ಭಾರತದ ವಿರುದ್ಧ ವಿಶ್ವಾಸಾರ್ಹ ಸಾಕ್ಷ್ಯಗಳಿವೆ ಎಂದ ಟ್ರುಡೊ ಆದರೆ ಬಹಿರಂಗಪಡಿಸಲು ಹಿಂದೇಟು

ಈ ವರ್ಷ ಜೂನ್​ನಲ್ಲಿ ಕೆನಡಾ(Canada)ದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ( Hardeep Singh Nijjar)ಹತ್ಯೆಗೆ ಸಂಬಂಧಿಸಿದಂತೆ ಭಾರತ ಹಾಗೂ ಕೆನಡಾ ನಡುವೆ ಉದ್ವಿಗ್ನತೆ ನಿರಂತರವಾಗಿ ಹೆಚ್ಚುತ್ತಿದೆ. ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಅದನ್ನು ಸಾಬೀತುಪಡಿಸಲು ವಿಶ್ವಾಸಾರ್ಹ ಸಾಕ್ಷಿಗಳು ನಮ್ಮ ಜತೆ ಇವೆ ಎಂದು ಹೇಳಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಟೊ ಆ ಸಾಕ್ಷ್ಯಗಳನ್ನು ಬಹಿರಂಗಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟ್​ಗಳು ಭಾಗಿಯಾಗಿದ್ದಾರೆ ಎಂದು ಗುರುವಾರ ಮತ್ತೊಮ್ಮೆ ಟ್ರುಡೊ ಆರೋಪಿಸಿದ್ದಾರೆ

ಭಾರತದ ವಿರುದ್ಧ ವಿಶ್ವಾಸಾರ್ಹ ಸಾಕ್ಷ್ಯಗಳಿವೆ ಎಂದ ಟ್ರುಡೊ ಆದರೆ ಬಹಿರಂಗಪಡಿಸಲು ಹಿಂದೇಟು
ಜಸ್ಟಿನ್ ಟ್ರುಡೊImage Credit source: Mint
Follow us
|

Updated on:Sep 22, 2023 | 10:51 AM

ಈ ವರ್ಷ ಜೂನ್​ನಲ್ಲಿ ಕೆನಡಾ(Canada)ದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ( Hardeep Singh Nijjar)ಹತ್ಯೆಗೆ ಸಂಬಂಧಿಸಿದಂತೆ ಭಾರತ ಹಾಗೂ ಕೆನಡಾ ನಡುವೆ ಉದ್ವಿಗ್ನತೆ ನಿರಂತರವಾಗಿ ಹೆಚ್ಚುತ್ತಿದೆ. ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಅದನ್ನು ಸಾಬೀತುಪಡಿಸಲು ವಿಶ್ವಾಸಾರ್ಹ ಸಾಕ್ಷಿಗಳು ನಮ್ಮ ಜತೆ ಇವೆ ಎಂದು ಹೇಳಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಟೊ ಆ ಸಾಕ್ಷ್ಯಗಳನ್ನು ಬಹಿರಂಗಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟ್​ಗಳು ಭಾಗಿಯಾಗಿದ್ದಾರೆ ಎಂದು ಗುರುವಾರ ಮತ್ತೊಮ್ಮೆ ಟ್ರುಡೊ ಆರೋಪಿಸಿದ್ದಾರೆ.

ನಿಜ್ಜರ್​ನನ್ನು ಕೆನಡಿಯನ್ ಎಂದು ಕರೆದಿರುವ ಟ್ರುಡೊ, ಕೆನಡಾದ ನೆಲದಲ್ಲಿ ಕೆನಡಾ ಪ್ರಜೆಯ ಪ್ರಜೆಯ ಹತ್ಯೆಯ ಹಿಂದೆ ಭಾರತ ಸರ್ಕಾರದ ಏಜೆಂಟರು ಭಾಗಿಯಾಗಿದ್ದಾರೆ ಎಂದು ನಂಬಲು ಅರ್ಹ ಕಾರಣಗಳಿವೆ ಎಂದರು. ಈ ವಿಚಾರದಲ್ಲಿ ಭಾರತ ಸರ್ಕಾರದ ಸಹಕಾರಕ್ಕೆ ಮನವಿ ಮಾಡಿದರು ಮತ್ತು ಕೆನಡಾ ಪ್ರಜೆಗಳನ್ನು ಸುರಕ್ಷಿತವಾಗಿಡುವುದಷ್ಟೇ ನನ್ನ ಗುರಿ ಎಂದಿದ್ದಾರೆ.

ನಾವು ನಮ್ಮ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ, ಯಾವುದೇ ದೇಶವು ತಮ್ಮ ಸ್ವಂತ ನೆಲದಲ್ಲಿ ನಾಗರಿಕರ ಹತ್ಯೆ ನಡೆಯುತ್ತಿದ್ದರೆ ನೋಡಿಕೊಂಡು ಸುಮ್ಮನಿರುವುದಿಲ್ಲ, ಅದು ಸ್ವೀಕಾರಾರ್ಹವಲ್ಲ ಎಂಬುದನ್ನು ನಾವು ಹೇಳಲು ಬಯಸುತ್ತಿದ್ದೇವೆ.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಈ ವಿಚಾರವಾಗಿ ನೇರ ಮಾತುಕತೆ ನಡೆಸಿದ್ದೇನೆ, ನನಗಿರುವ ಕಳವಳವನ್ನು ಹೇಳಿಕೊಂಡಿದ್ದೇನೆ ಎಂದು ಹೇಳಿದರು.

ಮತ್ತಷ್ಟು ಓದಿ: ಖಲಿಸ್ತಾನಿಗಳು ಕೆನಡಾದಲ್ಲಿ ಹಿಂದೂ ಹಾಗೂ ಸಿಖ್ಖರನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿದ್ದಾರೆ: ಕೆನಡಾ ಸಂಸದ ಚಂದ್ರ ಆರ್ಯ

ವಿಶ್ವದಲ್ಲಿ ಭಾರತದ ಪ್ರಾಮುಖ್ಯತೆ ಬೆಳೆಯುತ್ತಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ನಾವು ಪ್ರಚೋದಿಸಲು ಅಥವಾ ಸಮಸ್ಯೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತಿಲ್ಲ, ಕೆನಡಾದ ಜನರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದೇನೆ.

ಭಾರತ ಕೆನಡಾದ ನಾಗರಿಕರಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಹಿನ್ನೆಲೆ ಭಾರತ-ಕೆನಡಾ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ.

ನಮ್ಮ ಮೇಲೆ ಸುಳ್ಳು ಆಪಾದನೆ ಮಾಡಬೇಡಿ, ಸಾಕ್ಷ್ಯಗಳಿದ್ದರೆ ನೀಡಿ, ಆದರೆ ಇಲ್ಲಸಲ್ಲದ್ದನ್ನು ಹೇಳಿಕೊಳ್ಳುತ್ತಾ ತಿರುಗಾಡಬೇಡಿ ಎಂದು ಕೆನಡಾಗೆ ಭಾರತ ಹೇಳಿದೆ.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರದ ಬಗ್ಗೆ ಕೆನಡಾ ನಡೆಸಿದ ತನಿಖೆಯನ್ನು ಮುಕ್ತಾಯಗೊಳಿಸಲು ಭಾರತ ತನಿಕೆಗೆ ಸಹಕರಿಸಬೇಕು ಎಂದು ಆಸ್ಟ್ರೇಲಿಯಾ ಮತ್ತು ಅಮೆರಿಕ ಒತ್ತಿಹೇಳಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:31 am, Fri, 22 September 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ