AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್ ಉಗ್ರರ ಒತ್ತೆಯಾಳುಗಳಾಗಿದ್ದ ಇಬ್ಬರು ಅಮೆರಿಕ​​ ಪ್ರಜೆಗಳ ಬಿಡುಗಡೆ, ಆರೋಗ್ಯ ವಿಚಾರಿಸಿದ ಜೋ ಬೈಡನ್

ಶುಕ್ರವಾರ ರಾತ್ರಿ ಅಮೆರಿಕದ ಪ್ರಜೆಗಳಾದ ಜುಡಿತ್ ತೈ ರಾನನ್ ಮತ್ತು ಅವರು ಮಗಳು ನಟಾಲಿ ಶೋಷನಾ ರಾನನ್ ಅವರು ಹಮಾಸ್​​ ಕೈಯಿಂದ ಬಿಡುಗಡೆಗೊಂಡು ಇಸ್ರೇಲ್​​ಗೆ ಬಂದಿದ್ದಾರೆ ಎಂದು ಇಸ್ರೇಲ್​​​ ಸರ್ಕಾರ ಹೇಳಿದೆ. ಈ ಇಬ್ಬರಲ್ಲಿಯೂ ಅಮೆರಿಕದ ಅಧ್ಯಕ್ಷ ಜೋ ಬೈಡನ್​​​ ಫೋನ್​​ ಮೂಲಕ ಮಾತನಾಡಿದ್ದಾರೆ.

ಹಮಾಸ್ ಉಗ್ರರ ಒತ್ತೆಯಾಳುಗಳಾಗಿದ್ದ ಇಬ್ಬರು ಅಮೆರಿಕ​​ ಪ್ರಜೆಗಳ ಬಿಡುಗಡೆ, ಆರೋಗ್ಯ ವಿಚಾರಿಸಿದ ಜೋ ಬೈಡನ್
ಅಮೆರಿಕ ಪ್ರಜೆಗಳ ಬಿಡುಗಡೆ ಮಾಡಿದ ಹಮಾಸ್
ಅಕ್ಷಯ್​ ಪಲ್ಲಮಜಲು​​
|

Updated on: Oct 21, 2023 | 12:23 PM

Share

ಹಮಾಸ್​​ ಭಯೋತ್ಪಾದಕರು (Hamas terrorists) ಮತ್ತು ಇಸ್ರೇಲ್ (Israel)​​ ನಡುವೆ ನಿರಂತರ ಘರ್ಷಣೆಗಳು ನಡೆಯುತ್ತಿದೆ. ಈ ಯುದ್ಧದಿಂದ ಹಲವು ಸಾವು-ನೋವುಗಳು ಸಂಭವಿಸಿದೆ. ಎರಡು ರಾಷ್ಟ್ರಗಳು ಹಠದಲ್ಲಿ ನಿಂತಿರುವಂತೆ ಕಾಣುತ್ತಿದೆ. ನೀ ಬಿಡಲ್ಲ, ನಾನು ಬಿಡಲಾರೇ ಎಂಬಂತೆ ಎರಡು ಕಡೆ ಕಾದಾಟಗಳು ನಡೆಯುತ್ತಿದೆ. ಇದರ ಮಧ್ಯೆ ಹಮಾಸ್​​ ಉಗ್ರರು 200ಕ್ಕೂ ಹೆಚ್ಚು ಇಸ್ರೇಲ್​​ ಸೇರಿ ಅಮೆರಿಕಾದ ಜನರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದೆ. ಒಂದಿಷ್ಟು ಜನರನ್ನು ಹಮಾಸ್​​ ಉಗ್ರರಿಂದ ಇಸ್ರೇಲ್​​​ ಸೈನ್ಯ ಬಿಡಿಸಿಕೊಂಡು ಬಂದಿದೆ. ಆದರೆ ಇನ್ನು ಸುಮಾರಷ್ಟು ಜನ ಹಮಾಸ್​​ ಕೈ ವಶದಲ್ಲಿದ್ದಾರೆ. ಇನ್ನು ಅಮೆರಿಕದ ನಾಗರಿಕರು ಕೂಡ ಹಮಾಸ್​​​ ವಶದಲ್ಲಿದ್ದು, ಇದೀಗ ಇಬ್ಬರು ಅಮೆರಿಕ ಪ್ರಜೆಗಳನ್ನು ಹಮಾಸ್​​​ ಬಿಡುಗಡೆ ಮಾಡಿದೆ ಎಂದು ಇಸ್ರೇಲ್​​ ಸೈನ್ಯ ಹೇಳಿದೆ.

ಶುಕ್ರವಾರ ರಾತ್ರಿ ಅಮೆರಿಕದ ಪ್ರಜೆಗಳಾದ ಜುಡಿತ್ ತೈ ರಾನನ್ ಮತ್ತು ಅವರು ಮಗಳು ನಟಾಲಿ ಶೋಷನಾ ರಾನನ್ ಅವರು ಹಮಾಸ್​​ ಕೈಯಿಂದ ಬಿಡುಗಡೆಗೊಂಡು ಇಸ್ರೇಲ್​​ಗೆ ಬಂದಿದ್ದಾರೆ ಎಂದು ಇಸ್ರೇಲ್​​​ ಸರ್ಕಾರ ಹೇಳಿದೆ. ಈ ಇಬ್ಬರಲ್ಲಿಯೂ ಅಮೆರಿಕದ ಅಧ್ಯಕ್ಷ ಜೋ ಬೈಡನ್​​​ ಫೋನ್​​ ಮೂಲಕ ಮಾತನಾಡಿದ್ದಾರೆ. ಈ ಸಮಯದಲ್ಲಿ ತಾಯಿ -ಮಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. 14 ದಿನಗಳ ಕಾಲ ನಮ್ಮ ನಾಗರಿಕರು ತುಂಬಾ ಸಂಕಷ್ಟ ಅನುಭವಿಸಿದ್ದಾರೆ. ಶೀಘ್ರದಲ್ಲೇ ಅವರು ತಮ್ಮ ಕುಟುಂಬವನ್ನು ಭೇಟಿಯಾಗಲಿದ್ದಾರೆ. ತುಂಬಾ ಸಂತೋಷವಾಗುತ್ತಿದೆ. ಇನ್ನು ಮುಂದೆ ಅವರು ತಮ್ಮ ಕುಟುಂಬದ ಜತೆಗೆ ಸಂತೋಷವಾಗಿರಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಇಸ್ರೇಲ್ ಭದ್ರತಾ ಸಿಬ್ಬಂದಿಗೆ ಕೇರಳದಿಂದ ಸಮವಸ್ತ್ರ ಸರಬರಾಜು; ಕಣ್ಣೂರಿನ ಮರ್ಯನ್ ವರ್ಲ್ಡ್​ಫೇಮಸ್

ಇನ್ನು ಈ ಕಾರ್ಯಕ್ಕೆ ಸಹಾಯ ಮಾಡಿದ ಕತಾರ್ ಮತ್ತು ಈಜಿಪ್ಟ್‌, ಇಸ್ರೇಲ್​​ಗೆ ಧನ್ಯವಾದವನ್ನು ಜೋ ಬೈಡನ್ ಹೇಳಿದ್ದಾರೆ. ಈ ಬಿಡುಗಡೆ ಇತರ ಒತ್ತೆಯಾಳು ಕುಟುಂಬಕ್ಕೆ ಭರವಸೆಯನ್ನು ತಂದಿದೆ. ಹೀಗಾಗಿ ಮಾನವೀಯತೆಗೆ ಆದ್ಯತೆ ನೀಡಿ, ಸಂಘರ್ಷವನ್ನು ಕೊನೆಗೊಳಿಸುವುದು ಅಗತ್ಯ ಎಂದು ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಮಿರ್ಜಾನಾ ಸ್ಪೋಲ್ಜಾರಿಕ್ ಹೇಳಿದ್ದಾರೆ.

ಈ ತಾಯಿ-ಮಗಳನ್ನು ಅ.7ರಂದು ಇಸ್ರೇಲ್-ಗಾಜಾ ಗಡಿಯ ಸಮೀಪವಿರುವ ನಹಾಲ್ ಓಜ್ ಕಿಬ್ಬುಟ್ಜ್‌ನಿಂದ ಅಪಹಾರಿಸಲಾಗಿತ್ತು. ಈ ಇಬ್ಬರನ್ನು ಅಲ್-ಕಸ್ಸಾಮ್ ಬ್ರಿಗೇಡ್ಸ್ ಮಾನವೀಯ ಕಾರಣಗಳಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹಮಾಸ್​​ ಹೇಳಿದೆ. ಇನ್ನು ಅನೇಕ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಇಸ್ರೇಲ್​​ ಹೇಳಿದೆ. ಜುಡಿತ್ ತೈ ರಾನನ್ ಅಮೆರಿಕ ಹಾಗೂ ಇಸ್ರೇಲ್​​ಗೆ ಧನ್ಯವಾದಗಳನ್ನು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ