AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​​ಗೆ​ ಕರೆ ಮಾಡಿ ಖಡಕ್​ ಎಚ್ಚರಿಕೆ ನೀಡಿದ ಯುಎಸ್​ ಅಧ್ಯಕ್ಷ ಜೋ ಬೈಡನ್​

ಉಕ್ರೇನ್​​ನ್ನು ನ್ಯಾಟೋ ಪಡೆಗೆ ಸೇರಿಸಬಾರದು ಮತ್ತು ಪೂರ್ವ ಯುರೋಪ್​​ನಿಂದ ಈಗ ನ್ಯಾಟೋವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದೇವೆ. ಆದರೆ ಇದಕ್ಕೆ ಅಮೆರಿಕವಾಗಲೀ, ನ್ಯಾಟೋ ಆಗಲಿ ಸರಿಯಾಗಿ ಸ್ಪಂದಿಸಿಲ್ಲ ಎಂದು ರಷ್ಯಾದ ಅಧ್ಯಕ್ಷ ಪುಟಿನ್​ ಆರೋಪಿಸಿದ್ದಾರೆ. 

ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​​ಗೆ​ ಕರೆ ಮಾಡಿ ಖಡಕ್​ ಎಚ್ಚರಿಕೆ ನೀಡಿದ ಯುಎಸ್​ ಅಧ್ಯಕ್ಷ ಜೋ ಬೈಡನ್​
ಬೈಡನ್​ ಮತ್ತು ಪುತಿನ್​
TV9 Web
| Edited By: |

Updated on: Feb 13, 2022 | 2:45 PM

Share

ವಿಶ್ವದ ಕಣ್ಣು ರಷ್ಯಾ-ಉಕ್ರೇನ್​​ನತ್ತ (Russia-Ukraine) ನೆಟ್ಟಿದೆ. ರಷ್ಯಾ ಗಡಿಯಾದ್ಯಂತ ಸುಮಾರು ಲಕ್ಷ ಸೈನಿಕರನ್ನು ನಿಯೋಜಿಸಿದೆ. ಯಾವುದೇ ಕ್ಷಣದಲ್ಲಾದರೂ ಉಕ್ರೇನ್​ ಮೇಲೆ ರಷ್ಯಾ ದಂಡೆತ್ತಿ ಹೋಗಬಹುದು ಎಂದು ಅಮೆರಿಕ ಈಗಾಗಲೇ ಹೇಳಿದ್ದು, ಉಕ್ರೇನ್​​ನಲ್ಲಿರುವ ಯುಎಸ್​ ನಾಗರಿಕರು ಆದಷ್ಟು ಶೀಘ್ರವೇ ದೇಶಕ್ಕೆ ಮರಳಿ ಎಂದು ಶ್ವೇತಭವನ ಸೂಚನೆ ನೀಡಿದೆ. ಇಷ್ಟೆಲ್ಲದರ ಮಧ್ಯೆ ಶನಿವಾರ ಯುಎಸ್​ ಅಧ್ಯಕ್ಷ ಜೋ ಬೈಡನ್ (Joe Biden)​ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ಗೆ ಖಡಕ್​ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಉಕ್ರೇನ್​ ದೇಶವನ್ನು ಅತಿಕ್ರಮಣ ಮಾಡುವುದನ್ನು ರಷ್ಯಾ ಮುಂದುವರಿಸಿದರೆ ಯುಎಸ್​, ಯುಎಸ್​ ಮತ್ತು ನಮ್ಮ ಮಿತ್ರ ರಾಷ್ಟ್ರಗಳು ಕೂಡ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಬೇಕಾಗುತ್ತದೆ. ಅದರಲ್ಲೂ ಯುಎಸ್​, ರಷ್ಯಾದ ಮೇಲೆ ಅತ್ಯಂತ ದುಬಾರಿ ವೆಚ್ಚದ ನಿರ್ಬಂಧಗಳನ್ನು ಹೇರಲಿದೆ ಎಂದು ಹೇಳಿದ್ದಾರೆ.

ಜೋ ಬೈಡನ್​ ಅವರು ಶನಿವಾರ ಪುಟಿನ್​ಗೆ ಫೋನ್​ ಕಾಲ್​ ಮಾಡಿರುವ ಬಗ್ಗೆ ಶ್ವೇತ ಭವನ ಹೇಳಿಕೆ ಬಿಡುಗಡೆ ಮಾಡಿದೆ. ಅದರಲ್ಲಿ ಅಧ್ಯಕ್ಷ ಬೈಡನ್​, ರಷ್ಯಾ ಅಧ್ಯಕ್ಷನಿಗೆ ಕರೆ ಮಾಡಿ ಮಾತನಾಡಿದ್ದನ್ನು ವಿವರಿಸಲಾಗಿದೆ. ಉಕ್ರೇನ್​ ಮೇಲೆ ರಷ್ಯಾ ದಾಳಿ ನಡೆಸಿದರೆ, ಅನೇಕ ಹಾನಿಯಾಗಲಿದೆ. ಅದೆಷ್ಟೋ ಜನರ ಜೀವ ಬಲಿಯಾಗುತ್ತದೆ. ಅಷ್ಟೇ ಅಲ್ಲ, ಈ ದಾಳಿ ರಷ್ಯಾದ ಪ್ರತಿಷ್ಠೆಗೆ ಕುಂದಾಗಲಿದೆ. ಜಾಗತಿಕವಾಗಿ ಅದರ ಸ್ಥಾನಮಾನ ಕಡಿಮೆಯಾಗುತ್ತದೆ. ರಷ್ಯಾ ಉಕ್ರೇನ್​ ಮೇಲಿನ ಆಕ್ರಮಣ ಹೀಗೆ ಮುಂದುವರಿಸಿದರೆ, ಯುಎಸ್​ ಕೂಡ ಎಲ್ಲದಕ್ಕೂ ಸಿದ್ಧವಾಗುತ್ತದೆ. ಯುಎಸ್ ಮತ್ತು ಮಿತ್ರರಾಷ್ಟ್ರಗಳು ರಷ್ಯಾ ಮೇಲೆ ತೀವ್ರ ಹಾಗೂ ಹೆಚ್ಚಿನ ಪ್ರಮಾಣದ ವೆಚ್ಚಗಳನ್ನು ಹೇರಬೇಕಾಗುತ್ತದೆ. ಇದರಿಂದ ಮುಂದಿನ ದಿನಗಳಲ್ಲಿ ವ್ಯಾಪಾರ-ವಹಿವಾಟಿಗೆ ತೊಂದರೆಯಾಗುವ ಜತೆ ರಷ್ಯಾ ಆರ್ಥಿಕತೆಗೆ ಹೊಡೆತ ಬೀಳುತ್ತದೆ ಎಂದು ಬೈಡನ್​ ಎಚ್ಚರಿಕೆ ನೀಡಿದ್ದಾರೆ. ಅಂದಹಾಗೇ, ಜೋ ಬೈಡನ್​ ಸುಮಾರು ಒಂದು ತಾಸುಗಳ ಕಾಲ ಪುಟಿನ್​ ಜತೆ ಮಾತನಾಡಿದ್ದಾರೆ ಎನ್ನಲಾಗಿದೆ.

ಉಕ್ರೇನ್​​ನ್ನು ನ್ಯಾಟೋ ಪಡೆಗೆ ಸೇರಿಸಬಾರದು ಮತ್ತು ಪೂರ್ವ ಯುರೋಪ್​​ನಿಂದ ಈಗ ನ್ಯಾಟೋವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದೇವೆ. ಆದರೆ ಇದಕ್ಕೆ ಅಮೆರಿಕವಾಗಲೀ, ನ್ಯಾಟೋ ಆಗಲಿ ಸರಿಯಾಗಿ ಸ್ಪಂದಿಸಿಲ್ಲ ಎಂದು ರಷ್ಯಾದ ಅಧ್ಯಕ್ಷ ಪುಟಿನ್​ ಆರೋಪಿಸಿದ್ದಾರೆ.  ನಮಗೆ ಉಕ್ರೇನ್​​ ಮೇಲೆ ಯುದ್ಧ ಸಾರುವ ಇರಾದೆ ಇಲ್ಲ ಎಂದೂ ಹೇಳಿದ್ದಾರೆ. ಹಾಗಿದ್ದಾಗ್ಯೂ ಉಕ್ರೇನ್​ನ್ನು ರಷ್ಯಾ ಸೈನಿಕರು ಮೂರು ಕಡೆಯಿಂದ ಸುತ್ತುವರಿದಿದ್ದಾರೆ. ಈ ಮಧ್ಯೆ ಆಸ್ಟ್ರೇಲಿಯಾ, ಉಕ್ರೇನ್​ ರಾಜಧಾನಿ ಕೈವ್​​ನಲ್ಲಿರುವ ತನ್ನ ರಾಯಭಾರಿ ಕಚೇರಿಯನ್ನು ಸ್ಥಳಾಂತರ ಮಾಡುವುದಾಗಿ ಹೇಳಿಕೆ ನೀಡಿದೆ.

ಇದನ್ನೂ ಓದಿ: ಉಕ್ರೇನ್​ ಮೇಲೆ ಶೀಘ್ರದಲ್ಲೇ ದಾಳಿ ಮಾಡಲಿದೆ ರಷ್ಯಾ ?!-48 ಗಂಟೆಯಲ್ಲಿ ಉಕ್ರೇನ್​ ತೊರೆಯಲು ತನ್ನ ಪ್ರಜೆಗಳಿಗೆ ಸೂಚಿಸಿದ ಅಮೆರಿಕ​ ಶ್ವೇತ ಭವನ

ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು