Nobel Peace Prize 2021: ರಷ್ಯಾ ಮತ್ತು ಫಿಲಿಪೈನ್ಸ್​​ನ ಇಬ್ಬರು ಪತ್ರಕರ್ತರಿಗೆ ನೊಬೆಲ್​ ಶಾಂತಿ ಪುರಸ್ಕಾರ

ಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಪ್ರತಿಕೂಲ ಪರಿಸ್ಥಿತಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಇವರಿಬ್ಬರೂ ಜಗತ್ತಿಗೇ ಆದರ್ಶಪ್ರಾಯರಾಗಿ ನಿಂತಿದ್ದಾರೆ ಎಂದು ನೊಬೆಲ್ ಸಮಿತಿಯ ಅಧ್ಯಕ್ಷೆ ಬೆರಿಟ್ ರೀಸ್-ಆಂಡರ್ಸನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Nobel Peace Prize 2021: ರಷ್ಯಾ ಮತ್ತು ಫಿಲಿಪೈನ್ಸ್​​ನ ಇಬ್ಬರು ಪತ್ರಕರ್ತರಿಗೆ ನೊಬೆಲ್​ ಶಾಂತಿ ಪುರಸ್ಕಾರ
ನೊಬೆಲ್​ ಶಾಂತಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು
Follow us
| Updated By: Lakshmi Hegde

Updated on:Oct 08, 2021 | 4:02 PM

ಒಸ್ಲೋ: ಫಿಲಿಪೈನ್ಸ್ ಪತ್ರಕರ್ತೆ ಮರಿಯಾ ರೆಸ್ಸಾ ಮತ್ತು ರಷ್ಯಾದ ಪತ್ರಕರ್ತ ಡಿಮಿಟ್ರಿ ಮುರಾಟೋವ್ 2021ನೇ ಸಾಲಿನ ನೊಬೆಲ್​ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಷ್ಯಾ ಹಾಗೂ ಫಿಲಿಪೈನ್ಸ್​​ನಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಇವರಿಬ್ಬರೂ ದಿಟ್ಟ ಹೋರಾಟ ನಡೆಸಿದ್ದರು. ರೆಸ್ಸಾ ಮತ್ತು ಮುರಾಟೋವ್​ ಅವರು ಫಿಲಿಪೈನ್ಸ್​ ಮತ್ತು ರಷ್ಯಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟ ಪರಿಗಣಿಸಿ ಅವರಿಬ್ಬರಿಗೆ ಈ ಬಾರಿಯ ನೊಬೆಲ್​ ಶಾಂತಿ ಪುರಸ್ಕಾರ ನೀಡಲಾಗುವುದು ಎಂದು ನೊಬೆಲ್ ಸಮಿತಿಯ ಅಧ್ಯಕ್ಷೆ ಬೆರಿಟ್ ರೀಸ್-ಆಂಡರ್ಸನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಹಾಗೇ, ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಪ್ರತಿಕೂಲ ಪರಿಸ್ಥಿತಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಇವರಿಬ್ಬರೂ ಜಗತ್ತಿಗೇ ಆದರ್ಶಪ್ರಾಯರಾಗಿ ನಿಂತಿದ್ದಾರೆ ಎಂದೂ ತಿಳಿಸಿದ್ದಾರೆ. 

ಪತ್ರಕರ್ತೆ ರೆಸ್ಸಾ (58)  ತಮಗೆ ನೊಬೆಲ್​ ಶಾಂತಿ ಪುರಸ್ಕಾರ ಬಂದಿದ್ದು ನಿಜಕ್ಕೂ ಶಾಕ್​​ ತಂದಿದೆ. ಭಾವನಾತ್ಮಕ ಕ್ಷಣವಾಗಿದೆ. ಇದನ್ನು ಸ್ವೀಕರಿಸಲು ತುಂಬ ಹೆಮ್ಮೆಯಾಗುತ್ತದೆ ಎಂದಿದ್ದಾರೆ. ಹಾಗೇ, ಫಿಲಿಪೈನ್ಸ್​ನಲ್ಲಿ ಈಗಿರುವ ಪತ್ರಕರ್ತರೂ ಕೂಡ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಯ ಹೋರಾಟವನ್ನು ಮುಂದುವರಿಸಬೇಕು ಎಂದು ಆಶಿಸಿದ್ದಾರೆ. ಹಾಗೇ, ಇವರು  2012ರಲ್ಲಿ ಸ್ಥಾಪನೆಯಾದ ತನಿಖಾ ಪತ್ರಿಕೋದ್ಯಮದ ಡಿಜಿಟಲ್​ ಮೀಡಿಯಾ ಸಂಸ್ಥೆ (ಆನ್​​ಲೈನ್​ ಮೀಡಿಯಾ) ರಾಪ್ಲರ್​ನ  ಸಹ ಸಂಸ್ಥಾಪಕರಾಗಿದ್ದಾರೆ. ಪತ್ರಿಕೆಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗುತ್ತಿರುವದನ್ನು ಕಟುವಾಗಿ ವಿರೋಧಿಸಿದ್ದರು. ಅಮೆರಿಕ ಪೌರತ್ವ ಹೊಂದಿರುವ ಅವರಿಗೆ ಜೈಲುಶಿಕ್ಷೆಯೂ ಆಗಿದೆ. ಅವರೀಗ ಜಾಮೀನನ ಆಧಾರದ ಮೇಲೆ ಹೊರಗಿದ್ದಾರೆ.

ರಷ್ಯಾದ ಪತ್ರಕರ್ತ ಡಿಮಿಟ್ರಿ ಮುರಾಟೋವ್​ಗೆ 59 ವರ್ಷ ವಯಸ್ಸಾಗಿದ್ದು, ಇವರೂ ಸಹ ರಷ್ಯಾದಲ್ಲಿ ಹರಣವಾಗುತ್ತಿರುವ ಅಭಿವ್ಯಕ್ತಿ, ವಾಕ್​​ ಸ್ವಾತಂತ್ರ್ಯ ರಕ್ಷಣೆಗಾಗಿ ದಶಕಗಳಿಂದಲೂ ಹೋರಾಟ ನಡೆಸಿದವರು. ನೊವಾಯಾ ಗೆಜೆಟಾ ಎಂಬ ಸ್ವತಂತ್ರ ಪತ್ರಿಕೆಯ ಸಂಸ್ಥಾಪಕರಲ್ಲಿ ಒಬ್ಬರು. 1993ರಲ್ಲಿ ನೊವಾಯಾ ಗೆಜೆಟಾ ಪ್ರಾರಂಭವಾಗಿದ್ದು, 1995ರವರೆಗೆ ಡಿಮಿಟ್ರಿಯವರೇ ಅದರ ಮುಖ್ಯಸಂಪಾದಕರಾಗಿದ್ದರು. ಈ ಪತ್ರಿಕೆ ಅಧಿಕಾರವನ್ನು ಮೂಲಭೂತವಾಗಿ ವಿಮರ್ಶಿಸುವ ಮನೋಭಾವದಿಂದ ಕೆಲಸ ಮಾಡುತ್ತಿದೆ. ಇದಕ್ಕೆ ಅಪಾರ ವಿರೋಧಿಗಳು ಇದ್ದು, ಡಿಮಿಟ್ರಿ ಮುರಾಟೋವ್​ಗೂ ಸಹ ಕೊಲೆ ಬೆದರಿಕೆಗಳು ಬಂದಿವೆ. ಇಲ್ಲಿಯವರೆಗೆ ಈ ಸುದ್ದಿಪತ್ರಿಕೆಗ ಸಂಬಂಧಪಟ್ಟಂತೆ 6 ಮಂದಿಯನ್ನು ಕೊಲ್ಲಲಾಗಿದೆ. ಅಂದರೆ ಆಡಳಿತ, ಸರ್ಕಾರ ವಿರೋಧಿಗಳನ್ನು ಅಲ್ಲಿ ಸಹಿಸಿಕೊಳ್ಳುತ್ತಿಲ್ಲ. ಈ ಮಧ್ಯೆಯೂ ಡಿಮಿಟ್ರಿ ಮುರಾಟೋವ್​ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಶಸ್ತಿ ಸಮಿತಿ ಹೇಳಿದೆ. ಈ ನೊಬೆಲ್​ ಶಾಂತಿ ಪುರಸ್ಕಾರವನ್ನು ಡಿಸೆಂಬರ್​ 10ರಂದು ಪ್ರದಾನ ಮಾಡಲಾಗುವುದು.

ಇದನ್ನೂ ಓದಿ: Nobel Prize 2021: ಪ್ರಸಕ್ತ ವರ್ಷದ ಭೌತಶಾಸ್ತ್ರ ಕ್ಷೇತ್ರದ ನೊಬೆಲ್​ ಪ್ರಶಸ್ತಿ ಈ ಮೂವರು ವಿಜ್ಞಾನಿಗಳಿಗೆ

Airtel: ಜಿಯೋಗೆ ಭಾರೀ ಹೊಡೆತ: ಏರ್ಟೆಲ್​ನಿಂದ ಕೇವಲ 48 ರೂ. ಗೆ ಬರೋಬ್ಬರಿ 3GB ಡೇಟಾ

Published On - 3:36 pm, Fri, 8 October 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ