AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, 19 ಜನ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ
ಕಾಬೂಲ್ ಸ್ಫೋಟ
TV9 Web
| Edited By: |

Updated on:Nov 02, 2021 | 5:47 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಅಫ್ಘಾನ್​ನ ಅತಿ ದೊಡ್ಡ ಮಿಲಿಟರಿ ಆಸ್ಪತ್ರೆಯ ಬಳಿ ಎರಡು ಸ್ಫೋಟಗಳು ಸಂಭವಿಸಿದೆ. ಈ ಘಟನೆಯಲ್ಲಿ 19 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಲಿಬಾನ್ ಸರ್ಕಾರದ ವಕ್ತಾರ ಖಾರಿ ಸಯೀದ್ ಖೋಸ್ಟಿ ನೀಡಿರುವ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದ ಅತಿ ದೊಡ್ಡ ಆಸ್ಪತ್ರೆಯಾದ 400 ಬೆಡ್​ಗಳ ವ್ಯವಸ್ಥೆಯಿರುವ ಸರ್ದಾರ್ ಮೊಹಮ್ಮದ್ ದೌದ್​ ಖಾನ್ ಆಸ್ಪತ್ರೆಯ ಪ್ರವೇಶದ್ವಾರದ ಬಳಿ ಒಂದು ಸ್ಫೋಟ ಸಂಭವಿಸಿದೆ. ಈ ಭಾಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಭಾರೀ ಸ್ಫೋಟದಿಂದ ಅಫ್ಘಾನ್ ಮಿಲಿಟರಿ ಆಸ್ಪತ್ರೆ ಸುತ್ತಲೂ ದಟ್ಟ ಹೊಗೆ ತುಂಬಿಕೊಂಡಿದೆ. ಈ ಸ್ಫೋಟಗಳ ಹೊಣೆಯನ್ನು ಯಾವುದೇ ಸಂಘಟನೆಗಳೂ ಹೊತ್ತುಕೊಂಡಿಲ್ಲ. ಈ ದಾಳಿಯ ಉದ್ದೇಶ ಮತ್ತು ಕೈವಾಡದ ಬಗ್ಗೆ ತನಿಖೆಯ ಬಳಿಕಷ್ಟೇ ತಿಳಿಯಲಿದೆ. ಈ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ. ಎರಡನೇ ಸ್ಫೋಟವೂ ಇದೇ ಆಸ್ಪತ್ರೆಯ ಸಮೀಪ ಸಂಭವಿಸಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ

Published On - 4:32 pm, Tue, 2 November 21

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್