AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಗೆ ಆಯಕಟ್ಟಿನ ಸ್ಥಾನ ನೀಡಿದ ಬೈಡನ್! ಯಾರವರು?

ವೇದಾಂತ್​ ಪಟೇಲ್​ ಇಷ್ಟು ದಿನ ಬೈಡನ್​ ಉದ್ಘಾಟನಾ ಸಮಿತಿಯ ವಕ್ತಾರ ಆಗಿದ್ದರು. ಹಾಗೇ ಬೈಡನ್​ ಚುನಾವಣಾ ಪ್ರಚಾರದ ವೇಳೆ ಪ್ರಾದೇಶಿಕ ಸಂವಹನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಗೆ ಆಯಕಟ್ಟಿನ ಸ್ಥಾನ ನೀಡಿದ ಬೈಡನ್! ಯಾರವರು?
ವೇದಾಂತ್ ಪಟೇಲ್​
Lakshmi Hegde
|

Updated on:Dec 19, 2020 | 12:02 PM

Share

ವಾಷಿಂಗ್ಟನ್: ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್​ ತಮ್ಮ ಕಾರ್ಯಾಂಗ ವ್ಯಾಪ್ತಿಯಲ್ಲಿ ಭಾರತೀಯ ಮೂಲದ ಅಮೆರಿಕನ್ನರಿಗೆ ಹೆಚ್ಚಿನ ಸ್ಥಾನ-ಮಾನ ನೀಡುತ್ತಿದ್ದಾರೆ. ಅಮೆರಿಕದ ನಿಯೋಜಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭಾರತೀಯ ಮೂಲದವರು ಎಂಬುದೇ ಒಂದು ವಿಶೇಷ ಆಗಿರುವಾಗ, ಇತ್ತೀಚೆಗೆ ಜೋ ಬೈಡನ್​ ಹೊಸದಾಗಿ ರಚಿಸಿದ್ದ ಏಜೆನ್ಸಿ ಪರಿಶೀಲನಾ ತಂಡದಲ್ಲೂ 20 ಮಂದಿ ಭಾರತೀಯ ಮೂಲದವರಿಗೆ ಸ್ಥಾನ ನೀಡಿದ್ದರು.

ಇದೀಗ ಇನ್ನೋರ್ವ ಭಾರತೀಯನಿಗೆ ಜೋ ಬೈಡನ್​ ಮನ್ನಣೆ ನೀಡಿದ್ದಾರೆ. ವೈಟ್​ ಹೌಸ್​​ನ ಸಂವಹನ ಮತ್ತು ಮಾಧ್ಯಮ ವಿಭಾಗಕ್ಕೆ ಹೆಚ್ಚುವರಿ ಸದಸ್ಯರನ್ನು ನೇಮಕ ಮಾಡಿದ ಬೈಡೆನ್​, ಭಾರತೀಯ ಮೂಲದ ವೇದಾಂತ್​ ಪಟೇಲ್​ರನ್ನು ಸಹಾಯಕ ಪತ್ರಿಕಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.

ಪಟೇಲ್​ ಇಷ್ಟು ದಿನ ಬೈಡನ್​ ಉದ್ಘಾಟನಾ ಸಮಿತಿಯ ವಕ್ತಾರ ಆಗಿದ್ದರು. ಹಾಗೇ ಬೈಡನ್​ ಚುನಾವಣಾ ಪ್ರಚಾರದ ವೇಳೆ ಪ್ರಾದೇಶಿಕ ಸಂವಹನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮೊದಲು ಅಮೆರಿಕ ಸಂಸದೆ, ಭಾರತೀಯ ಮೂಲದ ಪ್ರಮೀಳಾ ಜಯಪಾಲ್​ರ ಸಂವಹನ ನಿರ್ದೇಶಕರಾಗಿ, ಸಂಸದ ಮೈಕ್​ ಹೊಂಡಾರ ಸಂವಹನ ನಿರ್ದೇಶಕರಾಗಿ ಮತ್ತು ಡೆಮಾಕ್ರಟಿಕ್​​ ನ್ಯಾಷನಲ್ ಕಮಿಟಿಯ ಪಾಶ್ಚಿಮಾತ್ಯ ಪ್ರಾದೇಶಿಕ ಪತ್ರಿಕಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

ವೇದಾಂತ್​ ಹುಟ್ಟಿದ್ದು ಭಾರತದಲ್ಲಿ..ಬೆಳೆದಿದ್ದೆಲ್ಲ ಕ್ಯಾಲಿಫೋರ್ನಿಯಾದಲ್ಲಿ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ ಮತ್ತು ಫ್ಲೋರಿಡಾ ಯೂನಿವರ್ಸಿಟಿಯಲ್ಲಿ ಪದವೀಧರರಾಗಿದ್ದಾರೆ. ಜೋ ಬೈಡನ್​ ಶುಕ್ರವಾರ ಒಟ್ಟು 16 ಜನರನ್ನು ಶ್ವೇತಭವನದ ಸಂವಹನ ಮತ್ತು ಪತ್ರಿಕಾ ಸಿಬ್ಬಂದಿಯನ್ನಾಗಿ ನೇಮಕ ಮಾಡಿದ್ದು, ಅದರಲ್ಲಿ ವೇದಾಂತ್​ಗೆ ಒಂದು ಆಯಕಟ್ಟಿನ ಸ್ಥಾನ ನೀಡಲಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

Published On - 11:18 am, Sat, 19 December 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು