AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, 19 ಜನ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ
ಕಾಬೂಲ್ ಸ್ಫೋಟ
TV9 Web
| Edited By: |

Updated on:Nov 02, 2021 | 5:47 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಅಫ್ಘಾನ್​ನ ಅತಿ ದೊಡ್ಡ ಮಿಲಿಟರಿ ಆಸ್ಪತ್ರೆಯ ಬಳಿ ಎರಡು ಸ್ಫೋಟಗಳು ಸಂಭವಿಸಿದೆ. ಈ ಘಟನೆಯಲ್ಲಿ 19 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಲಿಬಾನ್ ಸರ್ಕಾರದ ವಕ್ತಾರ ಖಾರಿ ಸಯೀದ್ ಖೋಸ್ಟಿ ನೀಡಿರುವ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದ ಅತಿ ದೊಡ್ಡ ಆಸ್ಪತ್ರೆಯಾದ 400 ಬೆಡ್​ಗಳ ವ್ಯವಸ್ಥೆಯಿರುವ ಸರ್ದಾರ್ ಮೊಹಮ್ಮದ್ ದೌದ್​ ಖಾನ್ ಆಸ್ಪತ್ರೆಯ ಪ್ರವೇಶದ್ವಾರದ ಬಳಿ ಒಂದು ಸ್ಫೋಟ ಸಂಭವಿಸಿದೆ. ಈ ಭಾಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಭಾರೀ ಸ್ಫೋಟದಿಂದ ಅಫ್ಘಾನ್ ಮಿಲಿಟರಿ ಆಸ್ಪತ್ರೆ ಸುತ್ತಲೂ ದಟ್ಟ ಹೊಗೆ ತುಂಬಿಕೊಂಡಿದೆ. ಈ ಸ್ಫೋಟಗಳ ಹೊಣೆಯನ್ನು ಯಾವುದೇ ಸಂಘಟನೆಗಳೂ ಹೊತ್ತುಕೊಂಡಿಲ್ಲ. ಈ ದಾಳಿಯ ಉದ್ದೇಶ ಮತ್ತು ಕೈವಾಡದ ಬಗ್ಗೆ ತನಿಖೆಯ ಬಳಿಕಷ್ಟೇ ತಿಳಿಯಲಿದೆ. ಈ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ. ಎರಡನೇ ಸ್ಫೋಟವೂ ಇದೇ ಆಸ್ಪತ್ರೆಯ ಸಮೀಪ ಸಂಭವಿಸಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ

Published On - 4:32 pm, Tue, 2 November 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!