AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಲು ಭಾರತಕ್ಕೆ ಭಯ: ಜೋ ಬೈಡೆನ್

‘ಕ್ವಾಡ್ ದೇಶಗಳ ಪೈಕಿ ಭಾರತ ಹೊರತುಪಡಿಸಿದರೆ ಜಪಾನ್ ಮತ್ತು ಆಸ್ಟ್ರೇಲಿಯಾಗಳು ಪುಟಿನ್​ರ ಪುಂಡಾಟವನ್ನು ಕಟುವಾಗಿ ಖಂಡಿಸಿವೆ.

ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಲು ಭಾರತಕ್ಕೆ ಭಯ: ಜೋ ಬೈಡೆನ್
ಜೋ ಬೈಡೆನ್, ನರೇಂದ್ರ ಮೋದಿ ಮತ್ತು ವ್ಲಾದಿಮಿರ್ ಪುಟಿನ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 22, 2022 | 10:28 AM

Share

ವಾಷಿಂಗ್​ಟನ್: ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಪ್ರತಿಕ್ರಿಯಿಸಲು ಭಾರತವು ಹೆದರಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದರು. ಉಕ್ರೇನ್​ನ ಪ್ರಮುಖ ನಗರಗಳಲ್ಲಿ ಪರಿಸ್ಥಿತಿ ಭೀಕರವಾಗಿದ್ದು, ರಷ್ಯಾ ದಾಳಿ ಆರಂಭಿಸಿ ಸುಮಾರು ಒಂದು ತಿಂಗಳಾಗುತ್ತಿದೆ. ‘ಕ್ವಾಡ್ ದೇಶಗಳ ಪೈಕಿ ಭಾರತ ಹೊರತುಪಡಿಸಿದರೆ ಜಪಾನ್ ಮತ್ತು ಆಸ್ಟ್ರೇಲಿಯಾಗಳು ಪುಟಿನ್​ರ ಪುಂಡಾಟವನ್ನು ಕಟುವಾಗಿ ಖಂಡಿಸಿವೆ. ರಷ್ಯಾ ವಿರುದ್ಧ ಜಾಗತಿಕ ಮಟ್ಟದಲ್ಲಿ ಕಠಿಣ ಕ್ರಮಗಳನ್ನು ಜರುಗಿಸಬೇಕಿದೆ ಎಂದು ಬೈಡೆನ್ ಅಭಿಪ್ರಾಯಪಟ್ಟರು. ಭಾರತ, ಜಪಾನ್, ಅಮೆರಿಕ ಮತ್ತು ಆಸ್ಟ್ರೇಲಿಯಾ ದೇಶಗಳು ಕ್ವಾಡ್ ಸದಸ್ಯ ರಾಷ್ಟ್ರಗಳಾಗಿವೆ.

ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಮೆರಿಕ ಭಾರತವನ್ನು ಆಗ್ರಹಿಸಿತ್ತು. ಈ ಕುರಿತು ಭಾರತದ ಮೇಲೆ ಅಮೆರಿಕ ಸರ್ಕಾರ ಒತ್ತಡ ಹೇರಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಅಮೆರಿಕ ಅಧ್ಯಕ್ಷರ ಕಚೇರಿಯ ವಕ್ತಾರರು, ‘ಈ ನಿಟ್ಟಿನಲ್ಲಿ ನಾವು ವಿವಿಧ ಹಂತಗಳಲ್ಲಿ ಭಾರತದ ನಾಯಕತ್ವದೊಂದಿಗೆ ಸಂಪರ್ಕದಲ್ಲಿದ್ದೇವೆ. ಅಧ್ಯಕ್ಷರು ನೇರವಾಗಿ ಈ ವಿಚಾರದಲ್ಲಿ ಸದ್ಯಕ್ಕೆ ಮಧ್ಯಪ್ರವೇಶಿಸುತ್ತಿಲ್ಲ. ಒಂದು ವೇಳೆ ಅಧ್ಯಕ್ಷರು ಮಧ್ಯಪ್ರವೇಶಿಸಿದರೆ ನಿಮಗೆ ವಿಷಯ ತಿಳಿಸುತ್ತೇವೆ’ ಎಂದು ಹೇಳಿದರು. ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ನಂತರ ಜಪಾನ್, ಅಮೆರಿಕ ಮತ್ತು ಆಸ್ಟ್ರೇಲಿಯಾ ಸರ್ಕಾರಗಳು ರಷ್ಯಾ ವಿರುದ್ಧ ಹಲವು ನಿರ್ಬಂಧಗಳನ್ನು ಘೋಷಿಸಿದ್ದವು. ಆದರೆ ಭಾರತ ಮಾತ್ರ ಇಂಥ ಯಾವುದೇ ನಿರ್ಧಾರ ಘೋಷಿಸಿರಲಿಲ್ಲ.

ಜಪಾನ್ ಪ್ರಧಾನಿ ಕಿಶಿದಾ ಅವರೊಂದಿಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ, ‘ಹಿಂಸಾಚಾರ ತಕ್ಷಣ ನಿಲ್ಲಬೇಕು’ ಎಂದು ಹೇಳಿದ್ದರು. ವಿಶ್ವಸಂಸ್ಥೆಯಲ್ಲಿಯೂ ಇಂಥದ್ದೇ ಹೇಳಿಕೆಗಳನ್ನು ಭಾರತ ಸರ್ಕಾರ ನೀಡಿತ್ತು. ಆದರೆ ರಷ್ಯಾ ವಿರುದ್ಧ ಮತ ಚಲಾಯಿಸಬೇಕಾದ ಪರಿಸ್ಥಿತಿ ಎದುರಾದಾಗ ಭಾರತ ತಾಟಸ್ಥ್ಯ ನೀತಿ ಅನುಸರಿಸಿತು. ಜೋ ಬೈಡೆನ್​ರ ಇತ್ತೀಚಿನ ಹೇಳಿಕೆಗಳಿಗೆ ಭಾರತ ಸರ್ಕಾರವೂ ಪ್ರತಿಕ್ರಿಯಿಸಿಲ್ಲ.

ರಷ್ಯಾ ವಿರುದ್ಧ ಭಾರತ ಏನೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿರುವ ಬೈಡೆನ್​ರ ನಿಲುವು ಸಹ ವಿವಾದಗಳಿಂದ ಹೊರತಾಗಿಲ್ಲ. ಉಕ್ರೇನ್​ನ ವಾಯುಗಡಿ ನಿರ್ಬಂಧಿಸಬೇಕು ಎನ್ನುವ ಉಕ್ರೇನ್ ಸರ್ಕಾರದ ಬೇಡಿಕೆಗೆ ಅಮೆರಿಕ ಅಥವಾ ನ್ಯಾಟೊ ಈವರೆಗೆ ಪ್ರತಿಕ್ರಿಯಿಸಿಲ್ಲ. ಯುದ್ಧಗ್ರಸ್ಥ ದೇಶದಿಂದ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತೇವೆ ಎಂಬ ಅಮೆರಿಕ ಪ್ರಸ್ತಾವವನ್ನೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ತಳ್ಳಿ ಹಾಕಿದ್ದರು. ‘ನನಗೆ ಶಸ್ತ್ರಾಸ್ತ್ರಗಳು ಬೇಕು, ಪ್ರವಾಸವಲ್ಲ’ ಎಂದು ಕಟುವಾಗಿ ನುಡಿದಿದ್ದರು. ‘ರಷ್ಯಾಗೆ ನ್ಯಾಟೊ ಹೆದರಿದೆ’ ಎಂದು ಬಹಿರಂಗವಾಗಿ ಗಂಭೀರ ಆರೋಪ ಮಾಡಿದ್ದ ಝೆಲೆನ್​ಸ್ಕಿ, ‘ನಮಗೆ ನ್ಯಾಟೊ ಸದಸ್ಯತ್ವ ಸಿಗುತ್ತದೆಯೋ, ಇಲ್ಲವೋ ಸ್ಪಷ್ಟಪಡಿಸಬೇಕು’ ಎಂದಿದ್ದರು.

ಇದನ್ನೂ ಓದಿ: Russia Ukraine Conflict: ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ ಎಂದ ಝೆಲೆನ್​ಸ್ಕಿ: ರಷ್ಯಾ ಉಕ್ರೇನ್ ಸಂಘರ್ಷದ 10 ಪ್ರಮುಖ ಬೆಳವಣಿಗೆಗಳಿವು

ಇದನ್ನೂ ಓದಿ: Russia Ukraine War: ಪುಟಿನ್ ಕೆಟ್ಟೋನು ಅಂತ್ಲೇ ಅಂದ್ಕೊಳಿ: ರಷ್ಯಾ ಉಕ್ರೇನ್ ಯುದ್ಧ ನೋಡುವ ಮೂರು ಕ್ರಮಗಳಿವು

Published On - 10:27 am, Tue, 22 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?