AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Biden: ರಷ್ಯಾವನ್ನು ಎಂದೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್​ ಜತೆ ಸದಾ ನಾವಿರುತ್ತೇವೆ: ಜೋ ಬೈಡನ್

ರಷ್ಯಾವನ್ನು ಎಂದಿಗೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್ ಜತೆ ಸದಾ ನಾವಿರುತ್ತೇವೆ  ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

Joe Biden: ರಷ್ಯಾವನ್ನು ಎಂದೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್​ ಜತೆ ಸದಾ ನಾವಿರುತ್ತೇವೆ: ಜೋ ಬೈಡನ್
ಜೋ ಬೈಡನ್ (ಸಂಗ್ರಹ ಚಿತ್ರ)
ನಯನಾ ರಾಜೀವ್
| Edited By: |

Updated on:Feb 22, 2023 | 9:16 AM

Share

ರಷ್ಯಾವನ್ನು ಎಂದಿಗೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್ ಜತೆ ಸದಾ ನಾವಿರುತ್ತೇವೆ  ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಉಕ್ರೇನ್​ಗೆ ಜೋ ಬೈಡನ್ ಭೇಟಿಕೊಟ್ಟ ಬಳಿಕ ಪುಟಿನ್ ಕಣ್ಣು ಕೆಂಪಾಗಿತ್ತು, ನಾವು ಇಷ್ಟಕ್ಕೇ ಬಿಡುವುದಿಲ್ಲ, ಉಕ್ರೇನ್ ಮೇಲೆ ಮತ್ತೆ ಯುದ್ಧ ಸಾರುತ್ತೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದರು. ಈ ಕುರಿತು ಮಾತನಾಡಿರುವ ಜೋ ಬೈಡನ್ ಎಂದಿಗೂ ಉಕ್ರೇನ್​ನನ್ನು ರಷ್ಯಾಗೆ ವಶಪಡಿಸಿಕೊಳ್ಳಲು ಬಿಡುವುದಿಲ್ಲ, ಯುದ್ಧದಲ್ಲಿ ಅವರು ಜಯಶಾಲಿಯಾಗುವುದಿಲ್ಲ, ಉಕ್ರೇನ್ ಜತೆ ಅಮೆರಿಕ ಸೇರಿದಂತೆ ಇತರೆ ಮಿತ್ರ ರಾಷ್ಟ್ರಗಳು ಇವೆ ಎಂದು ಭರವಸೆ ನೀಡಿದ್ದಾರೆ.

ತಮ್ಮ ನೆರೆಹೊರೆಯವರೊಂದಿಗೆ ಶಾಂತಿಯಿಂದ ಬದುಕಲು ಬಯಸುವ ಲಕ್ಷಾಂತರ ರಷ್ಯಾದ ನಾಗರಿಕರು ಶತ್ರುಗಳಲ್ಲ. ಯುಎಸ್ ಅಧ್ಯಕ್ಷ ಜೋ ಬೈಡನ್ ಅವರ ಉಕ್ರೇನ್ ಭೇಟಿಯನ್ನು ಗೌಪ್ಯವಾಗಿ ಆಯೋಜಿಸಲಾಗಿತ್ತು.

ಮತ್ತಷ್ಟು ಓದಿ: Russia Ukraine War: ನಾವು ಮತ್ತೆ ಉಕ್ರೇನ್ ಮೇಲೆ ದಾಳಿ ಮಾಡುತ್ತೇವೆ, ಪರೋಕ್ಷವಾಗಿ ಅಮೆರಿಕ ವಿರುದ್ಧ ಗುಡುಗಿದ ಪುಟಿನ್

ಉಕ್ರೇನಿಯನ್ ಜನರನ್ನು ವೈಮಾನಿಕ ಬಾಂಬ್ ದಾಳಿಯಿಂದ ರಕ್ಷಿಸಲು ಫಿರಂಗಿ, ಮದ್ದು-ಗುಂಡುಗಳು, ರಕ್ಷಣಾ ವ್ಯವಸ್ಥೆಗಳು ಹಾಗೂ ವಾಯು ಕಣ್ಗಾವಲು ರಾಡರ್‌ಗಳು ಸೇರಿದಂತೆ ನಿರ್ಣಾಯಕ ಸಲಕರಣೆಗಳನ್ನು ಪೂರೈಸುತ್ತೇನೆ ಎಂಬುದಾಗಿ ಶ್ವೇತಭವನದ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಳಿಕ ಝಲೆನ್ಸ್ಕಿ, ಬೈಡನ್ ಭೇಟಿಯನ್ನು ಬೆಂಬಲದ ಸಂಕೇತ ಸ್ವಾಗತಿಸಿದ್ದಾರೆ. ಈ ಬೆಳವಣಿಗೆ ರಷ್ಯಾಗೆ ಮತ್ತಷ್ಟು ಕೋಪ ಉಂಟುಮಾಡಿದೆ.

ಇತ್ತೀಚೆಗೆ ಬ್ರಿಟನ್ ಸಹ ಉಕ್ರೇನ್‌ಗೆ ಸೇನಾ ನೆರವು ಘೋಷಣೆ ಮಾಡಿತು. ರಷ್ಯಾವನ್ನು ಹಿಮ್ಮೆಟ್ಟಿಸಲು ಮೇ ತಿಂಗಳ ವೇಳೆಗೆ ಯುದ್ಧ ವಿಮಾನಗಳು ಹಾಗೂ ಯುದ್ಧ ಟ್ಯಾಂಕರ್‌ಗಳನ್ನು ಕೀವ್‌ಗೆ ಕಳುಹಿಸಿಕೊಡುವುದಾಗಿ ಭರವಸೆ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Wed, 22 February 23

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು