WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!

ವಿಶ್ವದ ಪ್ರಮುಖ ಸುದ್ದಿ ಸಂಸ್ಥೆಗಳಲ್ಲಿ ಒಂದಾದ ಅಸೋಸಿಯೇಟೆಡ್​ ಪ್ರೆಸ್​ ವರದಿ ಪ್ರಕಾರ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ದೇಶ ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ವುಹಾನ್​ ವೈರಸ್​ ಪ್ರಯೋಗಾಲಯದಲ್ಲಿ ಹುಟ್ಟಿದ್ದಲ್ಲ ಎಂದು ಹೇಳಿದೆ. ಇದು ವಿಶೇಷ

WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ,  ಪ್ರಾಣಿಯಿಂದ ಬಂದಿದ್ದು!
WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!
Follow us
| Updated By: ಸಾಧು ಶ್ರೀನಾಥ್​

Updated on: Mar 29, 2021 | 3:40 PM

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ಜಂಟಿಯಾಗಿ ಕೈಗೊಂಡ ಕೊರೊನಾ ಎಲ್ಲಿ ಹುಟ್ಟಿರಬಹುದು ಎಂಬ ವೈಜ್ಞಾನಿಕ ಅಧ್ಯಯನದ ಕರಡು ಪ್ರತಿ ಈಗ ಹೊರಬಿದ್ದಿದೆ. ಅದರ ಪ್ರಕಾರ, ಈ ವೈರಸ್ ಪ್ರಯೋಗಾಲಯದಲ್ಲಿ ಹುಟ್ಟಿರುವ ಸಾಧ್ಯತೆ ತುಂಬಾ ಕಡಿಮೆ ಮತ್ತು ಇದು, ಬಾವಲಿಯಿಂದ ಮಾನವನಿಗೆ ಬೇರೆ ಯಾವುದೋ ಪ್ರಾಣಿ ಮೂಲಕ ಹಬ್ಬಿದೆ. ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್​ನ ವರದಿ ಪ್ರಕಾರ, ಇಷ್ಟು ದಿನ ಚೀನಾ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಏನು ಹೇಳಿಕೊಂಡು ಬಂದಿದ್ದವೋ ಅದನ್ನೇ ಈ ವರದಿಯಲ್ಲಿ ಪುನರುಚ್ಚರಿಸಿದಂತಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ಜಂಟಿ ಸಂಶೋಧನಾ ಟೀಂ ಈ ಸಂಶೋಧನೇ ಮುಂದುವರಿಸಬೇಕು ಮತ್ತು ಇದರ ಮೂಲ ಹುಡುಕಬೇಕೆಂದು ಹೇಳಿವೆ ಎಂದು ಈ ಕರಡು ಪ್ರತಿಯಲ್ಲಿ ನಮೂದಿಸಲಾಗಿದೆ. ಆದರೆ, ಅಧಿಕೃತವಾಗಿ ವರದಿ ಬಿಡುಗಡೆ ಮುಂದಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲೋ ಒಂದು ಕಡೆ ಚೀನಾ ವಿಶ್ವ ಆರೋಗ್ಯ ಸಂಸ್ಥೆಯ ಮೇಲೆ ಒತ್ತಡ ಹೇರುತ್ತಿದೆಯಾ ಎಂಬ ಸಂಶಯ ಬರುತ್ತಿದೆ ಎಂದು ಎಪಿ ಸುದ್ದಿ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ. ತನ್ನ ಬಳಿ ಕರಡು ಪ್ರತಿಯೊಂದಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆ ಇದನ್ನೇ ಬಿಡುಗಡೆ ಮಾಡುತ್ತದೆಯೋ ಅಥವಾ ಕರಡಿನಲ್ಲಿ ಇನ್ನೂ ಏನಾದರೂ ಬದಲಾವಣೆ ಮಾಡಲು ಸಾಧ್ಯವೋ ಎಂಬುದನ್ನು ಕಾದು ನೋಡಬೇಕು ಎಂದು ಎಪಿ ಸುದ್ದಿಸಂಸ್ಥೆ ಹೇಳಿದೆ.

ಅಮೆರಿಕದ ತಜ್ಞರು ಹೇಳೋದು ಬೇರೆ ಈ ನಡುವೆ ಅಮೆರಿಕದ ತಜ್ಞರು ಹೇಳುತ್ತಿರುವುದೇ ಬೇರೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ, ಅಮೆರಿಕದ ಮಾಜಿ ನಿರ್ದೇಶಕ, ರಾಬರ್ಟ್ ರೆಡ್ಫೀಲ್ಡ್ ಅವರು ಈ ವೈರಸ್ ಪ್ರಯೋಗಾಲಯದಲ್ಲೇ ಹುಟ್ಟಿದ್ದು. ಶುಕ್ರವಾರ ಅಮೆರಿಕದ ಕೆಲವು ಸುದ್ದಿ ಸಂಸ್ಥೆಗಳಿಗೆ ಸಂದರ್ಶನ ನೀಡಿದ ಅವರು ಈ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 2019 ರ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳು ವುಹಾನ್, ಚೀನಾದಿಂದ ಇದು ಹೊರಬಂದಿದೆ ಎಂದು ಅವರು ಹೇಳಿದ್ದಾರೆ.

ಆದರೆ ಅವರು ಒಂದು ಮಾತನ್ನು ಒತ್ತಿ ಹೇಳಿದ್ದಾರೆ: ಇದು ನನ್ನ ಅಭಿಪ್ರಾಯವೇ ಹೊರತು, ಯಾವುದೇ ಸಂಶೋಧನೆಯ ಅಂತಿಮ ವರದಿ ಅಲ್ಲ. ನನಗೆ ಗೊತ್ತು ನನ್ನ ಅಭಿಪ್ರಾಯವನ್ನು ಬೇರೆಯವರು ಒಪ್ಪುತ್ತಿಲ್ಲ ಎಂದು. ಅದರ ಬಗ್ಗೆ ನನಗೆ ಬೇಸರ ಇಲ್ಲ. ಒಂದಲ್ಲ ಒಂದು ದಿನ ವಿಜ್ಞಾನ ಇದರ ಹಿಂದಿನ ಮರ್ಮವನ್ನು ಭೇದಿಸಲಿದೆ. ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಕಾರಕ ವೈರಸ್​ಅನ್ನು ಪ್ರಯೋಗಲಾಯದಲ್ಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡಲು ಪ್ರಯೋಗಲಾಯದಲ್ಲಿಯೇ ಈ ವೈರಸ್​ಅನ್ನು ಹುಟ್ಟು ಹಾಕಿದ್ದಾರೆ.

ನಾನು ಯಾವುದೇ ಕಾರಣಕ್ಕೂ ಬೇರೆಯವರ ಕೆಲಸದ ಬಗ್ಗೆ ಟಿಪ್ಪಣಿ ಮಾಡೋಲ್ಲ. ನಾನೊಬ್ಬ ವೈರಾಲಜಿಸ್ಟ್. ಇಡೀ ಜೀವನವನ್ನು ಈ ವೈರಾಲಜಿ ವಿಷಯ ಅಧ್ಯಯನದಲ್ಲಿಯೇ ಕಳೆದಿದ್ದೇನೆ. ನನಗೆ ಒಂದು ಸಂಶಯ ಕಾಡುತ್ತಿದೆ: ಯಾವುದೇ ವೈರಸ್ ಪ್ರಾಣಿಯಿಂದ ಮನುಷ್ಯನಿಗೆ ಹಬ್ಬಿದಾಗ, ಆ ವೈರಸ್ ಮನುಷ್ಯನಿಂದ ಮನುಷ್ಯನಿಗೆ ಹಬ್ಬುವ ಗುಣ ಸ್ವಲ್ಪ ನಿಧಾನವಾಗಿರುತ್ತದೆ. ಆದರೆ ಇಲ್ಲಿ ಆದದ್ದೇ ಬೇರೆ. ಇದರಿಂದಾಗಿ ಈ ವೈರಸ್ ಪ್ರಯೋಗಾಲಯದಲ್ಲಿಯೇ ಹುಟ್ಟಿರಬಹುದು ಎಂಬುದು ನನ್ನ ಬಲವಾದ ನಂಬಿಕೆ ಎಂದು ಅವರು ಸಿಎನ್ಎನ್ ಟಿವಿ ಸಂದರ್ಶನದಲ್ಲಿ ಹೇಳಿದರು.

ಫೌಜಿ ನಂಬಿಕೆಯೇ ಬೇರೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ವೈದ್ಯಕೀಯ ಸಲಹಾಕಾರ ಮತ್ತು ರಾಷ್ಟ್ರೀಯ ಅಲರ್ಜಿ ಮತ್ತು ಸಾಂಕ್ರಾಮಿಕ ರೋಗಗಳ ಅಧ್ಯಯನ ಕೇಂದ್ರದ ಮುಖ್ಯಸ್ಥ ಅಂಥೊನಿ ಫೌಜಿ ಅವರಿಗೆ ಈ ಕುರಿತು ಕೇಳಿದಾಗ, ಈ ಸಾಧ್ಯತೆ ಕಡಿಮೆ ಎಂದು ಹೇಳಿದರು.

ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!