AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಬೈಡನ್-ಕಮಲಾ ಯುಗಾರಂಭ, ಭಾರತದಲ್ಲೂ ಸಂಭ್ರಮ

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಮತ್ತು ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಅಮೆರಿಕದಲ್ಲಿ ಬೈಡನ್-ಕಮಲಾ ಯುಗಾರಂಭ, ಭಾರತದಲ್ಲೂ ಸಂಭ್ರಮ
ತೈವಾನ್, ಹಾಂಗ್​ಕಾಂಗ್ ಮತ್ತು ಟಿಬೇಟ್​ಗಳ ಸ್ವಾಯತ್ತತೆಗೆ ಬೆಂಬಲ ನೀಡುತ್ತೇವೆ
Ghanashyam D M | ಡಿ.ಎಂ.ಘನಶ್ಯಾಮ
|

Updated on:Jan 21, 2021 | 12:06 AM

Share

ವಾಷಿಂಗ್​ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಮತ್ತು ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

127 ವರ್ಷ ಹಳೆಯದಾದ ಬೈಬಲ್‌ ಪ್ರತಿಯ ಮೇಲೆ ಕೈಯಿರಿಸಿ, 46ನೇ ಅಧ್ಯಕ್ಷರಾಗಿ ಬೈಡನ್ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷರು ಪ್ರಮಾಣ ವಚನ ಸ್ವೀಕರಿಸಲು ಬಳಸಿದ ಬೈಬಲ್​ ಪ್ರತಿಯನ್ನು ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಆಸ್ಥೆಯಿಂದ ಹಿಡಿದುಕೊಂಡಿದ್ದರು.

ಅಮೆರಿಕದ ಖ್ಯಾತ ಪಾಪ್ ಗಾಯಕಿ ಲೇಡಿ ಗಾಗಾ ರಾಷ್ಟ್ರಗೀತೆ ಹಾಡಿದರು. ಮತ್ತೋರ್ವ ಖ್ಯಾತ ಗಾಯಕಿ ಜೆನಿಫರ್ ಲೊಪೆಜ್ ಅಮೆರಿಕದ ಜನಪ್ರಿಯ ಐಕ್ಯಗೀತೆ ‘ದಿಸ್ ಲ್ಯಾಂಡ್ ಈಸ್ ಮೇಡ್ ಫಾರ್ ಯು ಅಂಡ್ ಮಿ’ ಹಾಡಿದರು.

ಬೈಡನ್‌ ಅವರಿಗೆ ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್‌ ರಾಬರ್ಟ್ಸ್, ಕಮಲಾ ಅವರಿಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸೋನಿಯಾ ಸೋಟೊಮೇಯರ್‌ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಮೆರಿಕ ಉಪಾಧ್ಯಕ್ಷರಾದ ಮೊದಲ ಭಾರತ ಸಂಜಾತ ಮಹಿಳೆ ಎಂಬ ಶ್ರೇಯಕ್ಕೂ ಕಮಲಾ ಹ್ಯಾರಿಸ್ ಪಾತ್ರರಾದರು. ಕಮಲಾ ಪದಗ್ರಹಣವನ್ನು ತಮಿಳುನಾಡಿನ ವಿವಿಧೆಡೆ ಸಂಭ್ರಮದಿಂದ ಸ್ವಾಗತಿಸಲಾಯಿತು.

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್

ಅಮೆರಿಕದ ಮಾಜಿ ಅಧ್ಯಕ್ಷ ಒಬಾಮಾ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಹೆಚ್ಚು ಜನರು ಸೇರಲು ಅವಕಾಶ ಇರಲಿಲ್ಲ. ಒಂದು ಸಾವಿರ ಅತಿಥಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರ ಉಳಿದು ಈವರೆಗಿನ ಶಿಷ್ಟಾಚಾರ ಉಲ್ಲಂಘಿಸಿದರು. ಟ್ರಂಪ್ ಬೆಂಬಲಿಗರು ದಾಳಿ ನಡೆಸಬಹುದು ಎಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ 25 ಸಾವಿರ ನ್ಯಾಷನಲ್ ಸೆಕ್ಯುರಿಟಿ ಗಾರ್ಡ್​ಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ಭದ್ರತೆಗೆ ನಿಯೋಜನೆಗೊಂಡಿರುವ ಎಲ್ಲಾ ಸಿಬ್ಬಂದಿಯ ಹಿನ್ನೆಲೆಯನ್ನೂ ಎಫ್​ಬಿಐ ಹಲವು ಬಾರಿ ಪರಿಶೀಲಿಸಿದ್ದು ಈ ಸಮಾರಂಭದ ಮತ್ತೊಂದು ಗಮನಾರ್ಹ ಸಂಗತಿ.

Published On - 10:21 pm, Wed, 20 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ