AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, 19 ಜನ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 19 ಜನ ಸಾವು, 50 ಮಂದಿಗೆ ಗಾಯ
ಕಾಬೂಲ್ ಸ್ಫೋಟ
TV9 Web
| Edited By: |

Updated on:Nov 02, 2021 | 5:47 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಅಫ್ಘಾನ್​ನ ಅತಿ ದೊಡ್ಡ ಮಿಲಿಟರಿ ಆಸ್ಪತ್ರೆಯ ಬಳಿ ಎರಡು ಸ್ಫೋಟಗಳು ಸಂಭವಿಸಿದೆ. ಈ ಘಟನೆಯಲ್ಲಿ 19 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಲಿಬಾನ್ ಸರ್ಕಾರದ ವಕ್ತಾರ ಖಾರಿ ಸಯೀದ್ ಖೋಸ್ಟಿ ನೀಡಿರುವ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದ ಅತಿ ದೊಡ್ಡ ಆಸ್ಪತ್ರೆಯಾದ 400 ಬೆಡ್​ಗಳ ವ್ಯವಸ್ಥೆಯಿರುವ ಸರ್ದಾರ್ ಮೊಹಮ್ಮದ್ ದೌದ್​ ಖಾನ್ ಆಸ್ಪತ್ರೆಯ ಪ್ರವೇಶದ್ವಾರದ ಬಳಿ ಒಂದು ಸ್ಫೋಟ ಸಂಭವಿಸಿದೆ. ಈ ಭಾಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಭಾರೀ ಸ್ಫೋಟದಿಂದ ಅಫ್ಘಾನ್ ಮಿಲಿಟರಿ ಆಸ್ಪತ್ರೆ ಸುತ್ತಲೂ ದಟ್ಟ ಹೊಗೆ ತುಂಬಿಕೊಂಡಿದೆ. ಈ ಸ್ಫೋಟಗಳ ಹೊಣೆಯನ್ನು ಯಾವುದೇ ಸಂಘಟನೆಗಳೂ ಹೊತ್ತುಕೊಂಡಿಲ್ಲ. ಈ ದಾಳಿಯ ಉದ್ದೇಶ ಮತ್ತು ಕೈವಾಡದ ಬಗ್ಗೆ ತನಿಖೆಯ ಬಳಿಕಷ್ಟೇ ತಿಳಿಯಲಿದೆ. ಈ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ. ಎರಡನೇ ಸ್ಫೋಟವೂ ಇದೇ ಆಸ್ಪತ್ರೆಯ ಸಮೀಪ ಸಂಭವಿಸಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ

Published On - 4:32 pm, Tue, 2 November 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್