಂಡಾರ ಸಂವಹನ ನಿರ್ದೇಶಕರಾಗಿ ಮತ್ತು ಡೆಮಾಕ್ರಟಿಕ್​​ ನ್ಯಾಷನಲ್ ಕಮಿಟಿಯ ಪಾಶ್ಚಿಮಾತ್ಯ ಪ್ರಾದೇಶಿಕ ಪತ್ರಿಕಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

ವೇದಾಂತ್​ ಹುಟ್ಟಿದ್ದು ಭಾರತದಲ್ಲಿ..ಬೆಳೆದಿದ್ದೆಲ್ಲ ಕ್ಯಾಲಿಫೋರ್ನಿಯಾದಲ್ಲಿ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ ಮತ್ತು ಫ್ಲೋರಿಡಾ ಯೂನಿವರ್ಸಿಟಿಯಲ್ಲಿ ಪದವೀಧರರಾಗಿದ್ದಾರೆ. ಜೋ ಬೈಡನ್​ ಶುಕ್ರವಾರ ಒಟ್ಟು 16 ಜನರನ್ನು ಶ್ವೇತಭವನದ ಸಂವಹನ ಮತ್ತು ಪತ್ರಿಕಾ ಸಿಬ್ಬಂದಿಯನ್ನಾಗಿ ನೇಮಕ ಮಾಡಿದ್ದು, ಅದರಲ್ಲಿ ವೇದಾಂತ್​ಗೆ ಒಂದು ಆಯಕಟ್ಟಿನ ಸ್ಥಾನ ನೀಡಲಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

Published On - 11:18 am, Sat, 19 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್