AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, 19 ಜನ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ
ಕಾಬೂಲ್ ಸ್ಫೋಟ
TV9 Web
| Updated By: ಸುಷ್ಮಾ ಚಕ್ರೆ|

Updated on:Nov 02, 2021 | 5:47 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಅಫ್ಘಾನ್​ನ ಅತಿ ದೊಡ್ಡ ಮಿಲಿಟರಿ ಆಸ್ಪತ್ರೆಯ ಬಳಿ ಎರಡು ಸ್ಫೋಟಗಳು ಸಂಭವಿಸಿದೆ. ಈ ಘಟನೆಯಲ್ಲಿ 19 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಲಿಬಾನ್ ಸರ್ಕಾರದ ವಕ್ತಾರ ಖಾರಿ ಸಯೀದ್ ಖೋಸ್ಟಿ ನೀಡಿರುವ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದ ಅತಿ ದೊಡ್ಡ ಆಸ್ಪತ್ರೆಯಾದ 400 ಬೆಡ್​ಗಳ ವ್ಯವಸ್ಥೆಯಿರುವ ಸರ್ದಾರ್ ಮೊಹಮ್ಮದ್ ದೌದ್​ ಖಾನ್ ಆಸ್ಪತ್ರೆಯ ಪ್ರವೇಶದ್ವಾರದ ಬಳಿ ಒಂದು ಸ್ಫೋಟ ಸಂಭವಿಸಿದೆ. ಈ ಭಾಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಭಾರೀ ಸ್ಫೋಟದಿಂದ ಅಫ್ಘಾನ್ ಮಿಲಿಟರಿ ಆಸ್ಪತ್ರೆ ಸುತ್ತಲೂ ದಟ್ಟ ಹೊಗೆ ತುಂಬಿಕೊಂಡಿದೆ. ಈ ಸ್ಫೋಟಗಳ ಹೊಣೆಯನ್ನು ಯಾವುದೇ ಸಂಘಟನೆಗಳೂ ಹೊತ್ತುಕೊಂಡಿಲ್ಲ. ಈ ದಾಳಿಯ ಉದ್ದೇಶ ಮತ್ತು ಕೈವಾಡದ ಬಗ್ಗೆ ತನಿಖೆಯ ಬಳಿಕಷ್ಟೇ ತಿಳಿಯಲಿದೆ. ಈ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ. ಎರಡನೇ ಸ್ಫೋಟವೂ ಇದೇ ಆಸ್ಪತ್ರೆಯ ಸಮೀಪ ಸಂಭವಿಸಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ

Published On - 4:32 pm, Tue, 2 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ