AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಘಾನಿಸ್ತಾನದಲ್ಲಿ ಯುದ್ಧ ಸನ್ನಿವೇಶ: ಸೈನ್ಯ ಹಿಂಪಡೆಯುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದ ಜೋ ಬೈಡನ್​

ಸದ್ಯ ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಹೋರಾಟಗಾರರು ತಮ್ಮ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅದೊಂದು ಯುದ್ಧಭೂಮಿಯಂತಾಗಿದ್ದು, ಈಗಾಗಲೇ ಹಲವು ಗಣ್ಯರ ಜೀವ ಹೋಗಿದೆ.

ಅಪ್ಘಾನಿಸ್ತಾನದಲ್ಲಿ ಯುದ್ಧ ಸನ್ನಿವೇಶ: ಸೈನ್ಯ ಹಿಂಪಡೆಯುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದ ಜೋ ಬೈಡನ್​
ಜೋ ಬೈಡನ್​
TV9 Web
| Edited By: |

Updated on:Aug 11, 2021 | 5:31 PM

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಉಗ್ರರು (Taliban Fighters) ತಮ್ಮ ಬಾಹುಳ್ಯವನ್ನು ವಿಸ್ತರಿಸಿಕೊಳ್ಳುತ್ತಿರುವ ಹೊತ್ತಲ್ಲಿ, ಯುಎಸ್​ ಅಧ್ಯಕ್ಷ ಜೋ ಬೈಡನ್​ ಒಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಅಫ್ಘಾನಿಸ್ತಾನ (Afghanistan)ದಿಂದ ತಮ್ಮ ಸೇನೆಯನ್ನು ಹಿಂಪಡೆಯುವ ತೀರ್ಮಾನವನ್ನು ಬದಲಿಸುವುದಿಲ್ಲ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದಿಂದ ಸೆಪ್ಟೆಂಬರ್​ 11ರೊಳಗೆ ಯುಎಸ್​ ಸೇನೆ (US Military)ಯನ್ನು ಹಿಂಪಡೆಯಬೇಕು ಎಂದು ಅಧ್ಯಕ್ಷ ಜೋ ಬೈಡನ್​ ಆದೇಶಿಸಿದ್ದಾರೆ. ಹಾಗೇ, ಯುದ್ಧ ಸನ್ನಿವೇಶ ಇರುವ ಅಫ್ಘಾನಿಸ್ತಾನದಿಂದ ಈಗಾಗಲೇ ಶೇ.90ರಷ್ಟು ಸೈನಿಕರನ್ನು ವಾಪಸ್ ಕರೆಸಿಕೊಂಡಿದ್ದಾಗಿ, ಯುಎಸ್​ ರಕ್ಷಣಾ ಇಲಾಖೆ ಪ್ರಧಾನ ಕಚೇರಿ ಪೆಂಟಗನ್​ ತಿಳಿಸಿದೆ.

ನಾವು ಕಳೆದ 20ವರ್ಷಗಳಲ್ಲಿ 3 ಲಕ್ಷಕ್ಕೂ ಅಧಿಕ ಅಫ್ಘಾನ್​ ಸೈನಿಕರಿಗೆ ತರಬೇತಿ ನೀಡಿದ್ದೇವೆ..ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದೇವೆ. ಅದಕ್ಕಾಗಿ ಟ್ರಿಲಿಯನ್ಸ್​ ಡಾಲರ್​ಗಳಷ್ಟು ಹಣ ವ್ಯಯಿಸಿದ್ದೇವೆ. ಅಮೆರಿಕ ಸೇನಾಪಡೆಯ ಸಾವಿರಾರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಜೋ ಬೈಡನ್​ ಹೇಳಿದ್ದಾರೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನದಲ್ಲಿ ಉನ್ನತ ರಾಜಕೀಯ ಪಕ್ಷಗಳು ಒಂದಾಗಬೇಕು ಎಂದೂ ತಿಳಿಸಿದ್ದಾರೆ.

ಸದ್ಯ ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಹೋರಾಟಗಾರರು ತಮ್ಮ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅದೊಂದು ಯುದ್ಧಭೂಮಿಯಂತಾಗಿದ್ದು, ಈಗಾಗಲೇ ಹಲವು ಗಣ್ಯರ ಜೀವ ಹೋಗಿದೆ. ಈ ಮಧ್ಯೆ ಬೈಡನ್​ ತಾವು ಸೇನೆ ವಾಪಸ್​ ಪಡೆಯುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಆದರೆ ನಮ್ಮ ಕಡೆಯಿಂದ ಅಗತ್ಯ ಸಹಕಾರ ಇದ್ದೇ ಇರುತ್ತದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಭೇಟಿ ಆಗಲಿರುವ ಸಚಿವ ಆನಂದ್ ಸಿಂಗ್; ಅಸಾಮಾಧಾನ ಬಗೆಹರಿಸುವ ವಿಶ್ವಾಸದಲ್ಲಿ ಬಸವರಾಜ ಬೊಮ್ಮಾಯಿ

Published On - 5:25 pm, Wed, 11 August 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ